AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೇ ನಿಮ್ಮ ಮುಂದೆ ಬರ್ತೇನೆ, ಗುಂಡಿಟ್ಟು ಕೊಲ್ಲಿ; ಈಶ್ವರಪ್ಪಗೆ ಡಿಕೆ ಸುರೇಶ್ ಸವಾಲ್‌

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಿ ಎಂಬ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಡಿ ಕೆ ಸುರೇಶ್ ಹಾಗೂ ಅವರ ಸಹೋದರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಅದರಲ್ಲೂ ಡಿಕೆ ಶಿವಕುಮಾರ್, ಈಶ್ವರಪ್ಪಗೆ​ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ನಾನೇ ನಿಮ್ಮ ಮುಂದೆ ಬರ್ತೇನೆ, ಗುಂಡಿಟ್ಟು ಕೊಲ್ಲಿ; ಈಶ್ವರಪ್ಪಗೆ ಡಿಕೆ ಸುರೇಶ್ ಸವಾಲ್‌
TV9 Web
| Edited By: |

Updated on:Feb 10, 2024 | 2:44 PM

Share

ಬೆಂಗಳೂರು (ಫೆಬ್ರವರಿ 10): ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಿ ಎಂಬ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ  (KS Eshwarappa) ಹೇಳಿಕೆಗೆ ಡಿ ಕೆ ಸುರೇಶ್ (DK Suresh) ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಏಕೆ ಗುಂಡಿಕ್ಕಿ ಕೊಲ್ಲಬೇಕು, ನೀವು ಸಮಯ ಕೊಟ್ಟರೆ ನಿಮ್ಮ ಎದುರು ಬಂದು ನಿಲ್ಲುತ್ತೇನೆ, ನೀವೇ ಗುಂಡಿಕ್ಕಿ ಕೊಂದುಬಿಡಿ ಈಶ್ವರಪ್ಪನವರೇ, ಕನ್ನಡಿಗರಿಗಾಗಿ, ಕರ್ನಾಟಕ್ಕೋಸ್ಕರ ಇನ್ನೊಂದು ವಾರದೊಳಗೆ ಸಮಯ ಕೊಡುತ್ತೇನೆ, ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ, ದಯವಿಟ್ಟು ನಿಮ್ಮ ಆಸೆ ಈಡೇರಿಸಿಕೊಂಡು ನಿಮ್ಮ ನಾಯಕರಿಂದ ಶಹಬ್ಬಾಸ್ ಗಿರಿ ತೆಗೆದುಕೊಳ್ಳಿ ಎಂದು ವ್ಯಂಗ್ಯವಾಡಿದರು.

ಮಹಾತ್ಮಾ ಗಾಂಧಿಯವರನ್ನು ಕೊಂದ ಕೀರ್ತಿ ಬಿಜೆಪಿ ಪಕ್ಷಕ್ಕಿದೆ. ಕನ್ನಡಪರ, ಕರ್ನಾಟಕ ಪರ ಧ್ವನಿಯೆತ್ತಿದ್ದಕ್ಕೆ ನನ್ನನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳುತ್ತಿದ್ದಾರೆ. ಬಡವರನ್ನು ಬಾವಿಗೆ ತಳ್ಳಿ ಯಾಕೆ ಆಟ ನೋಡುತ್ತೀರಿ, ನಿಮಗೆ ರಾಜ್ಯಪಾಲ ಹುದ್ದೆಯ ಆಸೆ ಇರಬೇಕೆಂದು ಕಾಣಿಸುತ್ತದೆ. ಬಿಜೆಪಿಯವರು ನಿಮ್ಮನ್ನು ಮೂಲೆಗುಂಪು ಮಾಡುತ್ತಿದ್ದಾರೆ ಅಂತ ಕಾಣಿಸುತ್ತದೆ. ಇದರಿಂದಾಗಿ ನೊಂದು ಹಿರಿಯರಾಗಿದ್ದರೂ ಕೂಡ ಏನೋ ಮಾತನಾಡಬೇಕೆಂದು ಆಗಾಗ ಈ ರೀತಿ ಮಾತನಾಡುತ್ತಿದ್ದೀರಿ ಎಂದು ಕಾಣಿಸುತ್ತಿದೆ ಎಂದು ಈಶ್ವರಪ್ಪಗೆ ಟಾಂಗ್ ಕೊಟ್ಟರು.

ಇದನ್ನೂ ಓದಿ: ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಪೊಲೀಸರ ನೋಟಿಸಿಗೂ ಜಗ್ಗದೆ ಮತ್ತೆ ಗುಡುಗಿದ ಈಶ್ವರಪ್ಪ

ಈಶ್ವರಪ್ಪಗೆ ಒಂದು ರೌಂಡ್ ಸೆಟಲ್​ಮೆಂಟ್​ ಆಗಿದೆ

ಇನ್ನು ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಈಶ್ವರಪ್ಪ ಅವರಿಗೆ ಒಂದ್ ರೌಂಡ್ ಸೆಟಲ್​ಮೆಂಟ್‌ ಆಗಿದೆ. ಹಿಂದೆ ಅಸೆಂಬ್ಲಿಯಲ್ಲಿ ಹೀಗೆ ಮಾತನಾಡಿದ್ರು ನಿಮಗೆ ನೆನಪಿದ್ಯಾ? ನಮ್ಮ ತಂದೆಯವರನ್ನ ನೆನಪಿಸಿಕೊಂಡಿದ್ದರು. ಈಗ ಎಲ್ಲಿದ್ದಾರೆ ಈಶ್ವರಪ್ಪ ಅವರು. ಯಾರ್ಯಾರು ನಮ್ಮ ಸುದ್ದಿಗೆ ಬಂದಿದಾರೋ ಅವರಿಗೆಲ್ಲ ಒಂದೊಂದೇ ಸೆಟಲ್​ಮೆಂಟ್ ಆಗುತ್ತಿದೆ ಎಂದು ಹೇಳಿದರು. ಪರೋಕ್ಷವಾಗಿ ಅವರಿಗೆ ಟಿಕೆಟ್​ ಸಿಗದೇ ಅವರ ಯಾವ ಸ್ಥಿತಿಯಲ್ಲಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಗುಂಡಿಟ್ಟು ಕೊಲ್ಲುತ್ತೇನೆ ಅಂತಾರೆ ಕೊಲ್ಲಲಿ ಬಿಡಿ. ಡಿಕೆ ಸುರೇಶ್ ಅವರದು ಈ ಗುಂಡಿಗೆ ಹೆದರುವ ಬ್ಲಡ್ ಅಲ್ಲ.ಬೆಂಗಳೂರಿನಲ್ಲಿ ನಮ್ಮದೇ ಆದ ಇತಿಹಾಸವಿದೆ. ರಾಜಕಾರಣ ಮಾಡಬೇಕಾದವರು. ಹಿಂದೆನೂ‌ ಹೇಳಿದ್ದೇನೆ. ನಾವು ಹುಲ್ಲು ಗಾಡಿನ‌ ಹಿಡ್ಕೊಂಡು ಬರಲಿಲ್ಲ. ಕಿವಿ ಮೇಲೆ ಹೂ ಇಟ್ಕೊಂಡು ಬರಲಿಲ್ಲ ಎಂದು ಈಶ್ವರಪ್ಪಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:42 pm, Sat, 10 February 24

Follow Us
Web contact
Web contact

TV9 Kannada

Read More
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ