ಗುಪ್ತವಾಗಿ ಬಂದು ಧ್ಯಾನ ಮಾಡಿದ್ದ ಡಿಕೆ ಶಿವಕುಮಾರ್​ಗೆ 40 ದಿನದಲ್ಲೇ ಸಿಕ್ಕಿತು ಸಿಎಂ ಕುರ್ಚಿ; ಇದು ಗದಗದ ಪುಣ್ಯಕ್ಷೇತ್ರದ ಪವಾಡ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಲಕ್ಷ್ಮೇಶ್ವರದ ಮುಕ್ತಿಮಂದಿರಕ್ಕೆ ರಹಸ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ 40 ದಿನಗಳಲ್ಲಿ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ. ಈ ಘಟನೆ ಮುಕ್ತಿಮಂದಿರದ ಆಧ್ಯಾತ್ಮಿಕ ಶಕ್ತಿ ಮತ್ತು ಲಿಂಗೈಕ್ಯ ವೀರಗಂಗಾಧರ ಶ್ರೀಗಳ ಆಶೀರ್ವಾದದ ಪವಾಡವನ್ನು ಸಾಬೀತುಪಡಿಸಿದೆ. ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಈ ಸುದ್ದಿ ಮುಕ್ತಿಮಂದಿರದ ಮಹಿಮೆಯನ್ನು ಸಾರಿದೆ.

ಗುಪ್ತವಾಗಿ ಬಂದು ಧ್ಯಾನ ಮಾಡಿದ್ದ ಡಿಕೆ ಶಿವಕುಮಾರ್​ಗೆ 40 ದಿನದಲ್ಲೇ ಸಿಕ್ಕಿತು ಸಿಎಂ ಕುರ್ಚಿ; ಇದು ಗದಗದ ಪುಣ್ಯಕ್ಷೇತ್ರದ ಪವಾಡ
ಡಿ.ಕೆ. ಶಿವಕುಮಾರ್, ಮುಕ್ತಿಮಂದಿರ ಲಕ್ಷ್ಮೇಶ್ವರ
Image Credit source: Tv9 kannada

Updated on: May 29, 2026 | 10:01 AM

ಲಕ್ಷ್ಮೇಶ್ವರ, ಮೇ.29: ಗದಗದ “ಈ ಜಾಗಕ್ಕೆ ಇರುವ ಶಕ್ತಿ ಮತ್ತು ಮಹಿಮೆಯ ಬಗ್ಗೆ ನಾನು ನಿಮಗೆ ಬಿಡಿಸಿ ಹೇಳಲ್ಲ…” ಎಂದು ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದ ಮಾತುಗಳು ಈಗ ಅಕ್ಷರಶಃ ನಿಜವಾಗಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರ ‘ಮುಕ್ತಿಮಂದಿರ’ಕ್ಕೆ ಭೇಟಿ ನೀಡಿ ವಿಶೇಷ ಸಂಕಲ್ಪ ಮಾಡಿದ ಕೇವಲ 40 ದಿನಗಳ ಒಳಗಾಗಿಯೇ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿರುವುದು ಈಗ ಇಡೀ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಕಳೆದ ಏಪ್ರಿಲ್ 19 ರಂದು ಡಿ.ಕೆ. ಶಿವಕುಮಾರ್ ಅವರು ತಮಗೆ ಅತ್ಯಂತ ಆಪ್ತರು ಹಾಗೂ ಸ್ವಂತ ಪಕ್ಷದ ನಾಯಕರಿಗೂ ಯಾವುದೇ ಮಾಹಿತಿ ನೀಡದೆ ಮುಕ್ತಿಮಂದಿರಕ್ಕೆ ಅತ್ಯಂತ ರಹಸ್ಯವಾಗಿ ಆಗಮಿಸಿದ್ದರು. ಕೇವಲ ಪೊಲೀಸ್ ಸೆಕ್ಯೂರಿಟಿ (ಭದ್ರತೆ) ನಡುವೆ ಕ್ಷೇತ್ರಕ್ಕೆ ಬಂದಿದ್ದ ಅವರು, ಮುಕ್ತಿಮಂದಿರದ ಲಿಂಗೈಕ್ಯ ವೀರ ಗಂಗಾಧರ ಮಹಾಸ್ವಾಮಿಗಳ ಪವಿತ್ರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಶ್ರದ್ಧಾಭಕ್ತಿಯಿಂದ ಸಂಕಲ್ಪ ಮಾಡಿದ್ದರು.

ಮಾಧ್ಯಮಗಳನ್ನ ಹೊರಗಿಟ್ಟು ಗರ್ಭಗುಡಿಯಲ್ಲಿ ಜಪ, ತಪ

ಈ ರಹಸ್ಯ ಪೂಜೆಯ ವೇಳೆ ಗರ್ಭಗುಡಿಯೊಳಗೆ ಮಾಧ್ಯಮದವರು ಹಾಗೂ ಸ್ಥಳೀಯ ಮುಖಂಡರಿಗೆ ಪ್ರವೇಶ ನಿರಾಕರಿಸಿ ಹೊರಗಿಡಲಾಗಿತ್ತು. ಗರ್ಭಗುಡಿಯೊಳಗೆ ಕೇವಲ ಮುಕ್ತಿಮಂದಿರದ ಪೀಠಾಧಿಪತಿಗಳಾದ ಶ್ರೀ ವಿಮಲರೇಣುಕಾ ವೀರಮುಕ್ತಿ ಮುನಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಪ್ರಧಾನ ಅರ್ಚಕರಿಗೆ ಮಾತ್ರ ಪ್ರವೇಶವಿತ್ತು. ವೀರಗಂಗಾಧರ ಶ್ರೀಗಳ ಗದ್ದುಗೆ ಮುಂದೆ ಸುದೀರ್ಘ ಸಮಯ ಕುಳಿತುಕೊಂಡಿದ್ದ ಡಿಕೆಶಿ, ಕಣ್ಣು ಮುಚ್ಚಿ ಏಕಾಗ್ರತೆಯಿಂದ ಭಕ್ತಿಯ ಧ್ಯಾನ, ಜಪ ಮತ್ತು ತಪಗಳನ್ನು ಮಾಡಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈ ತಪ್ಪುವ ಸಾಧ್ಯತೆ, ಅಜ್ಜಯ್ಯ ಭವಿಷ್ಯ

ಕ್ಷೇತ್ರದ ಮಹಿಮೆಗೆ ರಾಜಕೀಯ ವಲಯ ಅಚ್ಚರಿ!

ಅಂದು ಡಿಕೆಶಿ ಅವರು ಶ್ರೀಗಳ ಸನ್ನಿಧಿಯಲ್ಲಿ ರಾಜ್ಯದ ಅತ್ಯುನ್ನತ ರಾಜಕೀಯ ಅಧಿಕಾರ ಪ್ರಾಪ್ತಿಗಾಗಿ ವಿಶೇಷ ಸಂಕಲ್ಪ ಮಾಡಿದ್ದರು ಎನ್ನಲಾಗಿದ್ದು, ಅದಾಗಿ ಸರಿಯಾಗಿ 40 ದಿನಗಳು ಕಳೆಯುವಷ್ಟರಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗಿ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿದೆ. ಈ ಮೂಲಕ ಮುಕ್ತಿಮಂದಿರ ಕ್ಷೇತ್ರದ ಅದ್ಭುತ ಆಧ್ಯಾತ್ಮಿಕ ಶಕ್ತಿ ಮತ್ತು ಲಿಂಗೈಕ್ಯ ಶ್ರೀಗಳ ಆಶೀರ್ವಾದದ ಪವಾಡ ಈಗ ಮತ್ತೊಮ್ಮೆ ಸಾಬೀತಾದಂತಾಗಿದ್ದು, ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಈ ಸುದ್ದಿ ಭಾರಿ ವೈರಲ್ ಆಗುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us