AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮೈ ಮುಟ್ಟಬೇಡಿ, ನಾನು ಗಂಡು ಎಂದು ಮಹಿಳಾ ಪೊಲೀಸರಲ್ಲಿ ಹೇಳಿದ ಬಿಜೆಪಿ ನಾಯಕ; ಲೇವಡಿ ಮಾಡಿದ ಟಿಎಂಸಿ

ಬಳಿಕ ಮಾತನಾಡಿದ ಸುವೇಂದು, ನನ್ನನ್ನು ಬಲವಂತವಾಗಿ ಹಿಡಿದೆಳೆಯಲೆತ್ನಿಸಿದರೂ ನಾನು ಮಹಿಳೆಗೆ ಗೌರವ ಕೊಡುವ ಕಾರಣ ಪ್ರತಿಕ್ರಿಯೆ ನೀಡಿಲ್ಲ ಎಂದಿದ್ದಾರೆ.

ನನ್ನ ಮೈ ಮುಟ್ಟಬೇಡಿ, ನಾನು ಗಂಡು ಎಂದು ಮಹಿಳಾ ಪೊಲೀಸರಲ್ಲಿ ಹೇಳಿದ ಬಿಜೆಪಿ ನಾಯಕ; ಲೇವಡಿ ಮಾಡಿದ ಟಿಎಂಸಿ
ಸುವೇಂದು ಅಧಿಕಾರಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 13, 2022 | 9:13 PM

ದೆಹಲಿ:  ಮಮತಾ ಬ್ಯಾನರ್ಜಿ (Mamata Banerjee) ಅವರ ತೃಣಮೂಲ ಕಾಂಗ್ರೆಸ್  ನೇತೃತ್ವದ (TMC)  ಪಶ್ಚಿಮ ಬಂಗಾಳದ ಸರ್ಕಾರ ವಿರುದ್ಧ ಬಿಜೆಪಿ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದೆ. ಈ ಸಂದರ್ಭದಲ್ಲಿ ಕೋಲ್ಕತ್ತಾದಲ್ಲಿ ನಡೆದ ಘರ್ಷಣೆಯಲ್ಲಿ, ಬಿಜೆಪಿ ನಾಯಕರು ಹೇಳಿದ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಆಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವ ಮಹಿಳಾ ಪೊಲೀಸರಲ್ಲಿ ಈ ಮಾತು ಹೇಳಿದ್ದು ಇದನ್ನು ಟಿಎಂಸಿ ಟ್ರೋಲ್ ಮಾಡುತ್ತಿದೆ.  ನನ್ನ ಮೈ ಮುಟ್ಟಬೇಡ. ನೀನು ಹೆಂಗಸು, ನಾನು ಗಂಡು ಎಂದು ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari)ಹೇಳುತ್ತಿರುವ ವಿಡಿಯೊವನ್ನು ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದೆ. ಸುವೇಂದು ಅವರನ್ನು ಜೈಲು ವ್ಯಾನ್‌ಗೆ ಕರೆದೊಯ್ಯಲು ಪ್ರಯತ್ನಿಸುತ್ತಿದ್ದ ಮಹಿಳಾ ಪೊಲೀಸರಲ್ಲಿ ಅವರು ಈ ರೀತಿ ಹೇಳಿದ್ದಾರೆ. ನಾನೊಬ್ಬ ಕಾನೂನು ಪಾಲಿಸುವ ನಾಗರಿಕ ಎಂದ ಸುವೇಂದು, ಪುರುಷ ಪೋಲೀಸರನ್ನು ಕರೆದಿದ್ದಾರೆ. ಸುವೇಂದು ಹಿರಿಯ ಅಧಿಕಾರಿ ಆಕಾಶ್ ಮಘರಿಯಾ ಕರೆದೊಯ್ದಿದ್ದಾರೆ. ಬಳಿಕ ಮಾತನಾಡಿದ ಸುವೇಂದು, ನನ್ನನ್ನು ಬಲವಂತವಾಗಿ ಹಿಡಿದೆಳೆಯಲೆತ್ನಿಸಿದರೂ ನಾನು ಮಹಿಳೆಗೆ ಗೌರವ ಕೊಡುವ ಕಾರಣ ಪ್ರತಿಕ್ರಿಯೆ ನೀಡಿಲ್ಲ ಎಂದಿದ್ದಾರೆ. ಬಂಧಿತರಾಗಿರುವ ಪಕ್ಷದ ಸಂಸದ ಲಾಕೆಟ್ ಚಟರ್ಜಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ “ನಾನು ಪ್ರತಿ ಮಹಿಳೆಯ ದೃಷ್ಟಿಯಲ್ಲಿ ಮಾ ದುರ್ಗೆಯನ್ನು ನೋಡುತ್ತೇನೆ” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

ಸುವೇಂಧು ಅಧಿಕಾರಿ ಅವರು 2021 ರ ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರಿದ್ದರು. ಇದಕ್ಕಿಂತ ಮೊದಲು ಅವರು ತೃಣಮೂಲ ಕಾಂಗ್ರೆಸ್‌ನ ನಾಯಕಿ ಮತ್ತು ಮಮತಾ ಬ್ಯಾನರ್ಜಿ ಅವರ ನಿಕಟ ಸಹಾಯಕರಾಗಿದ್ದರು.

ಇದನ್ನೂ ಓದಿ
Image
ಮಮತಾ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಕೋಲ್ಕತ್ತಾದಲ್ಲಿ ಬಿಜೆಪಿ ಪ್ರತಿಭಟನೆ: ಕಾರಿಗೆ ಬೆಂಕಿ, ಪೊಲೀಸರಿಂದ ಅಶ್ರುವಾಯು ಪ್ರಯೋಗ
Image
ನಿತೀಶ್ ಕುಮಾರ್‌ಗೆ ಮತ್ತೊಂದು ಆಘಾತ: ಜೆಡಿಯುನ 15 ಜಿಲ್ಲಾ ಪಂಚಾಯ್ತಿ ಸದಸ್ಯರು ಬಿಜೆಪಿಗೆ ಸೇರ್ಪಡೆ
Image
Nabanna March: ಟಿಎಂಸಿ ಭ್ರಷ್ಟಾಚಾರದ ವಿರುದ್ಧ ಬಂಗಾಳ ಬಿಜೆಪಿಯ ನಬನ್ನ ಚಲೋ ಪಾದಯಾತ್ರೆ

ಮಮತಾ ಬ್ಯಾನರ್ಜಿ ಸರ್ಕಾರದ ಪ್ರಧಾನ ಕಚೇರಿಯಾದ ನಬನ್ನಾಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾಗ ಹಲವಾರು ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಆಡಳಿತ ಪಕ್ಷದ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಈ ಪ್ರತಿಭಟನೆ ನಡೆಸಿದೆ.

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ