ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ

ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದಾರೆ.

ಸಿದ್ದರಾಮಯ್ಯ ಸಮಬಲದಲ್ಲಿ ಕುಸ್ತಿ ಆಡಲು ದೈಹಿಕ, ಮಾನಸಿಕ ಸಾಮರ್ಥ್ಯ ಅಶೋಕ್​ಗೆ ಇದೆ- ಸದಾನಂದ ಗೌಡ
ಡಿವಿ ಸದಾನಂದ ಗೌಡ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 02, 2024 | 8:27 PM

ಬೆಂಗಳೂರು, ಜ.02: ‘ಸಿದ್ದರಾಮಯ್ಯ ಎದುರು ಸಮಬಲದಲ್ಲಿ ಕುಸ್ತಿ ಆಡುವ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಅಶೋಕ್​ಗೆ(Ashoka) ಇದೆ ಎಂದು ಸಂಸದ ಡಿ.ವಿ ಸದಾನಂದ ಗೌಡ(DV Sadananda Gowda)  ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಬೆಂಗಳೂರಿನ ಹುಲಿ ಅಶೋಕ್​ ಎಂದು ಹೊಗಳಿದ್ದು, ಆತ ಆರ್ಥಿಕವಾಗಿ ನಮ್ಮನ್ನೆಲ್ಲಾ‌ ನೋಡಿಕೊಳ್ಳಬೇಕು ಎಂದು  ಹಾಸ್ಯ ಮಾಡಿದರು. ಇನ್ನು ವಿಧಾನಸಭೆ ಸೋಲು ನಮಗೆಲ್ಲಾ‌ ಅಚ್ಚರಿ ಹುಟ್ಟಿಸಿದೆ. ನಮ್ಮ ಕಾರ್ಯಕರ್ತರಿಗೆ ಈ ಸೋಲು ಯಾಕಾಯ್ತು ಎಂದು ಇನ್ನೂ ಅರ್ಥ ಆಗಿಲ್ಲ ಎಂದರು.

ಇನ್ನು ಇದೇ ವೇಳೆ ‘ವಿಜಯೇಂದ್ರ ಇವತ್ತು ಹೊಸ ವರ್ಷದ ಶುಭಾಶಯ ಕೋರಲು ನಮ್ಮ‌‌ ಮನೆಗೆ ಬಂದಿದ್ದರು, ಬಳಿಕ ಒಂದು ಮಾತು ಹೇಳಿದ ಅವರು ‘ ಈ ಮಧ್ಯೆ ಸ್ವಲ್ಪ ವ್ಯತ್ಯಾಸಗಳಾಗಿ ಸಂಬಂಧಗಳ‌ ಮೇಲೆ ಪರಿಣಾಮ ಆದವು, ಇನ್ನು ಮುಂದೆ ಹೀಗಾಗದಂತೆ‌ ನೋಡಿ ಕೊಳ್ಳುತ್ತೇನೆ ಎಂದು ವಿಜಯೇಂದ್ರ ಹೇಳಿದರು. ಇದು ಒಬ್ಬ ಯಶಸ್ವಿ ನಾಯಕನಿಗೆ ಇರಬೇಕಾದ ಲಕ್ಷಣ.

ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಕನ್ನಡಿಗರ ತಲೆಮೇಲೆ ಕಲ್ಲು ಹಾಕ್ತಿದೆ ಎಂದ ಅಶೋಕ್‌, ಅಂಕಿ-ಅಂಶ ಮೂಲಕ ಸಿದ್ದು ಗುದ್ದು

ವಿಜಯೇಂದ್ರ ಅವರೇ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯತ್ತ ಸ್ವಲ್ಪ ನೋಡಿಕೊಳ್ಳಿ, ಪಕ್ಷ‌ ಸಂಘಟನೆಗೆ ಸಮರ್ಥ ತಂಡ ನಮ್ಮ ಬೆಂಗಳೂರು ಉತ್ತರ ಜಿಲ್ಲೆಯಲ್ಲಿದೆ. ವಿಜಯೇಂದ್ರ‌ ಮತ್ತು ಅಶೋಕ್​ಗೆ ನಾನು ಜೋಡೆತ್ತು ಎಂದು ಕರೆಯಲ್ಲ, ಯಾಕೆಂದರೆ ಆ ಪದ ಈಗಾಗಲೇ ಬಳಸಿ ಬಳಸಿ ಸವಕಲಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Tue, 2 January 24

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ