AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಸಿಎಂ ಮಾಡಿದ್ರೆ ವಾಪಸ್​​ ಬರುವುದಾಗಿ ಹೇಳಿದ್ದ ಶಾಸಕರು: ಸಮ್ಮಿಶ್ರ ಸರ್ಕಾರದ ಅವಧಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್

ನನ್ನ ಸಿಎಂ ಮಾಡಿದ್ರೆ ವಾಪಸ್​​ ಬರುವುದಾಗಿ ಮುಂಬೈಗೆ ತೆರಳಿದ್ದ ಶಾಸಕರು ಹೇಳಿದ್ದರು. ಮುಂಬೈನಲ್ಲಿದ್ದ ಎಸ್.ಟಿ.ಸೋಮಶೇಖರ್​, ಗೋಪಾಲಯ್ಯ ಹಾಗೆ ಹೇಳಿದ್ದರು. ಅಂದಿನ ಸಿಎಂ ಕುಮಾರಸ್ವಾಮಿಗೆ ಖುದ್ದು ಕರೆ ಮಾಡಿ ಹೇಳಿದ್ದರು ಎಂದು ಡಿಕೆ ಶಿವಕುಮಾರ್ ಬಹಿರಂಗಪಡಿಸಿದ್ದಾರೆ.

ನನ್ನನ್ನು ಸಿಎಂ ಮಾಡಿದ್ರೆ ವಾಪಸ್​​ ಬರುವುದಾಗಿ ಹೇಳಿದ್ದ ಶಾಸಕರು: ಸಮ್ಮಿಶ್ರ ಸರ್ಕಾರದ ಅವಧಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Nov 15, 2023 | 5:05 PM

Share

ಬೆಂಗಳೂರು, ನವೆಂಬರ್ 15: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಮತ್ತೊಂದಡೆ ಕಾಂಗ್ರೆಸ್ ಕೂಡ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದೆ. ಈ ಮಧ್ಯೆ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ಡಿಕೆ ಶಿವಕುಮಾರ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಕೆ ಶವಕುಮಾರ್, ‘ನನ್ನ ಸಿಎಂ ಮಾಡಿದ್ರೆ ವಾಪಸ್​​ ಬರುವುದಾಗಿ ಮುಂಬೈಗೆ ತೆರಳಿದ್ದ ಶಾಸಕರು ಹೇಳಿದ್ದರು. ಮುಂಬೈನಲ್ಲಿದ್ದ ಎಸ್.ಟಿ.ಸೋಮಶೇಖರ್​, ಗೋಪಾಲಯ್ಯ ಹಾಗೆ ಹೇಳಿದ್ದರು. ಅಂದಿನ ಸಿಎಂ ಕುಮಾರಸ್ವಾಮಿಗೆ ಖುದ್ದು ಕರೆ ಮಾಡಿ ಹೇಳಿದ್ದರು. ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ವಾಪಸ್​ ಬರುತ್ತೇವೆ ಎಂದು ಹೇಳಿದ್ದರು. ಆದರೆ, ಶಾಸಕರ ಬೇಡಿಕೆ ಬಗ್ಗೆ ಕುಮಾರಸ್ವಾಮಿ ಆಗ ಬಾಯಿ ಬಿಡಲೇ ಇಲ್ಲ’ ಎಂದು ಹೇಳಿದ್ದಾರೆ.

ಶಾಸಕರ ಬೇಡಿಕೆ ಬಗ್ಗೆ ಆಗ ಬಾಯಿ ಬಿಡದೇ ಇದ್ದ ಕುಮಾರಸ್ವಾಮಿ ಈಗ ಬೇಕಿದ್ದರೆ 19 ಶಾಸಕರು ಬೆಂಬಲ ಕೊಡ್ತೀವಿ ಎಂದು ಹೇಳ್ತಾರೆ. ಡಿ.ಕೆ.ಶಿವಕುಮಾರ್ ಸಿಎಂ ಆದರೆ ಬೆಂಬಲ ಕೊಡುತ್ತೇವೆ ಅಂತಾರೆ. ಹೆಚ್​.ಡಿ.ಕುಮಾರಸ್ವಾಮಿ ಮಾತನ್ನು ನಂಬುವುದಕ್ಕೆ ನಾವು ದಡ್ಡರಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮೋನಮಃ ಎಂದು ಯಾಕೆ ಹೇಳಿದರು?

ಕೆಲವು ದಿನಗಳ ಹಿಂದೆ, ಡಿ.ಕೆ.ಶಿವಕುಮಾರ್ ಸಿಎಂ ಆದರೆ ಬೆಂಬಲ ಕೊಡುತ್ತೇವೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​