AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: Jun 28, 2023 | 2:46 PM

Share

ಬೆಂಗಳೂರು: ಪ್ರತಿಪಕ್ಷಗಳ ಟೀಕೆ, ವಿರೋಧ ಹಾಗೂ ಅಪಪ್ರಚಾರಗಳಿಗೆ ಮಣಿದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಸಚಿವ ಕೆಜೆ ಜಾರ್ಜ್ ಉಕ್ಕಿನ ಸೇತುವೆ (Steel Flyover) ಯೋಜನೆಯನ್ನು ಕೈಬಿಟ್ಟಿದ್ದರು. ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು. ನಾನಾಗಿದ್ದರೆ ಯೋಜನೆ ಜಾರಿ ಮಾಡಿಯೇ ಮಾಡುತ್ತಿದ್ದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಜತೆಗೆ, ಅಂಥ ಇನ್ನಷ್ಟು ಯೋಜನೆಗಳನ್ನು ಈ ಬಾರಿ ಜಾರಿ ಮಾಡಲಿದ್ದೇವೆ. ಪ್ರತಿಭಟಿಸುವವರು ಸಜ್ಜಾಗಲಿ ಎಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆದರೆ ಅದು ತೀವ್ರ ಟೀಕೆಗೆ ಒಳಗಾಗಿತ್ತು. ಸಿದ್ದರಾಮಯ್ಯ ಹಾಗೂ ಕೆಜೆ ಜಾರ್ಜ್ (ಅಂದಿನ ಬೆಂಗಳೂರು ಅಭಿವೃದ್ಧಿ ಸಚಿವ) ಹೆದರಿ ಯೋಜನೆಯನ್ನು ಕೈಬಿಡುವಂತೆ ಕೇಳಿಕೊಂಡರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಒಂದು ವೇಳೆ ನಾನೇನಾದರೂ ಆಡಳಿತದ ಚುಕ್ಕಾಣಿ ಹಿಡಿದಿದ್ದರೆ ಏನು ಮಾಡಬೇಕೋ ಅದನ್ನು ಮಾಡಿಯೇ ಬಿಡುತ್ತಿದ್ದೆ ಎಂದು ಅವರು ಹೇಳಿದ್ದಾರೆ. ನಾವು ಕೆಲಸದ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ನಾವು ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು. ಪ್ರತಿಮೆಯೂ ಬೇಕು ಅಭಿವೃದ್ಧಿ ಕೆಲಸಗಳೂ ಆಗುತ್ತಿರಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಮೂಲಕ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಸಂದೇಶ ನೀಡಿದ್ದಾರೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್