AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ ಗುರೂಜಿ ಆಶ್ರಮದಲ್ಲಿ ಡಿಕೆ ಶಿವಕುಮಾರ್​ ಮುಂದಿನ ಸಿಎಂ ಕೂಗು: ಎಂಎಲ್​ಸಿ ಶರವಣ ಬಿಚ್ಚಿಬಿಟ್ಟ 3 ಉಂಗುರಗಳ ಗುಟ್ಟೇನು?

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿಗದ್ದೆನಲ್ಲಿರು ವಿನಯ ಗುರೂಜಿ ಆಶ್ರಮದಲ್ಲಿ ಡಿಕೆ ಶಿವಕುಮಾರ್​ ಮುಂದಿನ ಸಿಎಂ ಕೂಗು ಕೇಳಿಬಂದಿದೆ. ಡಿಕೆ ಶಿವಕುಮಾರ್​ ಸಿಎಂ ಆಗಲು ಆಶೀರ್ವದಿಸಿ ಎಂದು ಶಾಸಕ ತಮ್ಮಯ್ಯ ಮನವಿ ಮಾಡಿದ್ದಾರೆ.

ವಿನಯ ಗುರೂಜಿ ಆಶ್ರಮದಲ್ಲಿ ಡಿಕೆ ಶಿವಕುಮಾರ್​ ಮುಂದಿನ ಸಿಎಂ ಕೂಗು: ಎಂಎಲ್​ಸಿ ಶರವಣ ಬಿಚ್ಚಿಬಿಟ್ಟ 3 ಉಂಗುರಗಳ ಗುಟ್ಟೇನು?
ವಿನಯ ಗುರೂಜಿ, ಡಿ.ಕೆ.ಶಿವಕುಮಾರ್
ಗಂಗಾಧರ​ ಬ. ಸಾಬೋಜಿ
|

Updated on: Jun 17, 2023 | 6:39 PM

Share

ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್​ ನಮಗೆ ಟಿಕೆಟ್​ ನೀಡಿ ಸಹಾಯ ಮಾಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯ ಹಿಂದಿನ ಶಕ್ತಿಯೇ ಡಿ.ಕೆ.ಶಿವಕುಮಾರ್(DK Shivakumar)​​. ನಾವು ಬೇರೇನೂ ಕೇಳಲ್ಲ, ಅವರು ಸಿಎಂ ಆಗಲೆಂದು ಆಶೀರ್ವದಿಸಿ ಎಂದು ಶಾಸಕ ತಮ್ಮಯ್ಯ ಮನವಿ ಮಾಡಿದ್ದಾರೆ. ಆ ಮೂಲಕ ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿಗದ್ದೆಯಲ್ಲಿರು ವಿನಿಯ ಗುರೂಜಿ (Vinay Guruji) ಆಶ್ರಮದಲ್ಲಿ ಡಿಕೆ ಶಿವಕುಮಾರ್​ ಮುಂದಿನ ಸಿಎಂ ಕೂಗು ಕೇಳಿಬಂದಿದೆ. ಜೆಡಿಎಸ್​ ಎಂಎಲ್​ಸಿ ಶರವಣರಿಂದಲೂ ಕೂಡ ಡಿಕೆ ಶಿವಕುಮಾರ್​ ಸಿಎಂ ಜಪ ಮಾಡಿದ್ದಾರೆ.

ಮೂರು ಉಂಗುರ ರಹಸ್ಯ ಏನು?

ಗುರುಗಳು ಮೂರು ಉಂಗುರವನ್ನು ರೆಡಿ ಮಾಡಿ ಇಟ್ಟಿದ್ದರು. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಗೆ ಒಂದು ಉಂಗುರ ಕೊಟ್ರು, ಮತ್ತೊಂದು ಬಿಜೆಪಿ ಹಿರಿಯ ನಾಯಕ ಬಿಎಸ್​​ ಯಡಿಯೂರಪ್ಪಗೆ ಒಂದು ಕೊಟ್ರು. ಮೂರನೇ ಉಂಗುರವನ್ನು ಡಿಕೆ ಶಿವಕುಮಾರ್​​ಗೆ ಕೊಟ್ಟಿದ್ದಾರೆ, ಅದಕ್ಕೆ ನಾನೇ ಸಾಕ್ಷಿ. ಸರ್ಕಾರ ಬರುತ್ತೆ ಅಂತಾ ಡಿ.ಕೆ.ಶಿವಕುಮಾರ್​​ಗೆ ಉಂಗುರ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಬರಲ್ವಾ ಅಂದೆ, ಅದಕ್ಕೆ ಡಿಕೆ ಸರ್ಕಾರ ಎಂದಿದ್ದರು.

ಇದನ್ನೂ ಓದಿ: 9 Years Of PM Modi: ನರೇಂದ್ರ ಮೋದಿ ಪ್ರಧಾನಿಯಾಗಿ 9 ವರ್ಷ ಪೂರೈಕೆ: ಬಿಜೆಪಿ ನಾಯಕರಿಂದ ರಾಜ್ಯ ಪ್ರವಾಸ

ಶರವಣ, ತಮ್ಮಯ್ಯ ಮನವಿಯನ್ನು ಪುರಸ್ಕರಿಸಿದ ವಿನಯ ಗುರೂಜಿ, ಪ್ರಮಾಣ ವಚನದಲ್ಲಿ ಇರಬೇಕು ಎಂದಿದ್ದೆ, ಹಾಗಿಯೇ ಆಯ್ತು. ಶಾಸಕ ತಮ್ಮಯ್ಯ ಬಯಕೆ ಈಡೇರಿಕೆ ದಿನ ಬಹಳ ದೂರವಿಲ್ಲ. ಡಿಕೆ ಶಿವಕುಮಾರ್​​ ಅವರು ಒಳಗೊಂದು-ಹೊರಗೊಂದು ಇಲ್ಲದ ವ್ಯಕ್ತಿತ್ವ. ಮಗುವಿನ ಮನಸ್ಸು ಎಂದು ವಿನಯ ಗುರೂಜಿ ಹೊಗಳಿದ್ದಾರೆ.

ಇದನ್ನೂ ಓದಿ: ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ ಅನುಭವ ನಮಗೆ ಹೇಳಲಿ: ತನ್ವೀರ್ ಸೇಠ್

ಕೆಲ ಬದಲಾವಣೆಯಿಂದ ಗೃಹಲಕ್ಷ್ಮೀ ಯೋಜನೆ ವಿಳಂಬ 

ವಿನಯ ಗುರೂಜಿ ತಮ್ಮ ಆಶ್ರಮದಲ್ಲಿ ಮಳೆಗಾಗಿ ಚಂಡಿಕಾಯಾಗ ಸಂಕಲ್ಪ ಮಾಡಿದರು. ಚಂಡಿಕಾಯಾಗದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಕೂಡ ಭಾಗವಹಿಸಿದ್ದರು. ಯಾಗ ಮುಗಿದ ಬಳಿಕ ಮಾತನಾಡಿದ ಅವರು, ಆಗಸ್ಟ್​​​ 17 ಅಥವಾ 18ರಂದು ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿ ಖಾತೆಗೆ ಹಣ ಹಾಕಲಾಗುತ್ತೆ. ಕೆಲ ಬದಲಾವಣೆಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಮತ್ತಷ್ಟು ವಿಳಂಬ ಆಗುತ್ತೆ ಅಷ್ಟೇ. ಬಹಳ ಸರಳವಾಗಿ ಗೃಹಲಕ್ಷ್ಮೀ ಯೋಜನೆ ಜನರಿಗೆ ತಲುಪಬೇಕು. ಹಾಗಾಗಿ ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚನೆ ನೀಡಿದ್ದೇವೆ ಎಂದರು.

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​​ನಲ್ಲಿ ಸೇರಿದಂತೆ ಈಗ ಬಾಪೂಜಿ ಸೇವಾ ಕೇಂದ್ರದಲ್ಲೂ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ