AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಮೊದಲ ಮಹಡಿಯಲ್ಲಿ ಕಚೇರಿ ಹುಡುಕುತ್ತಿರುವ ಡಿಕೆ ಶಿವಕುಮಾರ್; ಏನಿದರ ಮರ್ಮ?

ವರದಿಗಳ ಪ್ರಕಾರ, ವಿಧಾನಸೌಧದ ಮೊದಲ ಮಹಡಿಯಲ್ಲಿ ಅಧಿವೇಶನ ಸಭಾಂಗಣದ ಬಳಿ ಮುಖ್ಯಮಂತ್ರಿ ಕಚೇರಿಯಂತೆಯೇ ಇರುವ ಕಚೇರಿ ಕೊಠಡಿಯನ್ನು ಗುರುತಿಸುವಂತೆ ಶಿವಕುಮಾರ್ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ವಿಧಾನಸೌಧದ ಮೊದಲ ಮಹಡಿಯಲ್ಲಿ ಕಚೇರಿ ಹುಡುಕುತ್ತಿರುವ ಡಿಕೆ ಶಿವಕುಮಾರ್; ಏನಿದರ ಮರ್ಮ?
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
TV9 Web
| Edited By: |

Updated on: Jul 08, 2023 | 1:27 PM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆ ಶಿವಕುಮಾರ್ (DK Shivakumar) ಅವರು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಆದೇಶದ ಮೇರೆಗೆ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಆದರೆ, ಅಂದಿನಿಂದಲೂ ಅವರು ಮುಖ್ಯಮಂತ್ರಿ ಹುದ್ದೆಗೆ ತಾವು ಸೂಕ್ತ ಎಂದು ಸಮರ್ಥಿಸಿಕೊಳ್ಳಲು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿರುವುದು ಬಹಿರಂಗಗೊಂಡಿದೆ. ಇತ್ತೀಚಿನ ನಡೆಯೊಂದರಲ್ಲಿ, ಶಿವಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಮಾತ್ರ ಸಿಗುವ ಕೆಲವು ಸವಲತ್ತುಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ವಿಧಾನಸೌಧದ ಮೊದಲ ಮಹಡಿಯಲ್ಲಿ ಅಧಿವೇಶನ ಸಭಾಂಗಣದ ಬಳಿ ಮುಖ್ಯಮಂತ್ರಿ ಕಚೇರಿಯಂತೆಯೇ ಇರುವ ಕಚೇರಿ ಕೊಠಡಿಯನ್ನು ಗುರುತಿಸುವಂತೆ ಶಿವಕುಮಾರ್ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಪಶ್ಚಿಮ ದ್ವಾರದಿಂದ ಪ್ರವೇಶಿಸಿದರೆ ಬಲಭಾಗದಲ್ಲಿ ಕೊಠಡಿ ಇದೆ. ಅಧಿವೇಶನ ನಡೆಯುತ್ತಿರುವಾಗ ಈ ಕೊಠಡಿಯನ್ನು ಮುಖ್ಯಮಂತ್ರಿ ಬಳಸುತ್ತಾರೆ.

ಇದೀಗ ಶಿವಕುಮಾರ್ ಅವರು ತಮ್ಮ ಸಿಬ್ಬಂದಿ ಬಳಿ ಕಚೇರಿ ಕೊಠಡಿ ಗುರುತಿಸಿ, ಮಂಜೂರು ಮಾಡಿಸುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಕೊಠಡಿ ಪ್ರಸ್ತುತ ಮೊದಲ ಮಹಡಿಯಲ್ಲಿ ವಿಧಾನಸೌಧದ ಪಶ್ಚಿಮ ಪ್ರವೇಶದ ಬಲಭಾಗದಲ್ಲಿದೆ. ಈಗ ಉಪ ಮುಖ್ಯಮಂತ್ರಿ ಎಡಭಾಗದಲ್ಲಿ ಕೊಠಡಿ ಹುಡುಕುತ್ತಿದ್ದಾರೆ.

ಇದನ್ನೂ ಓದಿ: ತೆಲಂಗಾಣದ ಜನರ ಶಕ್ತಿ ಯಾವಾಗಲೂ ಭಾರತದ ಶಕ್ತಿಯನ್ನು ಹೆಚ್ಚಿಸಿದೆ: ಪ್ರಧಾನಿ ಮೋದಿ

ಈ ಹಿಂದೆ ಯಾವ ಉಪಮುಖ್ಯಮಂತ್ರಿಗಳಿಗೂ ಮೊದಲ ಮಹಡಿಯಲ್ಲಿ ಪ್ರತ್ಯೇಕ ಕೊಠಡಿ ಇರಲಿಲ್ಲ. ವರದಿಗಳ ಪ್ರಕಾರ, ಶಿವಕುಮಾರ್ ಅವರ ಸಿಬ್ಬಂದಿ ಒಂದು ಕೊಠಡಿಯನ್ನು ಖಾಲಿ ಮಾಡಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಅದನ್ನು ಉಪ ಮುಖ್ಯಮಂತ್ರಿಗೆ ಹಂಚಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ