AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್ ಅವಘಡದಿಂದ ಪಾರಾದ ಬೆನ್ನಲ್ಲೇ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್, ​ಜ್ಯೋತಿಷಿ ಹೇಳಿದ್ದೇನು?

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್​ ಯಾವುದೇ ಅನಾಹುತ ಸಂಭವಿಸಿಲ್ಲ. ಗಂಡಾಂತರದಿಂದ ಪಾರಾಗಿರುವ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮೊರೆ ಹೋಗಿದ್ದಾರೆ. ಇನ್ನು ಡಿಕ್ಕಿ ಹೊಡೆದಿದ್ದ ಹದ್ದು ಸತ್ತಿರುವುದಕ್ಕೆ ಜ್ಯೋತಿಷಿ ಹೇಳುವುದೇನು?

ಹೆಲಿಕಾಪ್ಟರ್ ಅವಘಡದಿಂದ ಪಾರಾದ ಬೆನ್ನಲ್ಲೇ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್, ​ಜ್ಯೋತಿಷಿ ಹೇಳಿದ್ದೇನು?
ರಮೇಶ್ ಬಿ. ಜವಳಗೇರಾ
|

Updated on: May 03, 2023 | 12:09 PM

Share

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರು ದೈವ ಭಕ್ತರಾಗಿದ್ದು, ಒಂದಲ್ಲ ಒಂದು ಸಂಕಷ್ಟಗಳಿಂದ ಪಾರಾದ ಬಳಿಕ ಅವರು ಮೊದಲು ದೇವರ ಮೊರೆ ಹೋಗುತ್ತಾರೆ. ಈ ಹಿಂದೆ ಹವಾಲ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಸಿಕ್ಕ ಬೆನ್ನಲ್ಲೇ ಗಾಣಗಾಪುರದ ದತ್ತಾತ್ರೇಯನ ಆಶೀರ್ವಾದ ಪಡೆದುಕೊಂಡಿದ್ದು. ಅಲ್ಲದೇ ಮೊನ್ನೇ ಅಷ್ಟೇ ನಾಪಮತ್ರ ತಿರಸ್ಕೃತ ಆತಂಕ ದೂರುವಾದ ಬಳಿಕ ಅವರು ದೇವರ ಮೊರೆ ಹೋಗಿದ್ದರು. ಹೀಗೆ ಸಂಕಷ್ಟಗಳಿಂದ ಪಾರಾದ ಬಳಿಕ ಡಿಕೆ ಶಿವಕುಮಾರ್ ದೇವಸ್ಥಾನಗಳಿಗೆ ಹೋಗಿರುವ ಹಲವು ಉದಾಹರಣೆಗಳು ಇವೆ. ಅದರಂತೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ​ಹೆಲಿಕಾಪ್ಟರ್ ಅವಘಡದಿಂದ ಪಾರಾಗುತ್ತಿದ್ದಂತೆಯೇ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿದ್ದಾರೆ. ಅಲ್ಲದೇ ಜ್ಯೋತಿಷಿ ರಾಜಗುರು ದ್ವಾರಕನಾಥ್ ಅವರು ಕೆಲ ಸಲಹೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಹದ್ದು ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

ಹೌದು..ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಡಿ.ಕೆ. ಶಿವಕುಮಾರ್ ಸೇರಿದಂತೆ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಇಂದು ತುಮಕೂರು ಜಿಲ್ಲೆಯ ತುರುವೇಕೆರೆ ಬಳಿ ಇರುವ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದು, ನೊಣವಿನಕೆರೆ ಅಜ್ಜಯ್ಯನ ಆಶೀರ್ವಾದ ಪಡೆದುಕೊಂಡರು.

ನಿನ್ನೆ(ಏಪ್ರಿಲ್ 03) ಡಿಕೆ ಶಿವಕುಮಾರ್ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಮುಳಬಾಗಿಲುಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕೆ ಹೊಡೆದಿತ್ತು. ಪರಿಣಾಮ ಹೆಲಿಕಾಪ್ಟರ್​ ಮುಂಭಾಗದ ಗಾಜು ಪುಡಿಪುಡಿಯಾಗಿತ್ತು. ಆದ್ರೆ, ಅದೃಷ್ಟವಶಾತ್​ ಆಗಸದಲ್ಲಿ ಹೆಲಿಕಾಪ್ಟರ್​ನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಗ್ರೇಟ್​ ಎಸ್ಕೇಪ್​ ಆಗಿದ್ದರಿಂದ ಡಿಕೆ ಶಿವಕುಮಾರ್​ ಅಜ್ಜಯ್ಯನ ಮೊರೆ ಹೋಗಿದ್ದಾರೆ.

ಜ್ಯೋತಿಷಿ ರಾಜಗುರು ದ್ವಾರಕನಾಥ್ ಹೇಳಿದ್ದೇನು?

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್, ಅವರ ಪತ್ನಿಯ ಗ್ರಹ ಗತಿ ಚೆನ್ನಾಗಿರುವುದರಿಂದ ಡಿಕೆ ಶಿವಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಸದ್ಯ ಗುರುಬಲ, ಶನಿ ಬಲ ಎರಡೂ ಇಲ್ಲ. ಆದರೆ, ಅವರ ಪತ್ನಿ ಉಷಾ ಅವರ ಗ್ರಹ ಗತಿ ಚೆನ್ನಾಗಿದ್ದು, ಆ ದೈವ ಬಲ ಶಿವಕುಮಾರ್ ಅವರನ್ನು ಕಾಪಾಡುತ್ತಿದೆ ಎಂದಿದ್ದಾರೆ.

ಹೆಲಿಕಾಪ್ಟರ್ ಗೆ ಕುಕ್ಕಿದ ರಣ ಹದ್ದು ಮೃತಪಟ್ಟಿದೆ. ಹೀಗಾಗಿ ಪಂಚ ಪಕ್ಷಿ ಶಾಸ್ತ್ರ ಪರಿಣಿತ ಗಜೇಂದ್ರ ಅವರೊಂದಿಗೆ ಚರ್ಚೆ ನಡೆಸಿದ್ದು, ಶಾಸ್ತ್ರದ ಅನುಸಾರ ದೋಷ ಪರಿಹಾರಕ್ಕೆ ಬೆಂಗಳೂರಿನ ಅಲಸೂರಿನಲ್ಲಿರುವ ಸಾವಿರ ವರ್ಷ ಹಳೆಯ ಸೋಮೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಮಾಡಿಸಬೇಕು. ಕುಕ್ಕೆ ಸುಬ್ರಹ್ಮಣ್ಯಕ್ಕೆ 22 ದಿನಗಳ ಒಳಗೆ ಭೇಟಿ ನೀಡಬೇಕು. ಘಟನೆಯನ್ನು ಹಗುರವಾಗಿ ಪರಿಗಣಿಸದೇ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಡಿಕೆ ಶಿವಕುಮಾರ್​​ ಮುನ್ನಡೆಯಬೇಕು ಎಂದು ರಾಜಗುರು ದ್ವಾರಕನಾಥ್ ಸಲಹೆ ನೀಡಿದ್ದಾರೆ.

ಈ ಹಿಂದೆಯೂ ಅಜ್ಜಯ್ಯನ ಮೊರೆ ಹೋಗಿದ್ದ ಡಿಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷರಾದರೂ ಹೈಕಮಾಂಡ್ ಅಧ್ಯಕ್ಷಗಿರಿಗೆ ಹಸಿರು ನಿಶಾನೆ ತೋರಿಸಿದ್ದರೂ ಸಹ ಡಿ.ಕೆ.ಶಿವಕುಮಾರ್ ಗೆ ಅಧಿಕೃತವಾಗಿ ಪದಗ್ರಹಣ ಮಾಡಿಕೊಳ್ಳಲು ಸಾಧ್ಯವಾಗಿದ್ದಿಲ್ಲ. ಮೂರು ಬಾರಿ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾದರೂ ಸಹ ಒಂದಲ್ಲ ಒಂದು ಕಾರಣಕ್ಕಾಗಿ ಅದು ಮುಂದೂಡಲ್ಪಟ್ಟಿತ್ತು. ಹೀಗಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಎದುರಾಗಿರುವ ಅಡೆತಡೆ ನಿವಾರಣೆಗೆ ಡಿ.ಕೆ.ಶಿವಕುಮಾರ್ , ತುಮಕೂರಿನ ಕಾಡುಸಿದ್ದೇಶ್ವರ ಮಠದ ಅಜ್ಜಯ್ಯನ ಸಲಹೆಯಂತೆ ಶಿವನ ದರ್ಶನ ಪಡೆದಿದ್ದರು.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ