AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Suresh: ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ: ಸಂಸದ ಡಿಕೆ ಸುರೇಶ್ ಸ್ಪಷ್ಟನೆ

ರಾಮನಗರ ಕ್ಷೇತ್ರದಿಂದ ಡಿಕೆ ಸುರೇಶ್​ರನ್ನು ಕಣಕ್ಕಿಳಿಸುವ ಬಗ್ಗೆ ಡಿ.ಕೆ.ಶಿವಕುಮಾರ್​ ಸುಳಿವು ನೀಡಿದರ ಬೆನ್ನೆಲೆ ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಸಂಸದ ಡಿಕೆ ಸುರೇಶ್ ಸ್ಪಷ್ಟನೆ ನೀಡಿದ್ದಾರೆ.

DK Suresh: ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ: ಸಂಸದ ಡಿಕೆ ಸುರೇಶ್ ಸ್ಪಷ್ಟನೆ
ಡಿಕೆ ಸುರೇಶ್Image Credit source: varthabharati.in
ಗಂಗಾಧರ​ ಬ. ಸಾಬೋಜಿ
|

Updated on:Mar 15, 2023 | 7:16 PM

Share

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ (Ramanagara)  ಕ್ಷೇತ್ರದಿಂದ ಡಿಕೆ ಸುರೇಶ್​ರನ್ನು (DK Suresh) ಕಣಕ್ಕಿಳಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಇತ್ತೀಚೆಗೆ ಸುಳಿವು ನೀಡಿದ್ದರು. ಇದರ ಬೆನ್ನೆಲೆ ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಸಂಸದ ಡಿಕೆ ಸುರೇಶ್ ಇಂದು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನೊಂದಿಗೆ ಚರ್ಚಿಸದ ವಿಷಯದ ಬಗ್ಗೆ ನಾನು ನಿಮ್ಮೊಂದಿಗೆ ಹೇಗೆ ಚರ್ಚಿಸಲಿ. ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ಅಲ್ಲದೆ, ಕಳೆದ ಇಪ್ಪತ್ತು ವರ್ಷಗಳಲ್ಲಿ ಹಲವಾರು ಉಪಚುನಾವಣೆಗಳ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ, ಸಾರ್ವಜನಿಕ ಹಣವನ್ನು ವ್ಯರ್ಥ ಮಾಡುವುದನ್ನು ನಾನು ಇಷ್ಟಪಡುವುದಿಲ್ಲ ಎಂದು ಸುರೇಶ್​ ಉತ್ತರಿಸಿದ್ದಾರೆ.

ಚನ್ನಪಟ್ಟಣ, ರಾಜರಾಜೇಶ್ವರಿ ನಗರ ಸೇರಿದಂತೆ ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6 ಕ್ಷೇತ್ರಗಳು, ಹೊರಗಿನ 4 ಕ್ಷೇತ್ರಗಳು ಸೇರಿದಂತೆ ಒಟ್ಟು 10 ಕ್ಷೇತ್ರಗಳಿಂದ ನನ್ನ ಸ್ಪರ್ಧೆಗೆ ಆಹ್ವಾನವಿದೆ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿಯನ್ನು ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Karnataka polls: ರಾಮನಗರದಿಂದ ಡಿಕೆ ಸುರೇಶ್ ಸ್ಪರ್ಧೆ; ಮಹತ್ವದ ಸುಳಿವು ಕೊಟ್ಟ ಡಿಕೆ ಶಿವಕುಮಾರ್

ಸದ್ಯಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿಲ್ಲ

ನಾನು ಸದ್ಯಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿಲ್ಲ. ಒಂದು ವೇಳೆ ನಿರ್ಧರಿಸಿದರೆ ಹೈಕಮಾಂಡ್ ಸೂಚನೆ ಮಾತ್ರವಲ್ಲದೆ, ನನ್ನ ಮೇಲೆ ವಿಶ್ವಾಸವಿಟ್ಟು ನನ್ನನ್ನು ಮೂರು ಬಾರಿ ಲೋಕಸಭೆಗೆ ಕಳುಹಿಸಿದ್ದ ನನ್ನ ಕ್ಷೇತ್ರದ ಕಾರ್ಯಕರ್ತರಿಂದಲೂ ನಾನು ಅನುಮತಿ ಪಡೆಯಬೇಕಾಗುತ್ತದೆ. ಆದ್ದರಿಂದ ಚುನಾವಣೆಗೆ ಸ್ಪರ್ಧಿಸಲು, ಸ್ಥಳೀಯ ಕಾರ್ಯಕರ್ತರು ಸೇರಿದಂತೆ ವಿವಿಧ ಅಂಶಗಳನ್ನು ಗಣನೆಗೆ ತೆಗೆದುಕೊಂಡು ವಿವರವಾಗಿ ಚರ್ಚಿಸಬೇಕಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುಳಿದ, SCST ಸಮುದಾಯಗಳನ್ನು ವರ್ಷಕ್ಕೊಮ್ಮೆ ಮೇಲೆತ್ತುವುದು, ಮತ್ತೆ ಬಾವಿಗೆ ಹಾಕುವುದು: ಕಾಂಗ್ರೆಸ್​ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ರಾಮನಗರದಲ್ಲಿ ಸಹೋದರನನ್ನು ಕಣಕ್ಕಿಳಿಸಲು ಸಜ್ಜಾದ ಶಿವಕುಮಾರ್ 

ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ರಾಮನಗರದಲ್ಲಿ ಸಂಸದ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಹೈಕಮಾಂಡ್​​ ಮಟ್ಟದಲ್ಲಿಯೂ ಚರ್ಚೆ ಆಗಿರುವುದು ನಿಜ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ತಿಳಿಸಿದ್ದಾರೆ. ಡಿಕೆ ಸುರೇಶ್ ಸ್ಪರ್ಧಿಸಬೇಕು ಎಂದು ಬಹಳ ದಿನಗಳಿಂದ ಈ ಭಾಗದ ನಮ್ಮ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಈ‌ ಕ್ಷೇತ್ರದಲ್ಲಿ ಒಂದು ಇತಿಹಾಸ ಇದೆ. ಪಕ್ಷ ಸೂಚಿಸಿದ ಮೇಲೆ ಏನೂ ಮಾಡಲಾಗದು. ನಾನು ಸಚಿವನಾಗಿದ್ದವನು ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿರಲಿಲ್ಲವೇ? ರಾಜಕೀಯದಲ್ಲಿ ಕೆಲವು ಸಂದರ್ಭಗಳಲ್ಲಿ ಅನಿವಾರ್ಯ ಎದುರಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:15 pm, Wed, 15 March 23

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು