AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಮತ್ತೆ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್

ಬೆಂಗಳೂರಿನ ವಿಜಯನಗರದಲ್ಲಿರುವ, ನೊಣವಿನಕೆರೆ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್, ಅಜ್ಜಯ್ಯನ ಪಾದುಕೆ ಮುಂದೆ ಸುಮಾರು ಅರ್ಧ ಗಂಟೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಆ ನಂತರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಗೆ ತೆರಳಿದ್ದಾರೆ.

DK Shivakumar: ಮತ್ತೆ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Ganapathi Sharma
|

Updated on: May 15, 2023 | 6:32 PM

Share

ಬೆಂಗಳೂರು: ದೈವ ಭಕ್ತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ನೊಣವಿನಕೆರೆ ಅಜ್ಜಯ್ಯನನ್ನು ಬಹಳ ಭಕ್ತಿ ಭಾವದಿಂದ ಕಾಣುತ್ತಾರೆ. ಒಂದಲ್ಲ ಒಂದು ಸಂಕಷ್ಟಗಳಿಂದ ಪಾರಾದ ಬಳಿಕ ಮೊದಲು ದೇವರ ಮೊರೆ ಹೋಗುವ ಅವರು, ಹಲವು ಬಾರಿ ನೊಣವಿನಕೆರೆ ಅಜ್ಜಯ್ಯನ ಭೇಟಿ ಮಾಡಿದ್ದೂ ಇದೆ. ಇತ್ತೀಚೆಗಷ್ಟೇ ಹೆಲಿಕಾಪ್ಟರ್ ಅವಘಡದಿಂದ ಪಾರಾದ ನಂತರ ಅವರು ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿ, ಜ್ಯೋತಿಷಿಯ ಸಲಹೆಯನ್ನೂ ಪಡೆದಿದ್ದರು. ಇದೀಗ ಮುಖ್ಯಮಂತ್ರಿ ಹುದ್ದೆ ಕೈತಪ್ಪುವ ಭೀತಿಯಲ್ಲಿ ಮತ್ತೆ ಅಜ್ಜಯ್ಯನ ಮೊರೆ ಹೋಗಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ, ನೊಣವಿನಕೆರೆ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್, ಅಜ್ಜಯ್ಯನ ಪಾದುಕೆ ಮುಂದೆ ಸುಮಾರು ಅರ್ಧ ಗಂಟೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಆ ನಂತರ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಗೆ ತೆರಳಿದ್ದಾರೆ. ಕುಟುಂಬ ಸಮೇತ ಅಜ್ಜಯ್ಯನ ಪೀಠಕ್ಕೆ ತೆರಳುತ್ತಿರುವ ಡಿಕೆಶಿ, ಅಲ್ಲಿ ಅಜ್ಜಯ್ಯನ ದರ್ಶನ ಪಡೆದು ಬಳಿಕ ದೆಹಲಿಗೆ ತೆರಳಲಿದ್ದಾರೆ.

ಈ ಮಧ್ಯೆ, ಎಐಸಿಸಿ ವೀಕ್ಷಕರಾದ ಶಿಂಧೆ, ಜಿತೇಂದ್ರ ಸಿಂಗ್, ಬಬಾರಿಯಾ ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ಶಾಸಕರ ಅಭಿಪ್ರಾಯದ ವರದಿ ಸಲ್ಲಿಸಲಿದ್ದಾರೆ.

ಡಿಕೆ ಶಿವಕುಮಾರ್ ಮುಂದಿನ ಸಿಎಂ; ಅಭಿಮಾನಿಗಳ ಘೋಷಣೆ

ಈ ಮಧ್ಯೆ ಬೆಂಗಳೂರಿನ ಟೌನ್​ಹಾಲ್ ಬಳಿ ಡಿಕೆ ಶಿವಕುಮಾರ್ ಬೆಂಬಲಿಗರು ಜಮಾಯಿಸಿದ್ದು, ಡಿಕೆಶಿ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ. ನಮ್ಮ ಬೆಂಬಲ ಡಿಕೆ ಶಿವಕುಮಾರ್ ಅವರಿಗೆ ಎಂದು ಘೋಷಣೆ ಕೂಗಿದ ಅವರು, ಕೇಕ್ ಕತ್ತರಿಸುವ ಮೂಲಕ ಡಿಕೆಶಿ ಹುಟ್ಟು ಹಬ್ಬ ಆಚರಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?