AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಏನು ಬೇಕಾದರೂ ಮಾಡಿಕೊಳ್ಳಿ ಆದರೆ ಬಾಳಾಸಾಹೇಬ್ ಹೆಸರು ಬಳಸಬೇಡಿ: ಉದ್ಧವ್ ಠಾಕ್ರೆ

ಈ ಮೊದಲೇ ನಾನು ಹೇಳಿದ್ದೆ ಅವರು (ಬಂಡಾಯ ಶಾಸಕರು) ಅವರು ಏನು ಬೇಕಾದರೂ ಮಾಡಿಕೊಳ್ಳಲಿ , ಅವರ ವಿಷಯದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಅವರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬಹುದು

ನೀವು ಏನು ಬೇಕಾದರೂ ಮಾಡಿಕೊಳ್ಳಿ ಆದರೆ ಬಾಳಾಸಾಹೇಬ್ ಹೆಸರು ಬಳಸಬೇಡಿ: ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 25, 2022 | 5:11 PM

Share

ಮುಂಬೈ: ಏಕನಾಥ್ ಶಿಂಧೆ (Eknath Shinde) ನೇತೃತ್ವದ ಬಂಡಾಯ ಗುಂಪು ತಮ್ಮ ಗುಂಪಿಗೆ ‘ಶಿವಸೇನಾ ಬಾಳಾಸಾಹೇಬ್’ (Shiv Sena Balasaheb)ಎಂದು ಹೆಸರಿಡುವುದಾಗಿ ಘೋಷಿಸಿದ ನಂತರ ಯಾರೂ ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಳಸಬಾರದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray)ಶನಿವಾರ ಹೇಳಿದ್ದಾರೆ. “ಕೆಲವರು ಏನಾದರೂ ಹೇಳಿ ಎಂದು ನನ್ನಲ್ಲಿ ಕೇಳುತ್ತಿದ್ದಾರೆ. ಈ ಮೊದಲೇ ನಾನು ಹೇಳಿದ್ದೆ ಅವರು (ಬಂಡಾಯ ಶಾಸಕರು) ಅವರು ಏನು ಬೇಕಾದರೂ ಮಾಡಿಕೊಳ್ಳಲಿ , ಅವರ ವಿಷಯದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಅವರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬಹುದು, ಆದರೆ ಯಾರೂ ಬಾಳಾಸಾಹೇಬ್ ಠಾಕ್ರೆ ಹೆಸರು ಬಳಸಬಾರದು ಎಂದು ಉದ್ಧವ್ ಹೇಳಿದ್ದಾರೆ. ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವ ನಡುವೆ ಶನಿವಾರ ಸಭೆ ಸೇರಿದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯು ಯಾವುದೇ ಗುಂಪು ‘ಶಿವಸೇನಾ’ ಮತ್ತು ‘ಬಾಳಾಸಾಹೇಬ್ ಠಾಕ್ರೆ’ ಹೆಸರನ್ನು ಬಳಸಲು ಅವಕಾಶ ನೀಡದಂತೆ ನಿರ್ಣಯವನ್ನು ಅಂಗೀಕರಿಸಿತು. ಈ ವಿಷಯದಲ್ಲಿಪಕ್ಷವು ಚುನಾವಣಾ ಆಯೋಗವನ್ನು ಸಂಪರ್ಕಿಸಲಿದೆ.

ಬಾಳಾಸಾಹೇಬ್ ಅವರ ನಿಜವಾದ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿರುವ ಏಕನಾಥ್ ಶಿಂಧೆ ಬಣ ಶಿವಸೇನೆ ಬಾಳಾಸಾಹೇಬ್ ಎಂದು ಹೆಸರಿಸುವ ನಿರ್ಧಾರವನ್ನು ಬಂಡಾಯ ಶಶಾಸಕ ದೀಪಕ್ ಕೇಸರ್ಕರ್ ಘೋಷಿಸಿದರು. ಒಡೆದ ಗುಂಪು ಯಾವುದೇ ಪಕ್ಷದೊಂದಿಗೆ ವಿಲೀನವಾಗುವುದಿಲ್ಲ ಎಂದು ಹೇಳಿರುವ ಅವರು, ಶಾಸಕರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹವನ್ನು ತಳ್ಳಿಹಾಕಿದ್ದಾರೆ.

“ಅವರು ಮತ ಕೇಳಲು ಬಯಸಿದರೆ, ಅವರು ಅದನ್ನು ತಮ್ಮ ತಂದೆಯ ಹೆಸರಿನಲ್ಲಿ ಭಿಕ್ಷೆ ಬೇಡಬೇಕು ಎಂದು ಉದ್ಧವ್ ಜಿ ಹೇಳಿದ್ದಾರೆ” ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

ಇದನ್ನೂ ಓದಿ
Image
Breaking: 16 ಬಂಡಾಯ ಶಿವಸೇನೆ ಶಾಸಕರಿಗೆ ನೋಟಿಸ್ ಜಾರಿ ಮಾಡಿದ ಉಪ ಸ್ಪೀಕರ್
Image
1978ರಲ್ಲಿ ಶರದ್ ಪವಾರ್​​ ಬಂಡಾಯ ಗುಂಪಿನ ನೇತೃತ್ವ ವಹಿಸಿ ಮಹಾರಾಷ್ಟ್ರ ಸರ್ಕಾರ ಉರುಳಿಸಿದ್ದರು: ಹಳೇ ಘಟನೆ ನೆನಪಿಸಿದ ಮಾಜಿ ಶಾಸಕ
Image
Maharashtra Crisis: ಮಹಾರಾಷ್ಟ್ರ ಬಿಕ್ಕಟ್ಟು; ಅತೃಪ್ತ ಶಾಸಕರ ಬಣಕ್ಕೆ ಶಿವಸೇನಾ- ಬಾಳಾಸಾಹೇಬ್ ಎಂದು ಹೆಸರಿಟ್ಟ ಏಕನಾಥ್ ಶಿಂಧೆ
Image
ಶಿವ ಸೇನೆಯ ಕೆಲ ಭಿಕ್ಷುಕರ ಕೈ ಹಿಡಿದು ಬಿಜೆಪಿ ತಾನೊಂದು ಮಹಾಶಕ್ತಿಯೆಂದು ಬಿಂಬಿಸಿಕೊಳ್ಳುತ್ತಿದೆ: ಸಾಮ್ನಾದಲ್ಲಿ ಸಂಪಾದಕೀಯ!

ಮಾತೋಶ್ರೀಯಿಂದ ಉದ್ಧವ್ ಸಭೆಯ ಅಧ್ಯಕ್ಷತೆ ವಹಿಸಬೇಕಾಗಿತ್ತು. ಆದರೆ ಅವರು ಸಭೆಗಾಗಿ ಶನಿವಾರ ದಾದರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ಬಂದಿದ್ದರು. ಕಳೆದ ಎರಡು ದಿನಗಳಲ್ಲಿ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಹಲವಾರು ಬಾರಿ ಸಂವಾದ ನಡೆಸಿದ್ದು ತಮ್ಮ ಮತ್ತು ಅವರ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ನಾವು ಶಿವಸೇನಾ ತೊರೆಯುತ್ತಿಲ್ಲ, ಶಿಂಧೆ ಶಾಸಕಾಂಗ ಪಕ್ಷದ ನಾಯಕರಾಗಿಯೇ  ಉಳಿಯಲಿದ್ದಾರೆ

ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಾಸಕರು ಈಗಲೂ ಶಿವಸೇನಾ ಸದಸ್ಯರಾಗಿದ್ದು, ವಿಧಾನಸಭೆಯಲ್ಲಿ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತವಿದೆ ಎಂದು ಶಿವಸೇನಾ ಬಂಡಾಯ ಪಾಳಯದ ವಕ್ತಾರ ದೀಪಕ್ ಕೇಸರ್ಕರ್ ಹೇಳಿದ್ದಾರೆ. ಏಕನಾಥ್ ಶಿಂಧೆ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಉಳಿದಿದ್ದಾರೆ ಎಂದು ಕೇಸರ್ಕರ್  ಹೇಳಿದ್ದಾರೆ.

Published On - 5:07 pm, Sat, 25 June 22

ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ