ನನ್ನನ್ನು ಸಿಎಂ ಮಾಡಿದ್ರೆ ವಾಪಸ್​​ ಬರುವುದಾಗಿ ಹೇಳಿದ್ದ ಶಾಸಕರು: ಸಮ್ಮಿಶ್ರ ಸರ್ಕಾರದ ಅವಧಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್

ನನ್ನ ಸಿಎಂ ಮಾಡಿದ್ರೆ ವಾಪಸ್​​ ಬರುವುದಾಗಿ ಮುಂಬೈಗೆ ತೆರಳಿದ್ದ ಶಾಸಕರು ಹೇಳಿದ್ದರು. ಮುಂಬೈನಲ್ಲಿದ್ದ ಎಸ್.ಟಿ.ಸೋಮಶೇಖರ್​, ಗೋಪಾಲಯ್ಯ ಹಾಗೆ ಹೇಳಿದ್ದರು. ಅಂದಿನ ಸಿಎಂ ಕುಮಾರಸ್ವಾಮಿಗೆ ಖುದ್ದು ಕರೆ ಮಾಡಿ ಹೇಳಿದ್ದರು ಎಂದು ಡಿಕೆ ಶಿವಕುಮಾರ್ ಬಹಿರಂಗಪಡಿಸಿದ್ದಾರೆ.

ನನ್ನನ್ನು ಸಿಎಂ ಮಾಡಿದ್ರೆ ವಾಪಸ್​​ ಬರುವುದಾಗಿ ಹೇಳಿದ್ದ ಶಾಸಕರು: ಸಮ್ಮಿಶ್ರ ಸರ್ಕಾರದ ಅವಧಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Edited By:

Updated on: Nov 15, 2023 | 5:05 PM

ಬೆಂಗಳೂರು, ನವೆಂಬರ್ 15: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಮತ್ತೊಂದಡೆ ಕಾಂಗ್ರೆಸ್ ಕೂಡ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದೆ. ಈ ಮಧ್ಯೆ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ಡಿಕೆ ಶಿವಕುಮಾರ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಕೆ ಶವಕುಮಾರ್, ‘ನನ್ನ ಸಿಎಂ ಮಾಡಿದ್ರೆ ವಾಪಸ್​​ ಬರುವುದಾಗಿ ಮುಂಬೈಗೆ ತೆರಳಿದ್ದ ಶಾಸಕರು ಹೇಳಿದ್ದರು. ಮುಂಬೈನಲ್ಲಿದ್ದ ಎಸ್.ಟಿ.ಸೋಮಶೇಖರ್​, ಗೋಪಾಲಯ್ಯ ಹಾಗೆ ಹೇಳಿದ್ದರು. ಅಂದಿನ ಸಿಎಂ ಕುಮಾರಸ್ವಾಮಿಗೆ ಖುದ್ದು ಕರೆ ಮಾಡಿ ಹೇಳಿದ್ದರು. ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ವಾಪಸ್​ ಬರುತ್ತೇವೆ ಎಂದು ಹೇಳಿದ್ದರು. ಆದರೆ, ಶಾಸಕರ ಬೇಡಿಕೆ ಬಗ್ಗೆ ಕುಮಾರಸ್ವಾಮಿ ಆಗ ಬಾಯಿ ಬಿಡಲೇ ಇಲ್ಲ’ ಎಂದು ಹೇಳಿದ್ದಾರೆ.

ಶಾಸಕರ ಬೇಡಿಕೆ ಬಗ್ಗೆ ಆಗ ಬಾಯಿ ಬಿಡದೇ ಇದ್ದ ಕುಮಾರಸ್ವಾಮಿ ಈಗ ಬೇಕಿದ್ದರೆ 19 ಶಾಸಕರು ಬೆಂಬಲ ಕೊಡ್ತೀವಿ ಎಂದು ಹೇಳ್ತಾರೆ. ಡಿ.ಕೆ.ಶಿವಕುಮಾರ್ ಸಿಎಂ ಆದರೆ ಬೆಂಬಲ ಕೊಡುತ್ತೇವೆ ಅಂತಾರೆ. ಹೆಚ್​.ಡಿ.ಕುಮಾರಸ್ವಾಮಿ ಮಾತನ್ನು ನಂಬುವುದಕ್ಕೆ ನಾವು ದಡ್ಡರಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮೋನಮಃ ಎಂದು ಯಾಕೆ ಹೇಳಿದರು?

ಕೆಲವು ದಿನಗಳ ಹಿಂದೆ, ಡಿ.ಕೆ.ಶಿವಕುಮಾರ್ ಸಿಎಂ ಆದರೆ ಬೆಂಬಲ ಕೊಡುತ್ತೇವೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us