AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್ ಅವಮಾನಿಸಿ ಕಳುಹಿಸಿದ್ದಕ್ಕೆ ನೊಂದ ಡಿವಿ ಸದಾನಂದಗೌಡರಿಂದ ರಾಜಕೀಯ ನಿವೃತ್ತಿ: ಕಾಂಗ್ರೆಸ್

ಚುನಾವಣಾ ರಾಜಕೀಯದಿಂದ ಸದಾನಂದಗೌಡ ನಿವೃತ್ತಿ ಘೋಷಿಸಿದ ಬಗ್ಗೆ ಟ್ವೀಟ್ ಮೂಲಕ ವ್ಯಂಗ್ಯವಾಡಿದ ಕರ್ನಾಟಕ ರಾಜ್ಯ ಕಾಂಗ್ರೆಸ್ ಘಟಕ, ಬಿಜೆಪಿ ಹೈಕಮಾಂಡ್​ ನಾಯಕರು ಕರೆಸಿ ಅವಮಾನಿಸಿ ಕಳುಹಿಸಿದ್ದರು. ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಅಣುಕಿಸಿದೆ.

ಹೈಕಮಾಂಡ್ ಅವಮಾನಿಸಿ ಕಳುಹಿಸಿದ್ದಕ್ಕೆ ನೊಂದ ಡಿವಿ ಸದಾನಂದಗೌಡರಿಂದ ರಾಜಕೀಯ ನಿವೃತ್ತಿ: ಕಾಂಗ್ರೆಸ್
ಹೈಕಮಾಂಡ್ ಅವಮಾನಿಸಿ ಕಳುಹಿಸಿದ್ದಕ್ಕೆ ನೊಂದ ಡಿವಿ ಸದಾನಂದಗೌಡರಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on: Nov 09, 2023 | 5:39 PM

ಬೆಂಗಳೂರು, ನ.9: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಡಿವಿ ಸದಾನಂದಗೌಡ (DV Sadananda Gowda) ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ನಾಯಕರ ಆಹ್ವಾನದ ಮೇರೆಗೆ ಹೈಕಮಾಂಡ್ ಭೇಟಿಯಾದ ಸದಾನಂದಗೌಡ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ (Congress) ಘಟಕ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಬಿಜೆಪಿ ಹೈಕಮಾಂಡ್​ ನಾಯಕರು ಕರೆಸಿ ಅವಮಾನಿಸಿ ಕಳುಹಿಸಿದ್ದರು. ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ಅಣುಕಿಸಿದೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಎಳೆತಂದು “ಮತ್ತೆ ಅವಮಾನವಾಗುವ ಸುಳಿವನ್ನು ಅರಿತು ಗುಡ್​ಬೈ ಹೇಳಿದ್ದಾರೆ” ಎಂದು ಹೇಳಿದೆ.

ಇದನ್ನೂ ಓದಿ: ಚುನಾವಣಾ ನಿವೃತ್ತಿಗೆ ಹೈಕಮಾಂಡ್ ಸೂಚನೆ: ಯಡಿಯೂರಪ್ಪ ಹೇಳಿಕೆಗೆ ಡಿವಿ ಸದಾನಂದಗೌಡ ಹೇಳಿದ್ದೇನು?

ಕಾಂಗ್ರೆಸ್ ಟ್ವೀಟ್​ನಲ್ಲಿ ಏನಿದೆ?

“ಬಿಜೆಪಿ ಹೈಕಮಾಂಡ್ ನಾಯಕರು ಕರೆಸಿ ಅವಮಾನಿಸಿ ಕಳಿಸಿದ್ದರಿಂದ ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. “ಸಂತೋಷ ಕೂಟ”ದ ದಾಳಕ್ಕೆ ಮುಂದಿನ ಲೋಕಸಭೆಯ ಟಿಕೆಟ್ ಸಿಗದೆ ಮತ್ತೊಮ್ಮೆ ಅವಮಾನವಾಗುವ ಸುಳಿವನ್ನು ಅರಿತು ಈಗಲೇ ಗುಡ್ ಬೈ ಹೇಳಿದ್ದಾರೆ. ಎಲ್ಲಾ ತಲೆಗಳನ್ನೂ ಉರುಳಿಸಿ “ನಾಯಕತ್ವ ಮುಕ್ತ ಬಿಜೆಪಿ” ಮಾಡುವಲ್ಲಿ ಸಂತೋಷ ಕೂಟ ಯಶಸ್ವಿಯಾಗಿದೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ