AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಏನು ಬೇಕಾದರೂ ಮಾಡಿಕೊಳ್ಳಿ ಆದರೆ ಬಾಳಾಸಾಹೇಬ್ ಹೆಸರು ಬಳಸಬೇಡಿ: ಉದ್ಧವ್ ಠಾಕ್ರೆ

ಈ ಮೊದಲೇ ನಾನು ಹೇಳಿದ್ದೆ ಅವರು (ಬಂಡಾಯ ಶಾಸಕರು) ಅವರು ಏನು ಬೇಕಾದರೂ ಮಾಡಿಕೊಳ್ಳಲಿ , ಅವರ ವಿಷಯದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಅವರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬಹುದು

ನೀವು ಏನು ಬೇಕಾದರೂ ಮಾಡಿಕೊಳ್ಳಿ ಆದರೆ ಬಾಳಾಸಾಹೇಬ್ ಹೆಸರು ಬಳಸಬೇಡಿ: ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 25, 2022 | 5:11 PM

Share

ಮುಂಬೈ: ಏಕನಾಥ್ ಶಿಂಧೆ (Eknath Shinde) ನೇತೃತ್ವದ ಬಂಡಾಯ ಗುಂಪು ತಮ್ಮ ಗುಂಪಿಗೆ ‘ಶಿವಸೇನಾ ಬಾಳಾಸಾಹೇಬ್’ (Shiv Sena Balasaheb)ಎಂದು ಹೆಸರಿಡುವುದಾಗಿ ಘೋಷಿಸಿದ ನಂತರ ಯಾರೂ ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಳಸಬಾರದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray)ಶನಿವಾರ ಹೇಳಿದ್ದಾರೆ. “ಕೆಲವರು ಏನಾದರೂ ಹೇಳಿ ಎಂದು ನನ್ನಲ್ಲಿ ಕೇಳುತ್ತಿದ್ದಾರೆ. ಈ ಮೊದಲೇ ನಾನು ಹೇಳಿದ್ದೆ ಅವರು (ಬಂಡಾಯ ಶಾಸಕರು) ಅವರು ಏನು ಬೇಕಾದರೂ ಮಾಡಿಕೊಳ್ಳಲಿ , ಅವರ ವಿಷಯದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಅವರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬಹುದು, ಆದರೆ ಯಾರೂ ಬಾಳಾಸಾಹೇಬ್ ಠಾಕ್ರೆ ಹೆಸರು ಬಳಸಬಾರದು ಎಂದು ಉದ್ಧವ್ ಹೇಳಿದ್ದಾರೆ. ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವ ನಡುವೆ ಶನಿವಾರ ಸಭೆ ಸೇರಿದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯು ಯಾವುದೇ ಗುಂಪು ‘ಶಿವಸೇನಾ’ ಮತ್ತು ‘ಬಾಳಾಸಾಹೇಬ್ ಠಾಕ್ರೆ’ ಹೆಸರನ್ನು ಬಳಸಲು ಅವಕಾಶ ನೀಡದಂತೆ ನಿರ್ಣಯವನ್ನು ಅಂಗೀಕರಿಸಿತು. ಈ ವಿಷಯದಲ್ಲಿಪಕ್ಷವು ಚುನಾವಣಾ ಆಯೋಗವನ್ನು ಸಂಪರ್ಕಿಸಲಿದೆ.

ಬಾಳಾಸಾಹೇಬ್ ಅವರ ನಿಜವಾದ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿರುವ ಏಕನಾಥ್ ಶಿಂಧೆ ಬಣ ಶಿವಸೇನೆ ಬಾಳಾಸಾಹೇಬ್ ಎಂದು ಹೆಸರಿಸುವ ನಿರ್ಧಾರವನ್ನು ಬಂಡಾಯ ಶಶಾಸಕ ದೀಪಕ್ ಕೇಸರ್ಕರ್ ಘೋಷಿಸಿದರು. ಒಡೆದ ಗುಂಪು ಯಾವುದೇ ಪಕ್ಷದೊಂದಿಗೆ ವಿಲೀನವಾಗುವುದಿಲ್ಲ ಎಂದು ಹೇಳಿರುವ ಅವರು, ಶಾಸಕರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹವನ್ನು ತಳ್ಳಿಹಾಕಿದ್ದಾರೆ.

“ಅವರು ಮತ ಕೇಳಲು ಬಯಸಿದರೆ, ಅವರು ಅದನ್ನು ತಮ್ಮ ತಂದೆಯ ಹೆಸರಿನಲ್ಲಿ ಭಿಕ್ಷೆ ಬೇಡಬೇಕು ಎಂದು ಉದ್ಧವ್ ಜಿ ಹೇಳಿದ್ದಾರೆ” ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

ಇದನ್ನೂ ಓದಿ
Image
Breaking: 16 ಬಂಡಾಯ ಶಿವಸೇನೆ ಶಾಸಕರಿಗೆ ನೋಟಿಸ್ ಜಾರಿ ಮಾಡಿದ ಉಪ ಸ್ಪೀಕರ್
Image
1978ರಲ್ಲಿ ಶರದ್ ಪವಾರ್​​ ಬಂಡಾಯ ಗುಂಪಿನ ನೇತೃತ್ವ ವಹಿಸಿ ಮಹಾರಾಷ್ಟ್ರ ಸರ್ಕಾರ ಉರುಳಿಸಿದ್ದರು: ಹಳೇ ಘಟನೆ ನೆನಪಿಸಿದ ಮಾಜಿ ಶಾಸಕ
Image
Maharashtra Crisis: ಮಹಾರಾಷ್ಟ್ರ ಬಿಕ್ಕಟ್ಟು; ಅತೃಪ್ತ ಶಾಸಕರ ಬಣಕ್ಕೆ ಶಿವಸೇನಾ- ಬಾಳಾಸಾಹೇಬ್ ಎಂದು ಹೆಸರಿಟ್ಟ ಏಕನಾಥ್ ಶಿಂಧೆ
Image
ಶಿವ ಸೇನೆಯ ಕೆಲ ಭಿಕ್ಷುಕರ ಕೈ ಹಿಡಿದು ಬಿಜೆಪಿ ತಾನೊಂದು ಮಹಾಶಕ್ತಿಯೆಂದು ಬಿಂಬಿಸಿಕೊಳ್ಳುತ್ತಿದೆ: ಸಾಮ್ನಾದಲ್ಲಿ ಸಂಪಾದಕೀಯ!

ಮಾತೋಶ್ರೀಯಿಂದ ಉದ್ಧವ್ ಸಭೆಯ ಅಧ್ಯಕ್ಷತೆ ವಹಿಸಬೇಕಾಗಿತ್ತು. ಆದರೆ ಅವರು ಸಭೆಗಾಗಿ ಶನಿವಾರ ದಾದರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ಬಂದಿದ್ದರು. ಕಳೆದ ಎರಡು ದಿನಗಳಲ್ಲಿ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಹಲವಾರು ಬಾರಿ ಸಂವಾದ ನಡೆಸಿದ್ದು ತಮ್ಮ ಮತ್ತು ಅವರ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ನಾವು ಶಿವಸೇನಾ ತೊರೆಯುತ್ತಿಲ್ಲ, ಶಿಂಧೆ ಶಾಸಕಾಂಗ ಪಕ್ಷದ ನಾಯಕರಾಗಿಯೇ  ಉಳಿಯಲಿದ್ದಾರೆ

ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಾಸಕರು ಈಗಲೂ ಶಿವಸೇನಾ ಸದಸ್ಯರಾಗಿದ್ದು, ವಿಧಾನಸಭೆಯಲ್ಲಿ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತವಿದೆ ಎಂದು ಶಿವಸೇನಾ ಬಂಡಾಯ ಪಾಳಯದ ವಕ್ತಾರ ದೀಪಕ್ ಕೇಸರ್ಕರ್ ಹೇಳಿದ್ದಾರೆ. ಏಕನಾಥ್ ಶಿಂಧೆ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಉಳಿದಿದ್ದಾರೆ ಎಂದು ಕೇಸರ್ಕರ್  ಹೇಳಿದ್ದಾರೆ.

Published On - 5:07 pm, Sat, 25 June 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್