ಎಚ್‌ಡಿಕೆ ಕೇಸರಿ ಶಾಲು ಹಾಕಬಾರದಿತ್ತು ಎಂದ ದೇವೇಗೌಡರ ಬಗ್ಗೆ ಡಿಕೆಶಿ ಹೇಳಿದ್ದಿಷ್ಟು

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಪ್ರತಿಭಟನೆ ವೇಳೆ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ ಕೇಸರಿ ಶಾಲು ಧರಿಸಿದ್ದು, ಇದಕ್ಕೆ ಸ್ವತಃ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ (HD Devegowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ದೇವೇಗೌಡರ ಸಿದ್ಧಾಂತವನ್ನು ಹತ್ತಿರದಿಂದ ನೋಡಿದ್ದೇನೆ ಎಂದು ಹೇಳುವ ಮೂಲಕ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಎಚ್‌ಡಿಕೆ ಕೇಸರಿ ಶಾಲು ಹಾಕಬಾರದಿತ್ತು ಎಂದ ದೇವೇಗೌಡರ ಬಗ್ಗೆ ಡಿಕೆಶಿ ಹೇಳಿದ್ದಿಷ್ಟು
ಡಿಕೆ ಶಿವಕುಮಾರ್, ಎಚ್​ಡಿ ದೇವೇಗೌಡ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Feb 02, 2024 | 8:57 PM

ಬೆಂಗಳೂರು,( ಫೆಬ್ರವರಿ, 02): ಎಚ್.ಡಿ. ಕುಮಾರಸ್ವಾಮಿ(HD Kumaraswamy) ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು (saffron shawl) ಹಾಕುವುದಿಲ್ಲ ಎಂಬ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೇಳಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರ ಸಿದ್ಧಾಂತವನ್ನು ಹತ್ತಿರದಿಂದ ನೋಡಿದ್ದೇನೆ. ಪಾಪ ವಯಸ್ಸಾದ ಕಾಲದಲ್ಲಿ ಅವರಿಗೆ ನೋವು ಕೊಟ್ಟಿದ್ದಾರೆ ಎಂದು ದೇವೇಗೌಡರ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ದೇವೇಗೌಡರ ಸಿದ್ಧಾಂತವನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲ ಮಾಡಬೇಕು. .ಪಾಪ ವಯಸ್ಸಾದ ಕಾಲದಲ್ಲಿ ಅವರಿಗೆ ಮನೆಯಲ್ಲಿ ಇಂತಹ ನೋವು ಕೊಟ್ಟಿದ್ದಾರೆ. ನಮಗು ಮಕ್ಕಳಿದ್ದಾರೆ. ವಯಸ್ಸಾದ ಕಾಲದಲ್ಲಿ ಏನಾಗುತ್ತೋ ಏನೋ ಭಯವಾಗುತ್ತಿದೆ ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ತಿವಿದಿದ್ದಾರೆ.

ಇದನ್ನೂ ಓದಿ: ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಹಾಕಿದ್ದನ್ನು ಪರೋಕ್ಷವಾಗಿ ಖಂಡಿಸಿದ ದೇವೇಗೌಡ

ಪರಿಸ್ಥಿತಿ ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗಬೇಕಾಗುವಂತೆ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದು ತಿಳಿಸಿದರು.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಕಾಂಗ್ರೆಸ್ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ್ದರು. ಅಲ್ಲದೇ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಚಲೋಗೆ ಕರೆಕೊಟ್ಟಿದ್ದವು. ಈ ವೇಳೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿಕೊಂಡು ಸಿದ್ದರಾಮಯ್ಯ ಸರ್ಕಾರ ವಿರುದ್ಧ ಗುಡುಗಿದ್ದರು.

ಆದ್ರೆ, ಜ್ಯಾತ್ಯಾತೀತತೆ, ರೈತರ ಪರ ಎನ್ನುವ ಕುಮಾರಸ್ವಾಮಿ ಹಸಿರು ಶಾಲು ತೆಗೆದು ಕೇಸರಿ ಶಾಲು ಹಾಕಲು ಶುರು ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡಿದ್ದರು. ಅಲ್ಲದೇ ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದನ್ನು ಸ್ವತ್ವ ಅವರ ತಂದೆ ದೇವೇಗೌಡ ಖಂಡಿಸಿದ್ದು, ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ