AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಕೆ ಸುಧಾಕರ್ ಆಕ್ರೋಶ

ಕಾಂಗ್ರೆಸ್ ಮುಖಂಡರ ಹತಾಶೆ, ಜನರ ದಾರಿ ತಪ್ಪಿಸುವ ಆತುರದ ಪ್ರದರ್ಶನವಲ್ಲದೆ ಮತ್ತೇನಲ್ಲ. ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೇ ಸರಿ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಸಚಿವರಾಗಿದ್ದರು.

ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಕೆ ಸುಧಾಕರ್ ಆಕ್ರೋಶ
ಪ್ರಿಯಾಂಕ್ ಖರ್ಗೆ, ಕೆ ಸುಧಾಕರ್
TV9 Web
| Edited By: |

Updated on: Nov 14, 2021 | 3:57 PM

Share

ಬೆಂಗಳೂರು: ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಡಾಕೆ ಸುಧಾಕರ್, ಪ್ರಿಯಾಂಕ್ ಖರ್ಗೆಯವರೇ ನಿಮ್ಮ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನ ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಸಚಿವರಿಗೆ ಸರ್ಕಾರದ ಪರ ಮಾತಾಡುವ ಹೊಣೆ ಇದೆ. ಸಾಮೂಹಿಕ ಹೊಣೆಗಾರಿಕೆ ಇದೆ ಎನ್ನುವುದನ್ನು ಮರೆತದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಇದು ಕಾಂಗ್ರೆಸ್ ಮುಖಂಡರ ಹತಾಶೆ, ಜನರ ದಾರಿ ತಪ್ಪಿಸುವ ಆತುರದ ಪ್ರದರ್ಶನವಲ್ಲದೆ ಮತ್ತೇನಲ್ಲ. ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೇ ಸರಿ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಸಚಿವರಾಗಿದ್ದರು. ನಂತರ ಸಮಾಜ ಕಲ್ಯಾಣ ಖಾತೆಯ ಸಚಿವರಾಗಿದ್ದರು. ಆಗ ಕೇವಲ ಇಲಾಖೆ ಬಗ್ಗೆ ಮಾತ್ರ ಮಾತನಾಡಿದ್ದರಾ? ಇದನ್ನು ಪ್ರಿಯಾಂಕ್ ಖರ್ಗೆ ಒಮ್ಮೆ ನೆನಪು ಮಾಡಿಕೊಳ್ಳಲಿ. ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸುವುದಿಲ್ಲ ಎಂದು ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ನಿಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮೇಲೆ ನೂರು ಸುಳ್ಳು ಹೇಳುವ ನಿಮ್ಮ ಕುತಂತ್ರಗಳನ್ನು ಜನರ ಮುಂದಿಡಲೇಬೇಕು. ಈ ಕೆಲಸವನ್ನು ಕೇವಲ ಸಚಿವರು ಮಾತ್ರವಲ್ಲ, ಪ್ರತಿ ಬಿಜೆಪಿ ಕಾರ್ಯಕರ್ತ ನಾಟಕ ಬಯಲು ಮಾಡುತ್ತಾರೆ. ಕಾಂಗ್ರೆಸ್ ನಾಟಕವನ್ನು ಬಯಲಿಗೆಳೆಯಲು ಸಿದ್ಧರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಸಚಿವ ಡಾ. ಕೆ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಆಟದಿಂದ ವಂಚಿತರಾದ ಮಕ್ಕಳು; ಆಟದ ಮೈದಾನದಲ್ಲಿ ಗೋವಿನಜೋಳ ಬೆಳೆ, ಗ್ರಾಮಸ್ಥರಿಂದ ಆಕ್ರೋಶ

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ