AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಫ್​ಐ ಜೊತೆ ಬಜರಂಗದಳ, ಆರ್​ಎಸ್​ಎಸ್​ ಹೋಲಿಸಿ ಸಮಸ್ಯೆ ಮೈಗೆಳೆದುಕೊಳ್ಳಬೇಡಿ: ಖರ್ಗೆಗೆ ಮಹೇಶ್ ಟೆಂಗಿನಕಾಯಿ ತಿರುಗೇಟು

ಪಿಎಫ್​ಐ, ಎಸ್​ಡಿಪಿಐ ಜೊತೆ ಬಜರಂಗದಳ ಹಾಗೂ ಆರ್​ಎಸ್​ಎಸ್​ ಅನ್ನು ಹೋಲಿಸಿ ಅನಗತ್ಯವಾಗಿ ಸಮಸ್ಯೆ ಮೈಗೆಳೆದುಕೊಳ್ಳಬೇಡಿ ಎಂದು ಪ್ರಿಯಾಂಕ್ ಖರ್ಗೆಗೆ ಮಹೇಶ್ ಟೆಂಗಿನಕಾಯಿ ತಿರುಗೇಟು ನೀಡಿದ್ದಾರೆ.

ಪಿಎಫ್​ಐ ಜೊತೆ ಬಜರಂಗದಳ, ಆರ್​ಎಸ್​ಎಸ್​ ಹೋಲಿಸಿ ಸಮಸ್ಯೆ ಮೈಗೆಳೆದುಕೊಳ್ಳಬೇಡಿ: ಖರ್ಗೆಗೆ ಮಹೇಶ್ ಟೆಂಗಿನಕಾಯಿ ತಿರುಗೇಟು
ಮಹೇಶ್ ಟೆಂಗಿನಕಾಯಿ ಮತ್ತು ಪ್ರಿಯಾಂಕ್ ಖರ್ಗೆ
Rakesh Nayak Manchi
|

Updated on: May 25, 2023 | 2:59 PM

Share

ಹುಬ್ಬಳ್ಳಿ: ಪಿಎಫ್​ಐ (PFI), ಎಸ್​ಡಿಪಿಐ (SDPI) ಜೊತೆ ಬಜರಂಗದಳ ಹಾಗೂ ಆರ್​ಎಸ್​ಎಸ್ (RSS)​ ಅನ್ನು ಹೋಲಿಸಿ ಅನಗತ್ಯವಾಗಿ ಸಮಸ್ಯೆ ಮೈಗೆಳೆದುಕೊಳ್ಳಬೇಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಹುಬ್ಬಳ್ಳಿ ಧಾರವಾಡ ಕೇಂದ್ರ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginkai) ತಿರುಗೇಟು ನೀಡಿದ್ದಾರೆ. ಕಾನೂನು ಚೌಕಟ್ಟಿನಲ್ಲಿ, ಸಂವಿಧಾನಾತ್ಮಕವಾಗಿ ಕಟ್ಟಿ ಹಾಕ್ತೀವಿ. ಬಜರಂಗದಳ, ಪಿಎಫ್​ಐ, ಆರ್​ಎಸ್​ಎಸ್ ಇರಬಹುದು ನಿಷೇಧ ಮಾಡೋದಕ್ಕೂ ನಾವು ಹಿಂದೇಟು ಹಾಕೋದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದರು.

ಇದಕ್ಕೆ ತಿರುಗೇಟು ನೀಡಿದ ಟಿಂಗಿನಕಾಯಿ, ಕರ್ನಾಟಕ ರಾಜ್ಯದ ಜನತೆ ನಿಮಗೆ ಬಹುಮತ ಕೊಟ್ಟಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀವು ನೀಡಿರುವ ಗ್ಯಾರಂಟಿ ಬಗ್ಗೆ ಮಾತಾಡಿ. 10 ಕೆಜಿ ಅಥವಾ 15 ಕೆಜಿ ಅಕ್ಕಿ ಕೊಡುತ್ತೀರೋ, ವಿದ್ಯುತ್ ಕೊಡುತ್ತೀರೋ ಹೇಳಿ. ಅದು ಬಿಟ್ಟು ಗ್ಯಾರಂಟಿ ಜಾರಿ ಮಾಡದೆ ವಿಷಯಾಂತರ ಮಾಡಲು ಪ್ರಯತ್ನಿಸಬೇಡಿ. ಬಜರಂಗದಳ, ಆರ್​​ಎಸ್​ಎಸ್​ ನಿಷೇಧಿಸುತ್ತೇವೆ ಅನ್ನೋದು ಸರಿಯಲ್ಲ. ರಾಜ್ಯದ ಜನ ನಿಮಗೆ ನೀಡಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರದ 9ನೇ ವರ್ಷಾಚರಣೆ: ರಾಷ್ಟ್ರವ್ಯಾಪಿ ಸಂಪರ್ಕ ಅಭಿಯಾನ ಆಯೋಜಿಸಲಿದೆ ಬಿಜೆಪಿ

ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್, ಪಿಎಫ್‌ಐ, ಭಜರಂಗದಳ, ಪಿಎಫ್​ಐ ಸೇರಿದಂತೆ ಮತೀಯ ಸಂಘಟನೆಗಳ ನಿಷೇಧಿಸುವುದಾಗಿ. ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿ ಬ್ಯಾನ್​ ಆಗಿರುವ ಪಿಎಫ್​ಐ ಮತ್ತು ಅದರ ರಾಜಕೀಯ ಪಕ್ಷ ಎಸ್​ಡಿಪಿಐ ಜೊತೆ ಬಜರಂಗದಳ ಹಾಗೂ ಆರ್​ಎಸ್​ಎಸ್​ ಅನ್ನು ಹೋಲಿಕೆ ಮಾಡಿ ನಿಷೇಧದ ಬಗ್ಗೆ ಭರವಸೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮತ್ತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ ಪ್ರಿಯಾಂಕ್ ಖರ್ಗೆ, ಯಾವುದೇ ಸಂಘಟನೆ ಇರಬಹುದು ರಾಜಕೀಯ, ಸಾಮಾಜಿಕ, ನಮ್ಮ ರಾಜ್ಯದ ನೆಮ್ಮದಿಯನ್ನ ಶಾಂತಿ ಕೆಡಿಸಿದರೆ ಕಾನೂನು ಚೌಕಟ್ಟಿನಲ್ಲಿ, ಸಂವಿಧಾನಾತ್ಮಕವಾಗಿ ಕಟ್ಟಿಹಾಕುತ್ತೇವೆ. ಬಜರಂಗದಳ, ಪಿಎಫ್​ಐ, ಆರ್​ಎಸ್​ಎಸ್ ಇರಬಹುದು ನಿಷೇಧ ಮಾಡುವುದಕ್ಕೂ ನಾವು ಹಿಂದೇಟು ಹಾಕುವುದಿಲ್ಲ. ಅಸಂವಿಧಾನಿಕ ಚಟುವಟಿಕೆ, ಕಾನೂನು ಬಾಹಿರ ಚಟುವಟಿಕೆ, ಕೋಮು ವಿಷ ಬೀಜ ಬಿತ್ತಿ ರಾಜಕೀಯ ಬೇಳೆ ಬೇಯಿಸಕೊಂಡರೆ ಕಾನೂನು ಮೂಲಕ ಯಾವ ಕ್ರಮ ಕೈಗೊಳ್ಳಬೇಕೋ ಆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ