ಅಮುಲ್​ ಹೇರಿಕೆ ಮಾಡಿ ಗುಜರಾತ್ ಬೆಳೆಯಬೇಕು, ಕರ್ನಾಟಕ ಮುಚ್ಚಬೇಕೆಂಬ ಆಶಯ; ಡಿಕೆ ಶಿವಕುಮಾರ್ ಆಕ್ರೋಶ

ಕರ್ನಾಟಕದ ಮೇಲೆ ಅಮುಲ್ ಹೇರಿಕೆ ಮಾಡಲಾಗುತ್ತಿದೆ. ಇದರ ಹಿಂದೆ ಗುಜರಾತ್ ಬೆಳೆಯಬೇಕು, ಕರ್ನಾಟಕ ಮುಚ್ಚಬೇಕೆಂಬ ಆಶಯ ಇದ್ದಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಅಮುಲ್​ ಹೇರಿಕೆ ಮಾಡಿ ಗುಜರಾತ್ ಬೆಳೆಯಬೇಕು, ಕರ್ನಾಟಕ ಮುಚ್ಚಬೇಕೆಂಬ ಆಶಯ; ಡಿಕೆ ಶಿವಕುಮಾರ್ ಆಕ್ರೋಶ
ಡಿ.ಕೆ.ಶಿವಕುಮಾರ್
Image Credit source: hindustantimes.com
Edited By: Rakesh Nayak Manchi

Updated on: Apr 07, 2023 | 8:12 PM

ಬೆಂಗಳೂರು: ಕರ್ನಾಟಕದ ಮೇಲೆ ಅಮುಲ್ ಹೇರಿಕೆ ಮಾಡಲಾಗುತ್ತಿದೆ. ಇದರ ಹಿಂದೆ ಗುಜರಾತ್ ಬೆಳೆಯಬೇಕು, ಕರ್ನಾಟಕ ಮುಚ್ಚಬೇಕೆಂಬ ಆಶಯ ಇದ್ದಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಮುಲ್ ಹಾಲು, ಮೊಸರು ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದರು. ಜತೆಗೆ, ಬೆಳಗಾವಿಯ 865 ಹಳ್ಳಿಗಳಿಗೆ ಮಹಾರಾಷ್ಟ್ರ ಆರೋಗ್ಯ ವಿಮೆ ಯೋಜನೆ ನೀಡಿರುವ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ರಾಜ್ಯದ ನೆಲ, ಜಲ ಉಳಿಸುವವರು ಈಗ ಮಾತೇ ಆಡುತ್ತಿಲ್ಲವಲ್ಲ? ರಾಜ್ಯದ ನೆಲ, ಜಲ, ಭಾಷೆ ಕಾಪಾಡಿ ಜನರ ಹಿತ ಕಾಯುವ ಪ್ರತಿಜ್ಞೆ ಮಾಡುವ ಮೂಲಕ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಾವೇನೋ ಚುನಾವಣೆಯಲ್ಲಿ ವ್ಯಸ್ತರಾಗಿದ್ದೇವೆ. ಜತೆಗೆ, ಸಿನಿಮಾ ನಟರು, ಕನ್ನಡ ಪರ ಹೋರಾಟಗಾರರು ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.

ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣ ಎಂದರೆ ಫುಟ್ಬಾಲ್ ಅಲ್ಲ, ಚೆಸ್​ ಗೇಮ್​ ಇದ್ದಂತೆ. ಕಾಂಗ್ರೆಸ್​ಗೆ ಸೇರಿಸಿಕೊಳ್ಳುವಾಗ ಟಿಕೆಟ್​ ಕೊಡುವುದಾಗಿ ಹೇಳಿರಲಿಲ್ಲ. ಬೇಷರತ್​ ಆಗಿ ಪಕ್ಷಕ್ಕೆ ಸೇರಿಸಿಕೊಂಡಿದ್ದೆವು. ಪಕ್ಷಕ್ಕೆ ಸೇರಿದವರೆಲ್ಲರಿಗೂ ಟಿಕೆಟ್​ ಕೊಡಲು ಆಗುವುದಿಲ್ಲ. ಅಸಮಾಧಾನ ಇರುವವರನ್ನು ಕರೆದು ಮಾತನಾಡುತ್ತೇವೆ, ಅಸಮಾಧಾನ ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:06 pm, Fri, 7 April 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us