AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡ ಫ್ಯಾಮಿಲಿ ಟಾರ್ಗೆಟ್ ಮಾಡಬೇಡಿ, ಅದರಿಂದ ಕಾಂಗ್ರೆಸ್ಸಿಗೆ ಆಗುವ ಲಾಭ ಏನೂ ಇಲ್ಲ: ರಾಹುಲ್ ಗಾಂಧಿ ಕಿವಿಮಾತು

ಜೆಡಿಎಸ್ ಅಧಿನಾಯಕರಾದ ಹೆಚ್​ ಡಿ ದೇವೇಗೌಡ ಮತ್ತು ಹೆಚ್​ ಡಿ ಕುಮಾರಸ್ವಾಮಿ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ನೀಡಬೇಡಿ. ಅಂತಹ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಆಗುವ ನಷ್ಟವೇ ಜಾಸ್ತಿ. ಎಐಸಿಸಿ ತಂಡ ಸಿದ್ದಪಡಿಸಿರುವ ಸಮೀಕ್ಷೆಯಲ್ಲೂ ಇದೇ ಅಭಿಪ್ರಾಯ ವ್ಯಕ್ತವಾಗಿದೆ ಎಂದು ರಾಹುಲ್ ಗಾಂಧಿ ಸೂಕ್ಷ್ಮವಾಗಿ ಸಿದ್ದರಾಮಯ್ಯಗೆ ಹೇಳಿದ್ದಾರೆ.

ದೇವೇಗೌಡ ಫ್ಯಾಮಿಲಿ ಟಾರ್ಗೆಟ್ ಮಾಡಬೇಡಿ, ಅದರಿಂದ ಕಾಂಗ್ರೆಸ್ಸಿಗೆ ಆಗುವ ಲಾಭ ಏನೂ ಇಲ್ಲ: ರಾಹುಲ್ ಗಾಂಧಿ ಕಿವಿಮಾತು
ದೇವೇಗೌಡ ಫ್ಯಾಮಿಲಿ ಟಾರ್ಗೆಟ್ ಮಾಡಬೇಡಿ: ರಾಹುಲ್ ಗಾಂಧಿ ಕಿವಿಮಾತು
TV9 Web
| Edited By: |

Updated on:Jun 30, 2022 | 6:34 PM

Share

ದೆಹಲಿ: ಹೆಚ್​ ಡಿ ದೇವೇಗೌಡ ಫ್ಯಾಮಿಲಿ ಟಾರ್ಗೆಟ್ ಮಾಡದಂತೆ ಕರ್ನಾಟಕ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ. ಜೆಡಿಎಸ್ ಅಧಿನಾಯಕರಾದ ಹೆಚ್​ ಡಿ ದೇವೇಗೌಡ ಮತ್ತು ಹೆಚ್​ ಡಿ ಕುಮಾರಸ್ವಾಮಿ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ನೀಡಬೇಡಿ. ವೈಯಕ್ತಿಕ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಆಗುವ ಲಾಭ ಏನೂ ಇಲ್ಲ. ಅಂತಹ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಆಗುವ ನಷ್ಟವೇ ಜಾಸ್ತಿ. ಎಐಸಿಸಿ ತಂಡ ಸಿದ್ದಪಡಿಸಿರುವ ಸಮೀಕ್ಷೆಯಲ್ಲೂ ಇದೇ ಅಭಿಪ್ರಾಯ ವ್ಯಕ್ತವಾಗಿದೆ ಎಂದು ರಾಹುಲ್ ಗಾಂಧಿ ಸೂಕ್ಷ್ಮವಾಗಿ ಸಿದ್ದರಾಮಯ್ಯಗೆ ಹೇಳಿದ್ದಾರೆ.

ದೇವೇಗೌಡರ ಕುಟುಂಬ ನಿಮ್ಮನ್ನು ಟಾರ್ಗೆಟ್‌ ಮಾಡಿದರೂ, ನೀವು ಉತ್ತರ ಕೊಡಬೇಡಿ. ಕಾಂಗ್ರೆಸ್ ಒಕ್ಕಲಿಗ ನಾಯಕರಿಂದ ಅಂತಹುದಕ್ಕೆ ಪ್ರತಿಕ್ರಿಯೆ ಕೊಡಿಸುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.

ವೈಯಕ್ತಿಕ ಹೇಳಿಕೆಗಳಿಂದ ಹಳೆ ಮೈಸೂರು ಭಾಗದಲ್ಲಿ ಹಿನ್ನಡೆ ಸಾಧ್ಯತೆಯಿದೆ. ಹೆಚ್​ ಡಿ ದೇವೇಗೌಡ ಮತ್ತು ಹೆಚ್​ ಡಿ ಕುಮಾರಸ್ವಾಮಿ ಅವರುಗಳನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಿದ್ದರಿಂದಲೇ ಕಳೆದ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ಸಮೀಕ್ಷಾ ವರದಿಯಲ್ಲಿ ಉಲ್ಲೇಖಗೊಂಡಿದೆ. ಹೀಗಾಗಿ ನಿನ್ನೆ ದೆಹಲಿ ಭೇಟಿ ವೇಳೆ ರಾಹುಲ್ ಗಾಂಧಿ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ಇದನ್ನೂ ಓದಿ:

ಸಾಲುಮರದ ತಿಮ್ಮಕ್ಕಗೆ ಸಚಿವ​ ಸ್ಥಾನಮಾನ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ:

ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್​ ತಪರಾಕಿ ಬಳಿಕ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್​​ಗೆ ಎಸಿಬಿ ಫುಲ್ ಗ್ರಿಲ್!

 

Published On - 6:22 pm, Thu, 30 June 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್