AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಮತ್ತೆ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್

ಬೆಂಗಳೂರಿನ ವಿಜಯನಗರದಲ್ಲಿರುವ, ನೊಣವಿನಕೆರೆ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್, ಅಜ್ಜಯ್ಯನ ಪಾದುಕೆ ಮುಂದೆ ಸುಮಾರು ಅರ್ಧ ಗಂಟೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಆ ನಂತರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಗೆ ತೆರಳಿದ್ದಾರೆ.

DK Shivakumar: ಮತ್ತೆ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: May 15, 2023 | 6:32 PM

Share

ಬೆಂಗಳೂರು: ದೈವ ಭಕ್ತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ನೊಣವಿನಕೆರೆ ಅಜ್ಜಯ್ಯನನ್ನು ಬಹಳ ಭಕ್ತಿ ಭಾವದಿಂದ ಕಾಣುತ್ತಾರೆ. ಒಂದಲ್ಲ ಒಂದು ಸಂಕಷ್ಟಗಳಿಂದ ಪಾರಾದ ಬಳಿಕ ಮೊದಲು ದೇವರ ಮೊರೆ ಹೋಗುವ ಅವರು, ಹಲವು ಬಾರಿ ನೊಣವಿನಕೆರೆ ಅಜ್ಜಯ್ಯನ ಭೇಟಿ ಮಾಡಿದ್ದೂ ಇದೆ. ಇತ್ತೀಚೆಗಷ್ಟೇ ಹೆಲಿಕಾಪ್ಟರ್ ಅವಘಡದಿಂದ ಪಾರಾದ ನಂತರ ಅವರು ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿ, ಜ್ಯೋತಿಷಿಯ ಸಲಹೆಯನ್ನೂ ಪಡೆದಿದ್ದರು. ಇದೀಗ ಮುಖ್ಯಮಂತ್ರಿ ಹುದ್ದೆ ಕೈತಪ್ಪುವ ಭೀತಿಯಲ್ಲಿ ಮತ್ತೆ ಅಜ್ಜಯ್ಯನ ಮೊರೆ ಹೋಗಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ, ನೊಣವಿನಕೆರೆ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್, ಅಜ್ಜಯ್ಯನ ಪಾದುಕೆ ಮುಂದೆ ಸುಮಾರು ಅರ್ಧ ಗಂಟೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಆ ನಂತರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಗೆ ತೆರಳಿದ್ದಾರೆ. ಕುಟುಂಬ ಸಮೇತ ಅಜ್ಜಯ್ಯನ ಪೀಠಕ್ಕೆ ತೆರಳುತ್ತಿರುವ ಡಿಕೆಶಿ, ಅಲ್ಲಿ ಅಜ್ಜಯ್ಯನ ದರ್ಶನ ಪಡೆದು ಬಳಿಕ ದೆಹಲಿಗೆ ತೆರಳಲಿದ್ದಾರೆ.

ಈ ಮಧ್ಯೆ, ಎಐಸಿಸಿ ವೀಕ್ಷಕರಾದ ಶಿಂಧೆ, ಜಿತೇಂದ್ರ ಸಿಂಗ್, ಬಬಾರಿಯಾ ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ಶಾಸಕರ ಅಭಿಪ್ರಾಯದ ವರದಿ ಸಲ್ಲಿಸಲಿದ್ದಾರೆ.

ಡಿಕೆ ಶಿವಕುಮಾರ್ ಮುಂದಿನ ಸಿಎಂ; ಅಭಿಮಾನಿಗಳ ಘೋಷಣೆ

ಈ ಮಧ್ಯೆ ಬೆಂಗಳೂರಿನ ಟೌನ್​ಹಾಲ್ ಬಳಿ ಡಿಕೆ ಶಿವಕುಮಾರ್ ಬೆಂಬಲಿಗರು ಜಮಾಯಿಸಿದ್ದು, ಡಿಕೆಶಿ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ. ನಮ್ಮ ಬೆಂಬಲ ಡಿಕೆ ಶಿವಕುಮಾರ್ ಅವರಿಗೆ ಎಂದು ಘೋಷಣೆ ಕೂಗಿದ ಅವರು, ಕೇಕ್ ಕತ್ತರಿಸುವ ಮೂಲಕ ಡಿಕೆಶಿ ಹುಟ್ಟು ಹಬ್ಬ ಆಚರಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್