AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಫ್​ಐ ಜೊತೆ ಬಜರಂಗದಳ, ಆರ್​ಎಸ್​ಎಸ್​ ಹೋಲಿಸಿ ಸಮಸ್ಯೆ ಮೈಗೆಳೆದುಕೊಳ್ಳಬೇಡಿ: ಖರ್ಗೆಗೆ ಮಹೇಶ್ ಟೆಂಗಿನಕಾಯಿ ತಿರುಗೇಟು

ಪಿಎಫ್​ಐ, ಎಸ್​ಡಿಪಿಐ ಜೊತೆ ಬಜರಂಗದಳ ಹಾಗೂ ಆರ್​ಎಸ್​ಎಸ್​ ಅನ್ನು ಹೋಲಿಸಿ ಅನಗತ್ಯವಾಗಿ ಸಮಸ್ಯೆ ಮೈಗೆಳೆದುಕೊಳ್ಳಬೇಡಿ ಎಂದು ಪ್ರಿಯಾಂಕ್ ಖರ್ಗೆಗೆ ಮಹೇಶ್ ಟೆಂಗಿನಕಾಯಿ ತಿರುಗೇಟು ನೀಡಿದ್ದಾರೆ.

ಪಿಎಫ್​ಐ ಜೊತೆ ಬಜರಂಗದಳ, ಆರ್​ಎಸ್​ಎಸ್​ ಹೋಲಿಸಿ ಸಮಸ್ಯೆ ಮೈಗೆಳೆದುಕೊಳ್ಳಬೇಡಿ: ಖರ್ಗೆಗೆ ಮಹೇಶ್ ಟೆಂಗಿನಕಾಯಿ ತಿರುಗೇಟು
ಮಹೇಶ್ ಟೆಂಗಿನಕಾಯಿ ಮತ್ತು ಪ್ರಿಯಾಂಕ್ ಖರ್ಗೆ
Rakesh Nayak Manchi
Rakesh Nayak Manchi|

Updated on: May 25, 2023 | 2:59 PM

Share

ಹುಬ್ಬಳ್ಳಿ: ಪಿಎಫ್​ಐ (PFI), ಎಸ್​ಡಿಪಿಐ (SDPI) ಜೊತೆ ಬಜರಂಗದಳ ಹಾಗೂ ಆರ್​ಎಸ್​ಎಸ್ (RSS)​ ಅನ್ನು ಹೋಲಿಸಿ ಅನಗತ್ಯವಾಗಿ ಸಮಸ್ಯೆ ಮೈಗೆಳೆದುಕೊಳ್ಳಬೇಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಹುಬ್ಬಳ್ಳಿ ಧಾರವಾಡ ಕೇಂದ್ರ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginkai) ತಿರುಗೇಟು ನೀಡಿದ್ದಾರೆ. ಕಾನೂನು ಚೌಕಟ್ಟಿನಲ್ಲಿ, ಸಂವಿಧಾನಾತ್ಮಕವಾಗಿ ಕಟ್ಟಿ ಹಾಕ್ತೀವಿ. ಬಜರಂಗದಳ, ಪಿಎಫ್​ಐ, ಆರ್​ಎಸ್​ಎಸ್ ಇರಬಹುದು ನಿಷೇಧ ಮಾಡೋದಕ್ಕೂ ನಾವು ಹಿಂದೇಟು ಹಾಕೋದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದರು.

ಇದಕ್ಕೆ ತಿರುಗೇಟು ನೀಡಿದ ಟಿಂಗಿನಕಾಯಿ, ಕರ್ನಾಟಕ ರಾಜ್ಯದ ಜನತೆ ನಿಮಗೆ ಬಹುಮತ ಕೊಟ್ಟಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀವು ನೀಡಿರುವ ಗ್ಯಾರಂಟಿ ಬಗ್ಗೆ ಮಾತಾಡಿ. 10 ಕೆಜಿ ಅಥವಾ 15 ಕೆಜಿ ಅಕ್ಕಿ ಕೊಡುತ್ತೀರೋ, ವಿದ್ಯುತ್ ಕೊಡುತ್ತೀರೋ ಹೇಳಿ. ಅದು ಬಿಟ್ಟು ಗ್ಯಾರಂಟಿ ಜಾರಿ ಮಾಡದೆ ವಿಷಯಾಂತರ ಮಾಡಲು ಪ್ರಯತ್ನಿಸಬೇಡಿ. ಬಜರಂಗದಳ, ಆರ್​​ಎಸ್​ಎಸ್​ ನಿಷೇಧಿಸುತ್ತೇವೆ ಅನ್ನೋದು ಸರಿಯಲ್ಲ. ರಾಜ್ಯದ ಜನ ನಿಮಗೆ ನೀಡಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರದ 9ನೇ ವರ್ಷಾಚರಣೆ: ರಾಷ್ಟ್ರವ್ಯಾಪಿ ಸಂಪರ್ಕ ಅಭಿಯಾನ ಆಯೋಜಿಸಲಿದೆ ಬಿಜೆಪಿ

ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್, ಪಿಎಫ್‌ಐ, ಭಜರಂಗದಳ, ಪಿಎಫ್​ಐ ಸೇರಿದಂತೆ ಮತೀಯ ಸಂಘಟನೆಗಳ ನಿಷೇಧಿಸುವುದಾಗಿ. ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿ ಬ್ಯಾನ್​ ಆಗಿರುವ ಪಿಎಫ್​ಐ ಮತ್ತು ಅದರ ರಾಜಕೀಯ ಪಕ್ಷ ಎಸ್​ಡಿಪಿಐ ಜೊತೆ ಬಜರಂಗದಳ ಹಾಗೂ ಆರ್​ಎಸ್​ಎಸ್​ ಅನ್ನು ಹೋಲಿಕೆ ಮಾಡಿ ನಿಷೇಧದ ಬಗ್ಗೆ ಭರವಸೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮತ್ತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ ಪ್ರಿಯಾಂಕ್ ಖರ್ಗೆ, ಯಾವುದೇ ಸಂಘಟನೆ ಇರಬಹುದು ರಾಜಕೀಯ, ಸಾಮಾಜಿಕ, ನಮ್ಮ ರಾಜ್ಯದ ನೆಮ್ಮದಿಯನ್ನ ಶಾಂತಿ ಕೆಡಿಸಿದರೆ ಕಾನೂನು ಚೌಕಟ್ಟಿನಲ್ಲಿ, ಸಂವಿಧಾನಾತ್ಮಕವಾಗಿ ಕಟ್ಟಿಹಾಕುತ್ತೇವೆ. ಬಜರಂಗದಳ, ಪಿಎಫ್​ಐ, ಆರ್​ಎಸ್​ಎಸ್ ಇರಬಹುದು ನಿಷೇಧ ಮಾಡುವುದಕ್ಕೂ ನಾವು ಹಿಂದೇಟು ಹಾಕುವುದಿಲ್ಲ. ಅಸಂವಿಧಾನಿಕ ಚಟುವಟಿಕೆ, ಕಾನೂನು ಬಾಹಿರ ಚಟುವಟಿಕೆ, ಕೋಮು ವಿಷ ಬೀಜ ಬಿತ್ತಿ ರಾಜಕೀಯ ಬೇಳೆ ಬೇಯಿಸಕೊಂಡರೆ ಕಾನೂನು ಮೂಲಕ ಯಾವ ಕ್ರಮ ಕೈಗೊಳ್ಳಬೇಕೋ ಆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ