AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಹೆಚ್ಚಾದ ಕರೆಂಟ್ ಬಿಲ್​ನ್ನು ಪಾವತಿ ಮಾಡಬೇಡಿ: ಸಾರ್ವಜನಿಕರಲ್ಲಿ ವಿನಂತಿಸಿದ ಶಾಸಕ ಯತ್ನಾಳ್​

ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಯಾರೂ ಹೆಚ್ಚಾದ ಕರೆಂಟ್ ಬಿಲ್​ನ್ನು ಪಾವತಿ ಮಾಡಬೇಡಿ: ಸಾರ್ವಜನಿಕರಲ್ಲಿ ವಿನಂತಿಸಿದ ಶಾಸಕ ಯತ್ನಾಳ್​
ಬಸನಗೌಡ ಪಾಟೀಲ್ ಯತ್ನಾಳ್
ಗಂಗಾಧರ​ ಬ. ಸಾಬೋಜಿ
|

Updated on: Jun 10, 2023 | 6:23 PM

Share

ವಿಜಯಪುರ: ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರವಾಗಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal) ಕಿಡಿ ಕಾರಿದ್ದಾರೆ. 200 ಯೂನಿಟ್ ಒಳಗೆ ಬಳಸುವವರು ಬಿಲ್ ವಾಪಸ್ ಕಳಿಸಿ. 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಿನಮ್ರತೆಯಿಂದ ವಾಪಸ್​ ಕಳುಹಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಮಹಿಳೆಯರು ಎಲ್ಲಾ ಬಸ್‌ಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ. ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಾ ಪಾಟೀಲನಿಗೂ ಕೊಡಬೇಕು. ಎಲ್ಲರಿಗೂ ಕೊಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಯತ್ನಾಳ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: CM Siddaramaiah: ಮೈಸೂರು ಭಾಗದಲ್ಲಿ ಡಾ ಯತೀಂದ್ರ ತನಗಿಂತ ಹೆಚ್ಚು ಜನಪ್ರಿಯ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸುತ್ತಾರೆ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಟ್ವೀಟ್​ನಲ್ಲಿ ಏನಿದೆ?

ಸಾರ್ವಜನಿಕರಲ್ಲಿ ವಿನಂತಿ

ಯಾವುದೇ ಷರತ್ತಿನಬಗ್ಗೆ ಹೇಳದೆ ಎಲ್ಲಾ ಉಚಿತ, ಖಚಿತ ಹಾಗು ನಿಶ್ಚಿತ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಹಾಜನತೆಗೆ ಮೋಸ ಮಾಡಿದೆ.

  • ಯಾರು ಹೆಚ್ಚಾದ ಕರೆಂಟ್ ಬಿಲ್ ಪಾವತಿ ಮಾಡಬೇಡಿ, 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಾಪಸ್ ವಿನಮ್ರತೆಯಿಂದ ಕಳುಹಿಸಿ.
  • ಮಹಿಳೆಯರು ಎಲ್ಲ ಬಸ್ಸುಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ, ಕಂಡೆಕ್ಟರ್ ಹಾಗು ಸಿಬ್ಬಂದಿಗೆ ಸಿದ್ದರಾಮಯ್ಯರನ್ನು ಕೇಳಿ ಎಂದು ಹೇಳಿ.
  • ನೀರಿನ ಬಿಲ್ ಹೆಚ್ಚಾದರೆ ವಾಪಸ್ ಕಳುಹಿಸಿ.
  • 2000 ರೂ ಪಡೆಯಲು ಎಲ್ಲ ಮಹಿಳೆಯರು ನೋಂದಾಯಿಸಿ.

ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದೆ, ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಪಾಟಿಲನಿಗೂ ಕೊಡಬೇಕು, ಎಲ್ಲರಿಗೂ ಕೊಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More