AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷ ಹಿನ್ನೆಲೆ: 2ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ಶಂಕರ ಪಾಟೀಲ್ ಮುನೇನಕೊಪ್ಪ

Basavaraj Bommai Cabinet: ಈ ತಾಂತ್ರಿಕ ದೋಷ ಅರಿವಾದ ಬಳಿಕ ಸಚಿವ ಮುನೇನಕೊಪ್ಪ ರಾಜಭವನ ಸಂಪರ್ಕ ಮಾಡಿದ್ದರು. ಬಳಿಕ, ಶಂಕರ ಪಾಟೀಲ್ ರಾಜ್ಯಪಾಲರೆದುರು ಗೌಪ್ಯತಾ ಪ್ರಮಾಣ ವಿಧಿ ಸ್ವೀಕಾರ ಮಾಡಿದ್ದಾರೆ.

ತಾಂತ್ರಿಕ ದೋಷ ಹಿನ್ನೆಲೆ: 2ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ಶಂಕರ ಪಾಟೀಲ್ ಮುನೇನಕೊಪ್ಪ
ಶಂಕರ ಪಾಟೀಲ್ ಮುನೇನಕೊಪ್ಪ
Follow us
TV9 Web
| Updated By: ganapathi bhat

Updated on:Aug 04, 2021 | 8:23 PM

ಬೆಂಗಳೂರು: ಕರ್ನಾಟಕ ನೂತನ ಸಚಿವ ಸಂಪುಟ ಪ್ರಮಾಣವಚನ ಸಮಾರಂಭದಲ್ಲಿ ತಮ್ಮ ಪ್ರಮಾಣ ಸ್ವೀಕಾರ ವೇಳೆ ತಾಂತ್ರಿಕ ದೋಷ ಉಂಟಾಗಿದ್ದು, ಅದು ಗಮನಕ್ಕೆ ಬಂದ ಮೇಲೆ ಶಂಕರ ಪಾಟೀಲ್ ಮುನೇನಕೊಪ್ಪ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಘಟನೆ ಇಂದು (ಆಗಸ್ಟ್ 4) ನಡೆದಿದೆ. ಅವರು ರಾಜಭವನದಲ್ಲಿ ರಾಜ್ಯಪಾಲರ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಶಂಕರ ಪಾಟೀಲ್ ಮುನೇನಕೊಪ್ಪ 2ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ರಾಜಭವನದಲ್ಲಿ ರಾಜ್ಯಪಾಲರ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ ವೇಳೆ ತಾಂತ್ರಿಕ ದೋಷ ಉಂಟಾಗಿತ್ತು. ಮುನೇನಕೊಪ್ಪ, ಅಧಿಕಾರ ಪ್ರಮಾಣವನ್ನೇ ಎರಡು ಬಾರಿ ಓದಿದ್ದರು. ಗೌಪ್ಯತಾ ಪ್ರಮಾಣ ವಿಧಿ ಪೂರೈಸಿರಲಿಲ್ಲ.

ಈ ತಾಂತ್ರಿಕ ದೋಷ ಅರಿವಾದ ಬಳಿಕ ಸಚಿವ ಮುನೇನಕೊಪ್ಪ ರಾಜಭವನ ಸಂಪರ್ಕ ಮಾಡಿದ್ದರು. ಬಳಿಕ, ಶಂಕರ ಪಾಟೀಲ್ ರಾಜ್ಯಪಾಲರೆದುರು ಗೌಪ್ಯತಾ ಪ್ರಮಾಣ ವಿಧಿ ಸ್ವೀಕಾರ ಮಾಡಿದ್ದಾರೆ. ಈ ವೇಳೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.

ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿ ಸರಿಯಾಗಿ ಒಂದು ವಾರದ ಬಳಿಕ ಇಂದು (ಆಗಸ್ಟ್ 4) ಸಚಿವ ಸಂಪುಟ ಅಸ್ಥಿತ್ವಕ್ಕೆ ಬಂದಿದೆ. ಹೊಸ ಸಚಿವರಾಗಿ 29 ಮಂದಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ರಾಜ್ಯಪಾಲ ಥಾವರಚಂದ ಗೆಹಲೋತ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.

ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು, ವಿ. ಸೋಮಣ್ಣ, ಉಮೇಶ್ ವಿಶ್ವನಾಥ್ ಕತ್ತಿ, ಎಸ್. ಅಂಗಾರ, ಜೆ.ಸಿ. ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಸಿ.ಸಿ. ಪಾಟೀಲ್, ಆನಂದ್ ಸಿಂಗ್, ಕೋಟ ಶ್ರೀನಿವಾಸ ಪೂಜಾರಿ, ಪ್ರಭು ಚೌಹಾಣ್, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಎಸ್​.ಟಿ. ಸೋಮಶೇಖರ್, ಬಿ.ಸಿ. ಪಾಟೀಲ್, ಭೈರತಿ ಬಸವರಾಜ್, ಡಾ.ಕೆ. ಸುಧಾಕರ್, ಕೆ. ಗೋಪಾಲಯ್ಯ, ಶಶಿಕಲಾ ಜೊಲ್ಲೆ, ಎಂಟಿಬಿ ನಾಗರಾಜ್, ಕೆ.ಸಿ. ನಾರಾಯಣಗೌಡ, ಬಿ.ಸಿ. ನಾಗೇಶ್, ವಿ. ಸುನಿಲ್ ಕುಮಾರ್, ಹಾಲಪ್ಪ ಆಚಾರ್, ಶಂಕರ ಪಾಟೀಲ್ ಮುನೇನಕೊಪ್ಪ, ಮುನಿರತ್ನ ಪ್ರಮಾಣವಚನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ವ್ಯಕ್ತಿ ಚಿತ್ರಣ: ಕೃಷಿ ಕುಟುಂಬದ ಹಿನ್ನೆಲೆಯ ನವಲಗುಂದ ಕ್ಷೇತ್ರದ ಶಾಸಕ, ನೂತನ ಸಚಿವ ಶಂಕರ ಪಾಟೀಲ್​ ಮುನೇನಕೊಪ್ಪ

ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ: ಸಚಿವ ಸಂಪುಟ ರಚನೆ ಬಳಿಕ ಸಿಎಂ ಮೊದಲ ಮಾತು

(Due to Technical Issue MLA Shankar Patil Munenakoppa take Oath for second time at Rajbhavan)

Published On - 8:17 pm, Wed, 4 August 21

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ