AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರು ರಾಜಕೀಯಕ್ಕೆ ಬರಬೇಕೆಂದು ಡಿವಿ ಸದಾನಂದಗೌಡ ನಿವೃತ್ತಿ: ಹೇಳಿಕೆಗೆ ಸ್ಪಷ್ಟನೆ ನೀಡಿದ ಯಡಿಯೂರಪ್ಪ

ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದರು. ಇದೀಗ ಸ್ಪಷ್ಟನೆ ನೀಡಿದ ಅವರು, ಯುವಕರು ರಾಜಕೀಯಕ್ಕೆ ಬರಬೇಕೆಂದು ಸದಾನಂದಗೌಡ ಅವರು ನಿವೃತ್ತಿ ಘೋಷಿಸಿದ್ದಾರೆ ಎಂದರು.

ಯುವಕರು ರಾಜಕೀಯಕ್ಕೆ ಬರಬೇಕೆಂದು ಡಿವಿ ಸದಾನಂದಗೌಡ ನಿವೃತ್ತಿ: ಹೇಳಿಕೆಗೆ ಸ್ಪಷ್ಟನೆ ನೀಡಿದ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದಗೌಡ ಮತ್ತು ಬಿಎಸ್ ಯಡಿಯೂರಪ್ಪ
ಕಿರಣ್​ ಹನಿಯಡ್ಕ
| Edited By: |

Updated on: Nov 10, 2023 | 6:53 AM

Share

ಬೆಂಗಳೂರು, ನ.10: ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ (D.V.Sadananda Gowda) ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa), ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಯುವಕರು ರಾಜಕೀಯಕ್ಕೆ ಬರಬೇಕೆಂಬ ಕಾರಣಕ್ಕಾಗಿ ಸದಾನಂದಗೌಡ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂದರು.

ಈ ಬಗ್ಗೆ ಟ್ವೀಟ್ ಮಾಡಿದ ಯಡಿಯೂರಪ್ಪ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವ‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ‌ ನಾನೂ ಸೇರಿದಂತೆ, ಹಿರಿಯ ನಾಯಕರಾದ ಸದಾನಂದಗೌಡರು, ಎಲ್ಲರೂ ಒಟ್ಟಾಗಿ ದುಡಿಯುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಚುನಾವಣಾ ನಿವೃತ್ತಿಗೆ ಹೈಕಮಾಂಡ್ ಸೂಚನೆ: ಯಡಿಯೂರಪ್ಪ ಹೇಳಿಕೆಗೆ ಡಿವಿ ಸದಾನಂದಗೌಡ ಹೇಳಿದ್ದೇನು?

ಯುವಕರು ರಾಜಕೀಯದಲ್ಲಿ ಮುಂದೆ ಬರಬೇಕೆಂದು ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆಯೆ ವಿನಃ ಅವರಿಗೆ ಯಾರೂ ಒತ್ತಡ ಹೇರಿಲ್ಲ. ನಾನು‌ ಹೇಳಿರುವ ಹೇಳಿಕೆಯನ್ನು‌ ಕೆಲ ಮಾಧ್ಯಮಗಳಲ್ಲಿ ತಪ್ಪಾಗಿ ಅರ್ಥೈಸಲಾಗಿದೆ. ಅವರು ನಿವೃತ್ತಿ ಘೋಷಿಸಿದರೂ ಸಕ್ರಿಯ ರಾಜಕಾರಣದಲ್ಲಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ 25ಕ್ಕೂ ಅಧಿಕ ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮಿಸಲಿದ್ದಾರೆ ಎಂದರು.

ಇದನ್ನೂ ಓದಿ: ಹೈಕಮಾಂಡ್ ಅವಮಾನಿಸಿ ಕಳುಹಿಸಿದ್ದಕ್ಕೆ ನೊಂದ ಡಿವಿ ಸದಾನಂದಗೌಡರಿಂದ ರಾಜಕೀಯ ನಿವೃತ್ತಿ: ಕಾಂಗ್ರೆಸ್

ಜನರ ಆಶಯದಂತೆ, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವ ನಿಟ್ಟಿನಲ್ಲಿ, ಪಕ್ಷ ಸಂಘಟನೆಯ ಕಾರ್ಯದಲ್ಲಿ ನಾವೆಲ್ಲರೂ ಒಂದಾಗಿ ಮುನ್ನಡೆಯುತ್ತಿದ್ದೇವೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Haniyadka
Kiran Haniyadka
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ