AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಹೆಚ್ಚಾದ ಕರೆಂಟ್ ಬಿಲ್​ನ್ನು ಪಾವತಿ ಮಾಡಬೇಡಿ: ಸಾರ್ವಜನಿಕರಲ್ಲಿ ವಿನಂತಿಸಿದ ಶಾಸಕ ಯತ್ನಾಳ್​

ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಯಾರೂ ಹೆಚ್ಚಾದ ಕರೆಂಟ್ ಬಿಲ್​ನ್ನು ಪಾವತಿ ಮಾಡಬೇಡಿ: ಸಾರ್ವಜನಿಕರಲ್ಲಿ ವಿನಂತಿಸಿದ ಶಾಸಕ ಯತ್ನಾಳ್​
ಬಸನಗೌಡ ಪಾಟೀಲ್ ಯತ್ನಾಳ್
ಗಂಗಾಧರ​ ಬ. ಸಾಬೋಜಿ
|

Updated on: Jun 10, 2023 | 6:23 PM

Share

ವಿಜಯಪುರ: ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರವಾಗಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal) ಕಿಡಿ ಕಾರಿದ್ದಾರೆ. 200 ಯೂನಿಟ್ ಒಳಗೆ ಬಳಸುವವರು ಬಿಲ್ ವಾಪಸ್ ಕಳಿಸಿ. 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಿನಮ್ರತೆಯಿಂದ ವಾಪಸ್​ ಕಳುಹಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಮಹಿಳೆಯರು ಎಲ್ಲಾ ಬಸ್‌ಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ. ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಾ ಪಾಟೀಲನಿಗೂ ಕೊಡಬೇಕು. ಎಲ್ಲರಿಗೂ ಕೊಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಯತ್ನಾಳ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: CM Siddaramaiah: ಮೈಸೂರು ಭಾಗದಲ್ಲಿ ಡಾ ಯತೀಂದ್ರ ತನಗಿಂತ ಹೆಚ್ಚು ಜನಪ್ರಿಯ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸುತ್ತಾರೆ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಟ್ವೀಟ್​ನಲ್ಲಿ ಏನಿದೆ?

ಸಾರ್ವಜನಿಕರಲ್ಲಿ ವಿನಂತಿ

ಯಾವುದೇ ಷರತ್ತಿನಬಗ್ಗೆ ಹೇಳದೆ ಎಲ್ಲಾ ಉಚಿತ, ಖಚಿತ ಹಾಗು ನಿಶ್ಚಿತ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಹಾಜನತೆಗೆ ಮೋಸ ಮಾಡಿದೆ.

  • ಯಾರು ಹೆಚ್ಚಾದ ಕರೆಂಟ್ ಬಿಲ್ ಪಾವತಿ ಮಾಡಬೇಡಿ, 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಾಪಸ್ ವಿನಮ್ರತೆಯಿಂದ ಕಳುಹಿಸಿ.
  • ಮಹಿಳೆಯರು ಎಲ್ಲ ಬಸ್ಸುಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ, ಕಂಡೆಕ್ಟರ್ ಹಾಗು ಸಿಬ್ಬಂದಿಗೆ ಸಿದ್ದರಾಮಯ್ಯರನ್ನು ಕೇಳಿ ಎಂದು ಹೇಳಿ.
  • ನೀರಿನ ಬಿಲ್ ಹೆಚ್ಚಾದರೆ ವಾಪಸ್ ಕಳುಹಿಸಿ.
  • 2000 ರೂ ಪಡೆಯಲು ಎಲ್ಲ ಮಹಿಳೆಯರು ನೋಂದಾಯಿಸಿ.

ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದೆ, ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಪಾಟಿಲನಿಗೂ ಕೊಡಬೇಕು, ಎಲ್ಲರಿಗೂ ಕೊಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ