AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: Jun 28, 2023 | 2:46 PM

Share

ಬೆಂಗಳೂರು: ಪ್ರತಿಪಕ್ಷಗಳ ಟೀಕೆ, ವಿರೋಧ ಹಾಗೂ ಅಪಪ್ರಚಾರಗಳಿಗೆ ಮಣಿದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಸಚಿವ ಕೆಜೆ ಜಾರ್ಜ್ ಉಕ್ಕಿನ ಸೇತುವೆ (Steel Flyover) ಯೋಜನೆಯನ್ನು ಕೈಬಿಟ್ಟಿದ್ದರು. ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು. ನಾನಾಗಿದ್ದರೆ ಯೋಜನೆ ಜಾರಿ ಮಾಡಿಯೇ ಮಾಡುತ್ತಿದ್ದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಜತೆಗೆ, ಅಂಥ ಇನ್ನಷ್ಟು ಯೋಜನೆಗಳನ್ನು ಈ ಬಾರಿ ಜಾರಿ ಮಾಡಲಿದ್ದೇವೆ. ಪ್ರತಿಭಟಿಸುವವರು ಸಜ್ಜಾಗಲಿ ಎಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆದರೆ ಅದು ತೀವ್ರ ಟೀಕೆಗೆ ಒಳಗಾಗಿತ್ತು. ಸಿದ್ದರಾಮಯ್ಯ ಹಾಗೂ ಕೆಜೆ ಜಾರ್ಜ್ (ಅಂದಿನ ಬೆಂಗಳೂರು ಅಭಿವೃದ್ಧಿ ಸಚಿವ) ಹೆದರಿ ಯೋಜನೆಯನ್ನು ಕೈಬಿಡುವಂತೆ ಕೇಳಿಕೊಂಡರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಒಂದು ವೇಳೆ ನಾನೇನಾದರೂ ಆಡಳಿತದ ಚುಕ್ಕಾಣಿ ಹಿಡಿದಿದ್ದರೆ ಏನು ಮಾಡಬೇಕೋ ಅದನ್ನು ಮಾಡಿಯೇ ಬಿಡುತ್ತಿದ್ದೆ ಎಂದು ಅವರು ಹೇಳಿದ್ದಾರೆ. ನಾವು ಕೆಲಸದ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ನಾವು ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು. ಪ್ರತಿಮೆಯೂ ಬೇಕು ಅಭಿವೃದ್ಧಿ ಕೆಲಸಗಳೂ ಆಗುತ್ತಿರಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಮೂಲಕ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಸಂದೇಶ ನೀಡಿದ್ದಾರೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ