AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Cabinet expansion: ಡಾ. ಎಂ ಸಿ ಸುಧಾಕರ್​ಗೆ ಒಲಿದ ಸಚಿವ ಭಾಗ್ಯ

ಚಿಂತಾಮಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಂ ಸಿ ಸುಧಾಕರ್​ಗೆ ಸಚಿವ ಭಾಗ್ಯ ಒಲಿದಿದ್ದು, ಇಂದು(ಮೇ.27) ಪ್ರಮಾಣ ವಚನ ಸ್ವೀಕರಿಸಿದರು.

Karnataka Cabinet expansion: ಡಾ. ಎಂ ಸಿ ಸುಧಾಕರ್​ಗೆ ಒಲಿದ ಸಚಿವ ಭಾಗ್ಯ
ಎಂ ಸಿ ಸುಧಾಕರ್​
ಕಿರಣ್ ಹನುಮಂತ್​ ಮಾದಾರ್
|

Updated on:May 27, 2023 | 1:15 PM

Share

ಚಿಕ್ಕಬಳ್ಳಾಫುರ: ಚಿಂತಾಮಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಂ ಸಿ ಸುಧಾಕರ್​(Dr.MC Sudhakar)ಗೆ ಸಚಿವ ಭಾಗ್ಯ ಒಲಿದಿದ್ದು, ಇಂದು(ಮೇ.27) ಪ್ರಮಾಣ ವಚನ ಸ್ವೀಕರಿಸಿದರು. ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಪ್ರಭಾವಿ ನಾಯಕ, ಮೂರು ಬಾರಿ ಶಾಸಕ, ಎರಡು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿದ್ದ ಎಂಸಿ ಆಂಜನೇಯ ರೆಡ್ಡಿ ಅವರ ಮೊಮ್ಮಗನಾಗಿರುವ ಇವರು, 5 ಬಾರಿ ಶಾಸಕರಾಗಿದ್ದ ಎಂ.ಸಿ ಚೌಡರೆಡ್ಡಿ ಅವರ ಪುತ್ರರಾಗಿದ್ದಾರೆ. ತಾವು ರಾಜಕೀಯ ಪ್ರವೇಶಿಸುವ ಮೂಲಕ ತಮ್ಮ ಕುಟುಂಬದ ರಾಜಕಾರಣದ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ವೃತ್ತಿ ಮತ್ತು ಶಿಕ್ಷಣ

ಮೂಲತಃ ರಾಜಕೀಯ ಹಿನ್ನಲೆ ಇರುವ ಎಂ ಸಿ ಸುಧಾಕರ್ ಅವರು ಎಂ.ಡಿ.ಎಸ್ ಓದಿದ್ದು, (ಡೆಂಟಲ್ ವೈದ್ಯರು) ಉಪನ್ಯಾಸಕ ವೃತ್ತಿಯನ್ನ ಮಾಡಿದ್ದಾರೆ. ಇದೀಗ 54 ವರ್ಷ ವಯಸ್ಸಿನವರಾದ ಇವರು 2004ರಲ್ಲಿ ಹಾಗೂ 2008ರಲ್ಲಿ ಎರಡು ಭಾರಿ ಕಾಂಗ್ರೆಸ್​ ಶಾಸಕರು ಆಗಿದ್ರು. ಬಳಿಕ ಎರಡು ಭಾರಿ ಪಕ್ಷೇತರ ಅಭ್ಯರ್ಥಿಯಾಗಿ ಸೋತಿದ್ರು. ಇದೀಗ 2023ರ ವಿಧಾನಸಭಾ ಚುನಾವಣೆಯಲ್ಲಿ ಮೂರನೆ ಬಾರಿಗೆ ಗೆಲ್ಲುವುದರ ಮೂಲಕ ಶಾಸಕರಾಗಿದ್ದವರು ಸಚಿವರಾಗಿ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ:S S Mallikarjun: ಎಸ್ ಎಸ್ ಮಲ್ಲಿಕಾರ್ಜುನ್​ ರಾಜಕೀಯಕ್ಕೆ ಅನಿರೀಕ್ಷಿತ ಆಗಮನ, ನಾಲ್ಕನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ

ರಾಜಕೀಯ ಹಿನ್ನಲೆ

1999ರಲ್ಲಿ ಚಿಂತಾಮಣಿಯಲ್ಲಿ ತಂದೆ ಚೌಡರೆಡ್ಡಿ ಅವರು ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಸೋತ ಬಳಿಕ ಡಾ.ಎಂ.ಸಿ ಸುಧಾಕರ್‌ ಅವರು ರಾಜಕೀಯದಲ್ಲಿ ಸಕ್ರಿಯರಾಗುತ್ತಾರೆ. 2004ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಸುಧಾಕರ್‌ ಅವರು ಗೆಲುವು ಸಾಧಿಸಿ, ಮೊದಲ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದರು. ಬಳಿಕ 2008ರ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆಲುವನ್ನು ಸಾಧಿಸಿದರು. ಆದರೆ, 2013ರಲ್ಲಿ ಡಾ ಎಂಸಿ ಸುಧಾಕರ್‌ಗೆ ಕಾಂಗ್ರೆಸ್‌ ಟಿಕೆಟ್‌ ನಿರಾಕರಿಸಲಾಯಿತು.

ಈ ಹಿನ್ನೆಲೆ ಕಾಂಗ್ರೆಸ್‌ ತೊರೆದ ಸುಧಾಕರ್‌ 2013ರಲ್ಲಿ ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸಿದರು. ಪಕ್ಷೇತರರಾಗಿ ಸ್ಪರ್ಧಿಸಿದರು ಕೂಡ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಸುಧಾಕರ್‌ಗೆ ಟಿಕೆಟ್‌ ನೀಡದೇ ಬೇರೆಯವರನ್ನು ಕಣಕ್ಕಿಳಿಸಿದ್ದ ಕಾಂಗ್ರೆಸ್‌ ಹೀನಾಯವಾಗಿ ಸೋಲು ಅನುಭವಿಸಿತ್ತು. 2016ರ ಫೆಬ್ರವರಿಯಲ್ಲಿ ಎಂಸಿ ಸುಧಾಕರ್‌ ವಾಪಸ್‌ ಕಾಂಗ್ರೆಸ್‌ಗೆ ಸೇರಿದರು. ಆದರೆ, 2018ರಲ್ಲಿ ಮತ್ತೆ ಟಿಕೆಟ್‌ ಸಿಗದ ಕಾರಣ ಪಕ್ಷ ತೊರೆದು, ಭಾರತೀಯ ಪ್ರಜಾ ಪಕ್ಷದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಮತ್ತೆ ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Sat, 27 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!