ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
Follow us
|

Updated on: Jun 28, 2023 | 2:46 PM

ಬೆಂಗಳೂರು: ಪ್ರತಿಪಕ್ಷಗಳ ಟೀಕೆ, ವಿರೋಧ ಹಾಗೂ ಅಪಪ್ರಚಾರಗಳಿಗೆ ಮಣಿದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಸಚಿವ ಕೆಜೆ ಜಾರ್ಜ್ ಉಕ್ಕಿನ ಸೇತುವೆ (Steel Flyover) ಯೋಜನೆಯನ್ನು ಕೈಬಿಟ್ಟಿದ್ದರು. ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು. ನಾನಾಗಿದ್ದರೆ ಯೋಜನೆ ಜಾರಿ ಮಾಡಿಯೇ ಮಾಡುತ್ತಿದ್ದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಜತೆಗೆ, ಅಂಥ ಇನ್ನಷ್ಟು ಯೋಜನೆಗಳನ್ನು ಈ ಬಾರಿ ಜಾರಿ ಮಾಡಲಿದ್ದೇವೆ. ಪ್ರತಿಭಟಿಸುವವರು ಸಜ್ಜಾಗಲಿ ಎಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆದರೆ ಅದು ತೀವ್ರ ಟೀಕೆಗೆ ಒಳಗಾಗಿತ್ತು. ಸಿದ್ದರಾಮಯ್ಯ ಹಾಗೂ ಕೆಜೆ ಜಾರ್ಜ್ (ಅಂದಿನ ಬೆಂಗಳೂರು ಅಭಿವೃದ್ಧಿ ಸಚಿವ) ಹೆದರಿ ಯೋಜನೆಯನ್ನು ಕೈಬಿಡುವಂತೆ ಕೇಳಿಕೊಂಡರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಒಂದು ವೇಳೆ ನಾನೇನಾದರೂ ಆಡಳಿತದ ಚುಕ್ಕಾಣಿ ಹಿಡಿದಿದ್ದರೆ ಏನು ಮಾಡಬೇಕೋ ಅದನ್ನು ಮಾಡಿಯೇ ಬಿಡುತ್ತಿದ್ದೆ ಎಂದು ಅವರು ಹೇಳಿದ್ದಾರೆ. ನಾವು ಕೆಲಸದ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ನಾವು ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು. ಪ್ರತಿಮೆಯೂ ಬೇಕು ಅಭಿವೃದ್ಧಿ ಕೆಲಸಗಳೂ ಆಗುತ್ತಿರಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಮೂಲಕ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಸಂದೇಶ ನೀಡಿದ್ದಾರೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್