AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಯೋಜನೆಗೆ 1 ರೂ ಖರ್ಚು ಮಾಡುವುದು ಬೇಡ, ನಿಗದಿಯಾದ ಹಣವನ್ನು ಸರ್ಕಾರವೇ ಭರಿಸಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆ ಅರ್ಜಿ ಹೆಸರಿನಲ್ಲಿ 150 ರೂ. ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತಿಯಾಗಿ ಪ್ರತಿಕ್ರಿಯೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಗೆ ಒಂದೂ ರೂ. ಖರ್ಚು ಮಾಡುವುದು ಬೇಡ. ಅರ್ಜಿ ಸಲ್ಲಿಕೆಗೆ ನಿಗದಿಯಾದ 20 ರೂ. ಹಣವನ್ನು ಸರ್ಕಾರ ಭರಿಸಲಿದೆ ಎಂದಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ 1 ರೂ ಖರ್ಚು ಮಾಡುವುದು ಬೇಡ, ನಿಗದಿಯಾದ ಹಣವನ್ನು ಸರ್ಕಾರವೇ ಭರಿಸಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Sahadev Mane
| Edited By: |

Updated on: Jun 29, 2023 | 5:53 PM

Share

ಬೆಳಗಾವಿ: ಆನಲೈನ್​ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಅರ್ಜಿ ಹೆಸರಿನಲ್ಲಿ 150 ರೂ. ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಳ್ಳಾರಿಯಲ್ಲಿ ಈ ರೀತಿ ಪ್ರಕರಣ ನಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಗೃಹಲಕ್ಷ್ಮೀ ಯೋಜನೆಗೆ ಒಂದೂ ರೂ. ಖರ್ಚು ಮಾಡುವುದು ಬೇಡ. ಅರ್ಜಿ ಸಲ್ಲಿಕೆಗೆ ನಿಗದಿಯಾದ 20 ರೂ. ಹಣವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅರ್ಜಿಗೆ 20 ರೂ. ನೀಡುತ್ತೇವೆ

ನನ್ನ ಇಲಾಖೆಯ ಎಲ್ಲ ಸಿಬ್ಬಂದಿಗೂ ಈಗಾಗಲೇ ಸೂಚನೆ ನೀಡಿದ್ದೇನೆ. ಸೇವಾಸಿಂಧು, ಗ್ರಾಮ ಒನ್, ನಾಡಕಚೇರಿ, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್​ನಲ್ಲಿ ಅರ್ಜಿ ಸಲ್ಲಿಸುವ ವೆಚ್ಚವನ್ನು ಸರ್ಕಾರ ಭರಿಸುತ್ತೆ. ಸೇವಾ ಕೇಂದ್ರಗಳಿಗೆ ಇಲಾಖೆಯಿಂದಲೇ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅರ್ಜಿಗೆ 20 ರೂ. ನೀಡುತ್ತೇವೆ.

ಇದನ್ನೂ ಓದಿ: ಸಿದ್ದರಾಮಯ್ಯ ನಿವಾಸಕ್ಕೆ ಬೆನ್ಜ್ ಕಾರಿನಲ್ಲಿ ಬಂತು ಬಕ್ರೀದ್ ಬಿರಿಯಾನಿ

ಮಧ್ಯವರ್ತಿಗಳ ಆಮಿಷಗಳಿಗೆ ಮಹಿಳೆಯರು ಕಿವಿಗೊಡಬಾರದು. ಅರ್ಜಿ ಸಲ್ಲಿಕೆ ವೇಳೆ ಯಾರೂ ಒಂದು ರೂಪಾಯಿಯನ್ನೂ ಕೊಡಬೇಡಿ. ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಯಾವುದೇ ಟೈಂ ಲಿಮಿಟ್ಸ್​​ ಇಲ್ಲ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ನಿರಂತರವಾಗಿ ಇರುತ್ತೆ ಎಂದು ಮಾಹಿತಿ ನೀಡಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡಬೇಕು ಎಂಬುದೇ ನಮ್ಮ ಉದ್ದೇಶ

ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಹಾಲು ವಿತರಣೆ ಸ್ಥಗಿತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಳೆದ ನಾಲ್ಕು ತಿಂಗಳಿಂದ ನನ್ನ ಇಲಾಖೆಗೆ ಹಾಲು ಪೂರೈಕೆ ಆಗುತ್ತಿಲ್ಲ. ಕೆಎಂಎಫ್‌ನವರು ಹಿಂದಿನ ಬೆಲೆಗೆ ಹಾಲಿನ ಪೌಡರ್ ಕೊಡಲು ಆಗಲ್ಲ ಎಂದು ಸ್ಥಗಿತಗೊಳಿಸಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡಬೇಕು ಎಂಬುದೇ ನಮ್ಮ ಉದ್ದೇಶ. ಹಾಲಿನ ಪೌಡರ್ ಕೊಡಲು ಆಗದಿದ್ದರೆ ಬೇರೆ ಪೌಷ್ಟಿಕ ಆಹಾರ ವಿತರಣೆ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟೀಕೆ ಮಾಡುವವರು ಅನ್ನಭಾಗ್ಯ ಫಲಾನುಭವಿಗಳಲ್ಲ: ಬಿಜೆಪಿ ನಾಯಕರಿಗೆ ಶಾಸಕ ರಾಘವೇಂದ್ರ ಹಿಟ್ನಾಳ್​ ತಿರುಗೇಟು

ಭಾವುಕರಾದ ಲಕ್ಷ್ಮೀ ಹೆಬ್ಬಾಳ್ಕರ್​

ಬೆಳಗಾವಿಯಲ್ಲಿ ಗ್ರೇಡ್​-2 ತಹಶೀಲ್ದಾರ್​ ಅನುಮಾನಾಸ್ಪದ ಸಾವು ಹಿನ್ನೆಲೆ ಅಶೋಕ್ ಮಣ್ಣಿಕೇರಿ ಅಂತಿಮ ದರ್ಶನ ಪಡೆಯುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾದರು. ಬಳಿಕ ಮಾತನಾಡಿದ ಅವರು,​ ಮಧ್ಯರಾತ್ರಿ 3 ಗಂಟೆ ಸುಮಾರಿಗೆ 2-3 ಬಾರಿ ಮಿಸ್​​ಕಾಲ್​ ಇತ್ತು. ಬೆಳಗ್ಗೆ ಅಶೋಕ್​ ಅಣ್ಣಿಕೇರಿ ಮೃತಪಟ್ಟಿರುವುದು ಗೊತ್ತಾಯಿತು. ನಾಲ್ಕೂವರೆ ವರ್ಷ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು. ಅಶೋಕ್ ಮಣ್ಣಿಕೇರಿ ಕ್ಷೇತ್ರದ ಜನರ ಕಷ್ಟ ಸುಖ ಕೇಳುತ್ತಿದ್ದರು. ಇಂತಹ ಆಪ್ತ ಸಹಾಯಕನನ್ನು ಕಳೆದುಕೊಂಡಿದ್ದಕ್ಕೆ ನೋವಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Sahadev Mane
Sahadev Mane
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ