AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on: Jun 28, 2023 | 2:46 PM

Share

ಬೆಂಗಳೂರು: ಪ್ರತಿಪಕ್ಷಗಳ ಟೀಕೆ, ವಿರೋಧ ಹಾಗೂ ಅಪಪ್ರಚಾರಗಳಿಗೆ ಮಣಿದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಸಚಿವ ಕೆಜೆ ಜಾರ್ಜ್ ಉಕ್ಕಿನ ಸೇತುವೆ (Steel Flyover) ಯೋಜನೆಯನ್ನು ಕೈಬಿಟ್ಟಿದ್ದರು. ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು. ನಾನಾಗಿದ್ದರೆ ಯೋಜನೆ ಜಾರಿ ಮಾಡಿಯೇ ಮಾಡುತ್ತಿದ್ದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಜತೆಗೆ, ಅಂಥ ಇನ್ನಷ್ಟು ಯೋಜನೆಗಳನ್ನು ಈ ಬಾರಿ ಜಾರಿ ಮಾಡಲಿದ್ದೇವೆ. ಪ್ರತಿಭಟಿಸುವವರು ಸಜ್ಜಾಗಲಿ ಎಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆದರೆ ಅದು ತೀವ್ರ ಟೀಕೆಗೆ ಒಳಗಾಗಿತ್ತು. ಸಿದ್ದರಾಮಯ್ಯ ಹಾಗೂ ಕೆಜೆ ಜಾರ್ಜ್ (ಅಂದಿನ ಬೆಂಗಳೂರು ಅಭಿವೃದ್ಧಿ ಸಚಿವ) ಹೆದರಿ ಯೋಜನೆಯನ್ನು ಕೈಬಿಡುವಂತೆ ಕೇಳಿಕೊಂಡರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಒಂದು ವೇಳೆ ನಾನೇನಾದರೂ ಆಡಳಿತದ ಚುಕ್ಕಾಣಿ ಹಿಡಿದಿದ್ದರೆ ಏನು ಮಾಡಬೇಕೋ ಅದನ್ನು ಮಾಡಿಯೇ ಬಿಡುತ್ತಿದ್ದೆ ಎಂದು ಅವರು ಹೇಳಿದ್ದಾರೆ. ನಾವು ಕೆಲಸದ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ನಾವು ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು. ಪ್ರತಿಮೆಯೂ ಬೇಕು ಅಭಿವೃದ್ಧಿ ಕೆಲಸಗಳೂ ಆಗುತ್ತಿರಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಮೂಲಕ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಸಂದೇಶ ನೀಡಿದ್ದಾರೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ