AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಪಕ್ಷಕ್ಕೆ ನಿಷ್ಠರನ್ನು ಹೈಕಮಾಂಡ್ ಕೈಬಿಟ್ಟಿಲ್ಲ; ಡಿಕೆ ಶಿವಕುಮಾರ್ ಹೇಳಿಕೆ ಮರ್ಮವೇನು?

ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ಯಾರು ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ಭಿನ್ನಮತ ಇದೆ ಎಂಬ ಆರೋಪಗಳನ್ನು ತಳ್ಳಿ ಹಾಕಿರುವ ಡಿಕೆ ಶಿವಕುಮಾರ್ ಹೈಕಮಾಂಡ್​ ತಮ್ಮನ್ನೇ ಪರಿಗಣಿಸಬಹುದು ಎಂಬರ್ಥದ ಹೇಳಿಕೆ ನೀಡಿದ್ದಾರೆ.

DK Shivakumar: ಪಕ್ಷಕ್ಕೆ ನಿಷ್ಠರನ್ನು ಹೈಕಮಾಂಡ್ ಕೈಬಿಟ್ಟಿಲ್ಲ; ಡಿಕೆ ಶಿವಕುಮಾರ್ ಹೇಳಿಕೆ ಮರ್ಮವೇನು?
ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: Apr 06, 2023 | 3:46 PM

Share

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಜಯ ಗಳಿಸಿದರೆ ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ ಮಧ್ಯೆ ಪೈಪೋಟಿ ಏರ್ಪಡುವ ಸಾಧ್ಯತೆ ದಟ್ಟವಾಗಿದೆ. ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಎಂಬುದನ್ನು ಇಬ್ಬರೂ ನಾಯಕರು ಕೆಲವು ಬಾರಿ ಬಹಿರಂಗವಾಗಿಯೇ ಹೇಳಿದ್ದಾರೆ. ಇತ್ತೀಚೆಗಷ್ಟೇ ಈ ಕುರಿತು ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಾವಿಬ್ಬರೂ ಆಕಾಂಕ್ಷಿಗಳು ನಿಜ. ಆದರೆ ಅಂತಿಮವಾಗಿ ಚುನಾಯಿತ ಶಾಸಕರು, ಹೈಕಮಾಂಡ್ ಮುಖ್ಯಮಂತ್ರಿಯ ಆಯ್ಕೆ ಮಾಡಲಿದೆ ಎಂದು ಹೇಳಿದ್ದರು. ಇದೀಗ ಈ ವಿಚಾರವಾಗಿ ಹೇಳಿಕೆ ನೀಡಿರುವ ಡಿಕೆ ಶಿವಕುಮಾರ್, ತಾವು ಪಕ್ಷಕ್ಕೆ ನಿಷ್ಠರಾಗಿರುವುದಾಗಿಯೂ ತಮ್ಮಂಥವರನ್ನು ಹೈಕಮಾಂಡ್ ಕೈಬಿಡುವುದಿಲ್ಲ ಎಂದಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಗಾದಿಗೆ ಹೈಕಮಾಂಡ್ ತಮ್ಮನ್ನೇ ಆಯ್ಕೆ ಮಾಡಬಹುದು ಎಂಬ ಭರವಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ಯಾರು ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ಭಿನ್ನಮತ ಇದೆ ಎಂಬ ಆರೋಪಗಳನ್ನು ತಳ್ಳಿ ಹಾಕಿರುವ ಡಿಕೆ ಶಿವಕುಮಾರ್, ಪಕ್ಷವು ನಿಷ್ಠರನ್ನು ಪರಿಗಣಿಸಲಿದೆ. ಈ ವಿಚಾರದಲ್ಲಿ ತಮಗೆ ಯಾವುದೇ ಅನುಮಾನಗಳಿಲ್ಲ ಎಂದು ‘ಎನ್​ಡಿ ಟಿವಿ’ಗೆ ಹೇಳಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದೀರಾ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ‘ನಾನು ಪಕ್ಷದ ನಿಷ್ಠಾವಂತ ವ್ಯಕ್ತಿ. ಎಂದಿಗೂ ಪಕ್ಷಕ್ಕೆ ದ್ರೋಹ ಬಗೆದಿಲ್ಲ. ಕರ್ನಾಟಕವನ್ನು ಗೆದ್ದು ಹೈಕಮಾಂಡ್​ಗೆ ಬಿಡಲಿದ್ದೇವೆ. ಹೈಕಮಾಂಡ್ ಯಾವತ್ತಿಗೂ ಪಕ್ಷದ ಪರ ನಿಂತವರ ಬೆಂಬಲಕ್ಕೆ ನಿಂತಿದೆ. ನಮಗೆ ಹೈಕಮಾಂಡ್ ಮೇಲೆ ನಂಬಿಕೆ ಇದೆ. ಪಕ್ಷದ ನಾಯಕತ್ವದ ಮೇಲೆ ವಿಶ್ವಾಸ ಇದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸ್ಪಷ್ಟನೆ : ಡಿಕೆ ಶಿವಕುಮಾರ್​ ಅವರನ್ನು ಹೈಕಮಾಂಡ್​ ಸಿಎಂ ಮಾಡಲ್ಲ ಎಂದು ನಾನು ಹೇಳಿಲ್ಲ

‘ನಾನು ನಿದ್ದೆ ಮಾಡಿಲ್ಲ ಮತ್ತು ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರಯಾಣಿಸಿ ಪ್ರಚಾರದಲ್ಲಿ ತೊಡಗಿಕೊಂಡಿದ್ದೇನೆ. ಎಲ್ಲವನ್ನೂ ಒಮ್ಮತದೊಂದಿಗೆ ಮುನ್ನಡೆಸಿದ್ದೇನೆ. ನಾವು ಬಿಜೆಪಿ ವಿರುದ್ಧ ಪ್ರಬಲ ಸಂಘಟನೆ ಕಟ್ಟಿದ್ದೇವೆ’ ಎಂದೂ ಅವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ಆಂತರಿಕ ಕಲಹ ಮತ್ತು ಪೈಪೋಟಿಯ ವರದಿಗಳನ್ನು ಡಿಕೆಶಿ ತಳ್ಳಿಹಾಕಿದ್ದಾರೆ. ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯವರು ಕಿಡಿಗೇಡಿತನ ಮಾಡುತ್ತಿದ್ದು, ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ನಾವೆಲ್ಲರೂ ಒಟ್ಟಿಗೆ ಇದ್ದೇವೆ. ಬಿಜೆಪಿಯನ್ನು ಸೋಲಿಸಿ ಕರ್ನಾಟಕದ ಘನತೆಯನ್ನು ಮರುಸ್ಥಾಪಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್