ಹೈಕಮಾಂಡ್ ಅವಮಾನಿಸಿ ಕಳುಹಿಸಿದ್ದಕ್ಕೆ ನೊಂದ ಡಿವಿ ಸದಾನಂದಗೌಡರಿಂದ ರಾಜಕೀಯ ನಿವೃತ್ತಿ: ಕಾಂಗ್ರೆಸ್

ಚುನಾವಣಾ ರಾಜಕೀಯದಿಂದ ಸದಾನಂದಗೌಡ ನಿವೃತ್ತಿ ಘೋಷಿಸಿದ ಬಗ್ಗೆ ಟ್ವೀಟ್ ಮೂಲಕ ವ್ಯಂಗ್ಯವಾಡಿದ ಕರ್ನಾಟಕ ರಾಜ್ಯ ಕಾಂಗ್ರೆಸ್ ಘಟಕ, ಬಿಜೆಪಿ ಹೈಕಮಾಂಡ್​ ನಾಯಕರು ಕರೆಸಿ ಅವಮಾನಿಸಿ ಕಳುಹಿಸಿದ್ದರು. ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಅಣುಕಿಸಿದೆ.

ಹೈಕಮಾಂಡ್ ಅವಮಾನಿಸಿ ಕಳುಹಿಸಿದ್ದಕ್ಕೆ ನೊಂದ ಡಿವಿ ಸದಾನಂದಗೌಡರಿಂದ ರಾಜಕೀಯ ನಿವೃತ್ತಿ: ಕಾಂಗ್ರೆಸ್
ಹೈಕಮಾಂಡ್ ಅವಮಾನಿಸಿ ಕಳುಹಿಸಿದ್ದಕ್ಕೆ ನೊಂದ ಡಿವಿ ಸದಾನಂದಗೌಡರಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್
Edited By: Rakesh Nayak Manchi

Updated on: Nov 09, 2023 | 5:39 PM

ಬೆಂಗಳೂರು, ನ.9: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಡಿವಿ ಸದಾನಂದಗೌಡ (DV Sadananda Gowda) ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ನಾಯಕರ ಆಹ್ವಾನದ ಮೇರೆಗೆ ಹೈಕಮಾಂಡ್ ಭೇಟಿಯಾದ ಸದಾನಂದಗೌಡ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ (Congress) ಘಟಕ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಬಿಜೆಪಿ ಹೈಕಮಾಂಡ್​ ನಾಯಕರು ಕರೆಸಿ ಅವಮಾನಿಸಿ ಕಳುಹಿಸಿದ್ದರು. ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ಅಣುಕಿಸಿದೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಎಳೆತಂದು “ಮತ್ತೆ ಅವಮಾನವಾಗುವ ಸುಳಿವನ್ನು ಅರಿತು ಗುಡ್​ಬೈ ಹೇಳಿದ್ದಾರೆ” ಎಂದು ಹೇಳಿದೆ.

ಇದನ್ನೂ ಓದಿ: ಚುನಾವಣಾ ನಿವೃತ್ತಿಗೆ ಹೈಕಮಾಂಡ್ ಸೂಚನೆ: ಯಡಿಯೂರಪ್ಪ ಹೇಳಿಕೆಗೆ ಡಿವಿ ಸದಾನಂದಗೌಡ ಹೇಳಿದ್ದೇನು?

ಕಾಂಗ್ರೆಸ್ ಟ್ವೀಟ್​ನಲ್ಲಿ ಏನಿದೆ?

“ಬಿಜೆಪಿ ಹೈಕಮಾಂಡ್ ನಾಯಕರು ಕರೆಸಿ ಅವಮಾನಿಸಿ ಕಳಿಸಿದ್ದರಿಂದ ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. “ಸಂತೋಷ ಕೂಟ”ದ ದಾಳಕ್ಕೆ ಮುಂದಿನ ಲೋಕಸಭೆಯ ಟಿಕೆಟ್ ಸಿಗದೆ ಮತ್ತೊಮ್ಮೆ ಅವಮಾನವಾಗುವ ಸುಳಿವನ್ನು ಅರಿತು ಈಗಲೇ ಗುಡ್ ಬೈ ಹೇಳಿದ್ದಾರೆ. ಎಲ್ಲಾ ತಲೆಗಳನ್ನೂ ಉರುಳಿಸಿ “ನಾಯಕತ್ವ ಮುಕ್ತ ಬಿಜೆಪಿ” ಮಾಡುವಲ್ಲಿ ಸಂತೋಷ ಕೂಟ ಯಶಸ್ವಿಯಾಗಿದೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us