AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಮತ್ತೆ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್

ಬೆಂಗಳೂರಿನ ವಿಜಯನಗರದಲ್ಲಿರುವ, ನೊಣವಿನಕೆರೆ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್, ಅಜ್ಜಯ್ಯನ ಪಾದುಕೆ ಮುಂದೆ ಸುಮಾರು ಅರ್ಧ ಗಂಟೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಆ ನಂತರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಗೆ ತೆರಳಿದ್ದಾರೆ.

DK Shivakumar: ಮತ್ತೆ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: May 15, 2023 | 6:32 PM

Share

ಬೆಂಗಳೂರು: ದೈವ ಭಕ್ತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ನೊಣವಿನಕೆರೆ ಅಜ್ಜಯ್ಯನನ್ನು ಬಹಳ ಭಕ್ತಿ ಭಾವದಿಂದ ಕಾಣುತ್ತಾರೆ. ಒಂದಲ್ಲ ಒಂದು ಸಂಕಷ್ಟಗಳಿಂದ ಪಾರಾದ ಬಳಿಕ ಮೊದಲು ದೇವರ ಮೊರೆ ಹೋಗುವ ಅವರು, ಹಲವು ಬಾರಿ ನೊಣವಿನಕೆರೆ ಅಜ್ಜಯ್ಯನ ಭೇಟಿ ಮಾಡಿದ್ದೂ ಇದೆ. ಇತ್ತೀಚೆಗಷ್ಟೇ ಹೆಲಿಕಾಪ್ಟರ್ ಅವಘಡದಿಂದ ಪಾರಾದ ನಂತರ ಅವರು ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿ, ಜ್ಯೋತಿಷಿಯ ಸಲಹೆಯನ್ನೂ ಪಡೆದಿದ್ದರು. ಇದೀಗ ಮುಖ್ಯಮಂತ್ರಿ ಹುದ್ದೆ ಕೈತಪ್ಪುವ ಭೀತಿಯಲ್ಲಿ ಮತ್ತೆ ಅಜ್ಜಯ್ಯನ ಮೊರೆ ಹೋಗಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ, ನೊಣವಿನಕೆರೆ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್, ಅಜ್ಜಯ್ಯನ ಪಾದುಕೆ ಮುಂದೆ ಸುಮಾರು ಅರ್ಧ ಗಂಟೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಆ ನಂತರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಗೆ ತೆರಳಿದ್ದಾರೆ. ಕುಟುಂಬ ಸಮೇತ ಅಜ್ಜಯ್ಯನ ಪೀಠಕ್ಕೆ ತೆರಳುತ್ತಿರುವ ಡಿಕೆಶಿ, ಅಲ್ಲಿ ಅಜ್ಜಯ್ಯನ ದರ್ಶನ ಪಡೆದು ಬಳಿಕ ದೆಹಲಿಗೆ ತೆರಳಲಿದ್ದಾರೆ.

ಈ ಮಧ್ಯೆ, ಎಐಸಿಸಿ ವೀಕ್ಷಕರಾದ ಶಿಂಧೆ, ಜಿತೇಂದ್ರ ಸಿಂಗ್, ಬಬಾರಿಯಾ ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ಶಾಸಕರ ಅಭಿಪ್ರಾಯದ ವರದಿ ಸಲ್ಲಿಸಲಿದ್ದಾರೆ.

ಡಿಕೆ ಶಿವಕುಮಾರ್ ಮುಂದಿನ ಸಿಎಂ; ಅಭಿಮಾನಿಗಳ ಘೋಷಣೆ

ಈ ಮಧ್ಯೆ ಬೆಂಗಳೂರಿನ ಟೌನ್​ಹಾಲ್ ಬಳಿ ಡಿಕೆ ಶಿವಕುಮಾರ್ ಬೆಂಬಲಿಗರು ಜಮಾಯಿಸಿದ್ದು, ಡಿಕೆಶಿ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ. ನಮ್ಮ ಬೆಂಬಲ ಡಿಕೆ ಶಿವಕುಮಾರ್ ಅವರಿಗೆ ಎಂದು ಘೋಷಣೆ ಕೂಗಿದ ಅವರು, ಕೇಕ್ ಕತ್ತರಿಸುವ ಮೂಲಕ ಡಿಕೆಶಿ ಹುಟ್ಟು ಹಬ್ಬ ಆಚರಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು