AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಮೊದಲ ಮಹಡಿಯಲ್ಲಿ ಕಚೇರಿ ಹುಡುಕುತ್ತಿರುವ ಡಿಕೆ ಶಿವಕುಮಾರ್; ಏನಿದರ ಮರ್ಮ?

ವರದಿಗಳ ಪ್ರಕಾರ, ವಿಧಾನಸೌಧದ ಮೊದಲ ಮಹಡಿಯಲ್ಲಿ ಅಧಿವೇಶನ ಸಭಾಂಗಣದ ಬಳಿ ಮುಖ್ಯಮಂತ್ರಿ ಕಚೇರಿಯಂತೆಯೇ ಇರುವ ಕಚೇರಿ ಕೊಠಡಿಯನ್ನು ಗುರುತಿಸುವಂತೆ ಶಿವಕುಮಾರ್ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ವಿಧಾನಸೌಧದ ಮೊದಲ ಮಹಡಿಯಲ್ಲಿ ಕಚೇರಿ ಹುಡುಕುತ್ತಿರುವ ಡಿಕೆ ಶಿವಕುಮಾರ್; ಏನಿದರ ಮರ್ಮ?
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
TV9 Web
| Edited By: |

Updated on: Jul 08, 2023 | 1:27 PM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆ ಶಿವಕುಮಾರ್ (DK Shivakumar) ಅವರು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಆದೇಶದ ಮೇರೆಗೆ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಆದರೆ, ಅಂದಿನಿಂದಲೂ ಅವರು ಮುಖ್ಯಮಂತ್ರಿ ಹುದ್ದೆಗೆ ತಾವು ಸೂಕ್ತ ಎಂದು ಸಮರ್ಥಿಸಿಕೊಳ್ಳಲು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿರುವುದು ಬಹಿರಂಗಗೊಂಡಿದೆ. ಇತ್ತೀಚಿನ ನಡೆಯೊಂದರಲ್ಲಿ, ಶಿವಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಮಾತ್ರ ಸಿಗುವ ಕೆಲವು ಸವಲತ್ತುಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ವಿಧಾನಸೌಧದ ಮೊದಲ ಮಹಡಿಯಲ್ಲಿ ಅಧಿವೇಶನ ಸಭಾಂಗಣದ ಬಳಿ ಮುಖ್ಯಮಂತ್ರಿ ಕಚೇರಿಯಂತೆಯೇ ಇರುವ ಕಚೇರಿ ಕೊಠಡಿಯನ್ನು ಗುರುತಿಸುವಂತೆ ಶಿವಕುಮಾರ್ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಪಶ್ಚಿಮ ದ್ವಾರದಿಂದ ಪ್ರವೇಶಿಸಿದರೆ ಬಲಭಾಗದಲ್ಲಿ ಕೊಠಡಿ ಇದೆ. ಅಧಿವೇಶನ ನಡೆಯುತ್ತಿರುವಾಗ ಈ ಕೊಠಡಿಯನ್ನು ಮುಖ್ಯಮಂತ್ರಿ ಬಳಸುತ್ತಾರೆ.

ಇದೀಗ ಶಿವಕುಮಾರ್ ಅವರು ತಮ್ಮ ಸಿಬ್ಬಂದಿ ಬಳಿ ಕಚೇರಿ ಕೊಠಡಿ ಗುರುತಿಸಿ, ಮಂಜೂರು ಮಾಡಿಸುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಕೊಠಡಿ ಪ್ರಸ್ತುತ ಮೊದಲ ಮಹಡಿಯಲ್ಲಿ ವಿಧಾನಸೌಧದ ಪಶ್ಚಿಮ ಪ್ರವೇಶದ ಬಲಭಾಗದಲ್ಲಿದೆ. ಈಗ ಉಪ ಮುಖ್ಯಮಂತ್ರಿ ಎಡಭಾಗದಲ್ಲಿ ಕೊಠಡಿ ಹುಡುಕುತ್ತಿದ್ದಾರೆ.

ಇದನ್ನೂ ಓದಿ: ತೆಲಂಗಾಣದ ಜನರ ಶಕ್ತಿ ಯಾವಾಗಲೂ ಭಾರತದ ಶಕ್ತಿಯನ್ನು ಹೆಚ್ಚಿಸಿದೆ: ಪ್ರಧಾನಿ ಮೋದಿ

ಈ ಹಿಂದೆ ಯಾವ ಉಪಮುಖ್ಯಮಂತ್ರಿಗಳಿಗೂ ಮೊದಲ ಮಹಡಿಯಲ್ಲಿ ಪ್ರತ್ಯೇಕ ಕೊಠಡಿ ಇರಲಿಲ್ಲ. ವರದಿಗಳ ಪ್ರಕಾರ, ಶಿವಕುಮಾರ್ ಅವರ ಸಿಬ್ಬಂದಿ ಒಂದು ಕೊಠಡಿಯನ್ನು ಖಾಲಿ ಮಾಡಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಅದನ್ನು ಉಪ ಮುಖ್ಯಮಂತ್ರಿಗೆ ಹಂಚಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್