AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್, ಅಡುಗೆ ಎಣ್ಣೆ ದರ ಇಳಿಸದಿದ್ದರೆ 2023ರ ಚುನಾವಣೆಯಲ್ಲೂ ಬಿಜೆಪಿಗೆ ಸೋಲಾಗಲಿದೆ: ಡಿಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಹಾನಗಲ್ ಉಪಚುನಾವಣೆಯಿಂದ ಬಿಜೆಪಿ ಪಾಠ ಕಲಿತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಗ್ಯಾಸ್, ಅಡುಗೆ ಎಣ್ಣೆ ದರ ಇಳಿಸದಿದ್ದರೆ 2023ರ ಚುನಾವಣೆಯಲ್ಲೂ ಬಿಜೆಪಿಗೆ ಸೋಲಾಗಲಿದೆ: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
TV9 Web
| Updated By: shivaprasad.hs

Updated on: Nov 05, 2021 | 1:17 PM

ಹುಬ್ಬಳ್ಳಿ: ಹಾನಗಲ್ ಮತದಾರರ ಬಗ್ಗೆ ನನಗೆ ಮೊದಲೇ ನಂಬಿಕೆಯಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರು ಮಾತನಾಡಿದರು. ಕೊವಿಡ್​ ವೇಳೆ ರೈತರು, ಕಾರ್ಮಿಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಸಹಾಯಮಾಡುವ ಬದಲು ಜನರ ಪಿಕ್​ಪ್ಯಾಕೆಟ್ ಮಾಡುತ್ತಿತ್ತು. ಇದರಿಂದ ಬೇಸತ್ತು ಹಾನಗಲ್ ಜನರು ಉತ್ತರ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಚುನಾವಣೆಯಲ್ಲಿ ಸೋಲು ಎದುರಾಗಿರುವುದರಿಂದಲೇ ಬೊಮ್ಮಾಯಿ ಹಾಗೂ ಪ್ರಧಾನಿ ಮೋದಿ ತೈಲ ಬೆಲೆ ಇಳಿಸಿದ್ದಾರೆ ಎಂದೂ ಡಿಕೆಶಿ ವ್ಯಂಗ್ಯವಾಡಿದ್ದಾರೆ. ಬೈಎಲೆಕ್ಷನ್​ ಬಳಿಕ ಬಿಜೆಪಿ ನಾಯಕರಿಗೆ ತಿಳಿವಳಿಕೆ ಬಂದಿದೆ. ಆದರೆ ಇನ್ನೂ ಗ್ಯಾಸ್, ಅಡುಗೆ ಎಣ್ಣೆ ದರ ಕಡಿಮೆಮಾಡಿಲ್ಲ. ದರ ಇಳಿಸದಿದ್ದರೆ 2023ರ ಚುನಾವಣೆಯಲ್ಲಿ ಇದೇ ಉತ್ತರ ಸಿಗಲಿದೆ ಎಂದು ಶಿವಕುಮಾರ್ ಕುಟುಕಿದ್ದಾರೆ.

ಹಾನಗಲ್​ನಲ್ಲಿ ಫಲಿತಾಂಶ ಬರುವುದಕ್ಕೂ ಮೊದಲೇ ಸಿಎಂ ಬಸವರಾಜ ಬೊಮ್ಮಾಯಿ ಸೋಲೊಪ್ಪಿಕೊಂಡಿದ್ದರು. ಕಳೆದ ಚುನಾವಣೆಯಲ್ಲಿ ಸಿಂದಗಿಯಲ್ಲಿ ಜೆಡಿಎಸ್​ ಗೆದ್ದಿತ್ತು. ಹಾನಗಲ್​ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಆದರೆ ಹಾನಗಲ್​ ನನ್ನ ಮನೆ ಎಂದು ನಾವು ಎಲ್ಲೂ ಹೇಳಿರಲಿಲ್ಲ. ಹಾನಗಲ್ ಅಳಿಯ, ಹಾನಗಲ್ ಮೊಮ್ಮಗನೆಂದು ಹೇಳಿರಲಿಲ್ಲ. ಸಿಎಂ ಬೊಮ್ಮಾಯಿ ಹೇಳಿದ್ದನ್ನು ನೆನಪಿಸಲು ಬಯಸುತ್ತೇನೆ.  ಜೊತೆಗೆ ಬೊಮ್ಮಾಯಿ ಸಂಪುಟದ ಸಚಿವರೆಲ್ಲ ಅಲ್ಲೇ ಬೀಡುಬಿಟ್ಟಿದ್ದರು. ನಮ್ಮ ಗೌರವ ಉಳಿಸಿ ಎಂದು ಕೇಳಿಕೊಂಡಿದ್ದರು. ಆದರೆ ಫಲಿತಾಂಶ ಬರುವ ಮುನ್ನವೇ ಸಿಎಂ ಸೋಲೊಪ್ಪಿಕೊಂಡಿದ್ದರು ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಬಿಟ್​ ಕಾಯಿನ್ ದಂಧೆಯಲ್ಲಿ ರಾಜಕಾರಣಿಗಳು ಭಾಗಿ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಇಡಿ, ಸಿಬಿಐ ತನಿಖೆಗೆ ಕೊಟ್ಟಿದ್ದೇವೆ ಎಂದು ಸಿಎಂ ಹೇಳುತ್ತಿದ್ದಾರೆ. ಬಿಟ್ ಕಾಯಿನ್ ದಂಧೆ ಬಗ್ಗೆ ಸಿಎಂ ಬೊಮ್ಮಾಯಿ ವಿವರಿಸಲಿ. ನಾನು ಯಾವುದೇ ರಾಜಕಾರಣಿ ಬಗ್ಗೆ ಮಾತನಾಡಿಲ್ಲ. ಬಿಟ್ ಕಾಯಿನ್ ದಂಧೆ ಬಗ್ಗೆ ಸಾರ್ವಜನಿಕವಾಗಿ ಸ್ಪಷ್ಟಪಡಿಸಲಿ. ಮಾಹಿತಿ ಹಕ್ಕು ಕಾಯ್ದೆಯಡಿ ನಾವು ಸಹ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಬೊಮ್ಮಾಯಿ ಹೇಳಿದ್ದೇನು? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮೊದಲು ಹೇಳಿಕೆ ನೀಡುತ್ತಾ ಕಾಂಗ್ರೆಸ್ ಕಾಲೆಳೆದಿದ್ದರು. ಬಿಜೆಪಿ ನಾಯಕರು ಕಾಂಗ್ರೆಸ್ ಸೇರುತ್ತಾರೆಂಬ ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡುತ್ತಾ, ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಹೋಳಾಗುವ ಸ್ಥಿತಿ ಇದೆ. ಕಾಂಗ್ರೆಸ್‌ನವರು ಮೊದಲು ಅವರ ಬಗ್ಗೆ ನೋಡಿಕೊಳ್ಳಲಿ ಎಂದು ಸಿಎಂ ಬೊಮ್ಮಾಯಿ ಟಾಂಗ್ ನೀಡಿದ್ದರು.

ಇದನ್ನೂ ಓದಿ:

ಕುಟುಂಬ ಸಮೇತರಾಗಿ ಆಗಮಿಸಿ ಪುನೀತ್ ಸಮಾಧಿಗೆ ನಮನ ಸಲ್ಲಿಸಿದ ರೇಣುಕಾಚಾರ್ಯ

ಪ್ರಿಯಾಂಕಾ ಗಾಂಧಿಯ ಮಹಿಳಾ ಕೇಂದ್ರಿತ ಭರವಸೆಗಳು ಉತ್ತರ ಪ್ರದೇಶದ ಚುನಾವಣೆಗಾಗಿ ಮಾತ್ರ: ಕಾಂಗ್ರೆಸ್ ಪಕ್ಷದ ನಾಯಕರು

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?