Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಮೊದಲ ಮಹಡಿಯಲ್ಲಿ ಕಚೇರಿ ಹುಡುಕುತ್ತಿರುವ ಡಿಕೆ ಶಿವಕುಮಾರ್; ಏನಿದರ ಮರ್ಮ?

ವರದಿಗಳ ಪ್ರಕಾರ, ವಿಧಾನಸೌಧದ ಮೊದಲ ಮಹಡಿಯಲ್ಲಿ ಅಧಿವೇಶನ ಸಭಾಂಗಣದ ಬಳಿ ಮುಖ್ಯಮಂತ್ರಿ ಕಚೇರಿಯಂತೆಯೇ ಇರುವ ಕಚೇರಿ ಕೊಠಡಿಯನ್ನು ಗುರುತಿಸುವಂತೆ ಶಿವಕುಮಾರ್ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ವಿಧಾನಸೌಧದ ಮೊದಲ ಮಹಡಿಯಲ್ಲಿ ಕಚೇರಿ ಹುಡುಕುತ್ತಿರುವ ಡಿಕೆ ಶಿವಕುಮಾರ್; ಏನಿದರ ಮರ್ಮ?
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
Follow us
TV9 Web
| Updated By: Ganapathi Sharma

Updated on: Jul 08, 2023 | 1:27 PM

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆ ಶಿವಕುಮಾರ್ (DK Shivakumar) ಅವರು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಆದೇಶದ ಮೇರೆಗೆ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಆದರೆ, ಅಂದಿನಿಂದಲೂ ಅವರು ಮುಖ್ಯಮಂತ್ರಿ ಹುದ್ದೆಗೆ ತಾವು ಸೂಕ್ತ ಎಂದು ಸಮರ್ಥಿಸಿಕೊಳ್ಳಲು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿರುವುದು ಬಹಿರಂಗಗೊಂಡಿದೆ. ಇತ್ತೀಚಿನ ನಡೆಯೊಂದರಲ್ಲಿ, ಶಿವಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಮಾತ್ರ ಸಿಗುವ ಕೆಲವು ಸವಲತ್ತುಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ವಿಧಾನಸೌಧದ ಮೊದಲ ಮಹಡಿಯಲ್ಲಿ ಅಧಿವೇಶನ ಸಭಾಂಗಣದ ಬಳಿ ಮುಖ್ಯಮಂತ್ರಿ ಕಚೇರಿಯಂತೆಯೇ ಇರುವ ಕಚೇರಿ ಕೊಠಡಿಯನ್ನು ಗುರುತಿಸುವಂತೆ ಶಿವಕುಮಾರ್ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಪಶ್ಚಿಮ ದ್ವಾರದಿಂದ ಪ್ರವೇಶಿಸಿದರೆ ಬಲಭಾಗದಲ್ಲಿ ಕೊಠಡಿ ಇದೆ. ಅಧಿವೇಶನ ನಡೆಯುತ್ತಿರುವಾಗ ಈ ಕೊಠಡಿಯನ್ನು ಮುಖ್ಯಮಂತ್ರಿ ಬಳಸುತ್ತಾರೆ.

ಇದೀಗ ಶಿವಕುಮಾರ್ ಅವರು ತಮ್ಮ ಸಿಬ್ಬಂದಿ ಬಳಿ ಕಚೇರಿ ಕೊಠಡಿ ಗುರುತಿಸಿ, ಮಂಜೂರು ಮಾಡಿಸುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಕೊಠಡಿ ಪ್ರಸ್ತುತ ಮೊದಲ ಮಹಡಿಯಲ್ಲಿ ವಿಧಾನಸೌಧದ ಪಶ್ಚಿಮ ಪ್ರವೇಶದ ಬಲಭಾಗದಲ್ಲಿದೆ. ಈಗ ಉಪ ಮುಖ್ಯಮಂತ್ರಿ ಎಡಭಾಗದಲ್ಲಿ ಕೊಠಡಿ ಹುಡುಕುತ್ತಿದ್ದಾರೆ.

ಇದನ್ನೂ ಓದಿ: ತೆಲಂಗಾಣದ ಜನರ ಶಕ್ತಿ ಯಾವಾಗಲೂ ಭಾರತದ ಶಕ್ತಿಯನ್ನು ಹೆಚ್ಚಿಸಿದೆ: ಪ್ರಧಾನಿ ಮೋದಿ

ಈ ಹಿಂದೆ ಯಾವ ಉಪಮುಖ್ಯಮಂತ್ರಿಗಳಿಗೂ ಮೊದಲ ಮಹಡಿಯಲ್ಲಿ ಪ್ರತ್ಯೇಕ ಕೊಠಡಿ ಇರಲಿಲ್ಲ. ವರದಿಗಳ ಪ್ರಕಾರ, ಶಿವಕುಮಾರ್ ಅವರ ಸಿಬ್ಬಂದಿ ಒಂದು ಕೊಠಡಿಯನ್ನು ಖಾಲಿ ಮಾಡಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಅದನ್ನು ಉಪ ಮುಖ್ಯಮಂತ್ರಿಗೆ ಹಂಚಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ