AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಮೊದಲ ಮಹಡಿಯಲ್ಲಿ ಕಚೇರಿ ಹುಡುಕುತ್ತಿರುವ ಡಿಕೆ ಶಿವಕುಮಾರ್; ಏನಿದರ ಮರ್ಮ?

ವರದಿಗಳ ಪ್ರಕಾರ, ವಿಧಾನಸೌಧದ ಮೊದಲ ಮಹಡಿಯಲ್ಲಿ ಅಧಿವೇಶನ ಸಭಾಂಗಣದ ಬಳಿ ಮುಖ್ಯಮಂತ್ರಿ ಕಚೇರಿಯಂತೆಯೇ ಇರುವ ಕಚೇರಿ ಕೊಠಡಿಯನ್ನು ಗುರುತಿಸುವಂತೆ ಶಿವಕುಮಾರ್ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ವಿಧಾನಸೌಧದ ಮೊದಲ ಮಹಡಿಯಲ್ಲಿ ಕಚೇರಿ ಹುಡುಕುತ್ತಿರುವ ಡಿಕೆ ಶಿವಕುಮಾರ್; ಏನಿದರ ಮರ್ಮ?
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
TV9 Web
| Updated By: Ganapathi Sharma|

Updated on: Jul 08, 2023 | 1:27 PM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆ ಶಿವಕುಮಾರ್ (DK Shivakumar) ಅವರು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಆದೇಶದ ಮೇರೆಗೆ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಆದರೆ, ಅಂದಿನಿಂದಲೂ ಅವರು ಮುಖ್ಯಮಂತ್ರಿ ಹುದ್ದೆಗೆ ತಾವು ಸೂಕ್ತ ಎಂದು ಸಮರ್ಥಿಸಿಕೊಳ್ಳಲು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿರುವುದು ಬಹಿರಂಗಗೊಂಡಿದೆ. ಇತ್ತೀಚಿನ ನಡೆಯೊಂದರಲ್ಲಿ, ಶಿವಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಮಾತ್ರ ಸಿಗುವ ಕೆಲವು ಸವಲತ್ತುಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ವಿಧಾನಸೌಧದ ಮೊದಲ ಮಹಡಿಯಲ್ಲಿ ಅಧಿವೇಶನ ಸಭಾಂಗಣದ ಬಳಿ ಮುಖ್ಯಮಂತ್ರಿ ಕಚೇರಿಯಂತೆಯೇ ಇರುವ ಕಚೇರಿ ಕೊಠಡಿಯನ್ನು ಗುರುತಿಸುವಂತೆ ಶಿವಕುಮಾರ್ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಪಶ್ಚಿಮ ದ್ವಾರದಿಂದ ಪ್ರವೇಶಿಸಿದರೆ ಬಲಭಾಗದಲ್ಲಿ ಕೊಠಡಿ ಇದೆ. ಅಧಿವೇಶನ ನಡೆಯುತ್ತಿರುವಾಗ ಈ ಕೊಠಡಿಯನ್ನು ಮುಖ್ಯಮಂತ್ರಿ ಬಳಸುತ್ತಾರೆ.

ಇದೀಗ ಶಿವಕುಮಾರ್ ಅವರು ತಮ್ಮ ಸಿಬ್ಬಂದಿ ಬಳಿ ಕಚೇರಿ ಕೊಠಡಿ ಗುರುತಿಸಿ, ಮಂಜೂರು ಮಾಡಿಸುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಕೊಠಡಿ ಪ್ರಸ್ತುತ ಮೊದಲ ಮಹಡಿಯಲ್ಲಿ ವಿಧಾನಸೌಧದ ಪಶ್ಚಿಮ ಪ್ರವೇಶದ ಬಲಭಾಗದಲ್ಲಿದೆ. ಈಗ ಉಪ ಮುಖ್ಯಮಂತ್ರಿ ಎಡಭಾಗದಲ್ಲಿ ಕೊಠಡಿ ಹುಡುಕುತ್ತಿದ್ದಾರೆ.

ಇದನ್ನೂ ಓದಿ: ತೆಲಂಗಾಣದ ಜನರ ಶಕ್ತಿ ಯಾವಾಗಲೂ ಭಾರತದ ಶಕ್ತಿಯನ್ನು ಹೆಚ್ಚಿಸಿದೆ: ಪ್ರಧಾನಿ ಮೋದಿ

ಈ ಹಿಂದೆ ಯಾವ ಉಪಮುಖ್ಯಮಂತ್ರಿಗಳಿಗೂ ಮೊದಲ ಮಹಡಿಯಲ್ಲಿ ಪ್ರತ್ಯೇಕ ಕೊಠಡಿ ಇರಲಿಲ್ಲ. ವರದಿಗಳ ಪ್ರಕಾರ, ಶಿವಕುಮಾರ್ ಅವರ ಸಿಬ್ಬಂದಿ ಒಂದು ಕೊಠಡಿಯನ್ನು ಖಾಲಿ ಮಾಡಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಅದನ್ನು ಉಪ ಮುಖ್ಯಮಂತ್ರಿಗೆ ಹಂಚಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!