AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಿಗೆ ಬಂದಂತೆ ಮಾತಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತಾಕತ್ ಇಲ್ಲ: ಸ್ವಪಕ್ಷದ ನಾಯಕರ ನಡೆಗೆ ಡಿವಿಎಸ್ ಬೇಸರ

ಮೊದಲಿನಿಂದಲೂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿಕೊಂಡು ಬಂದಿರುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ಮತ್ತಷ್ಟು ಹೆಚ್ಚು ಮಾಡಿದ್ದಾರೆ. ಅಲ್ಲದೇ ಯಡಿಯೂರಪ್ಪ ವಿರುದ್ಧ ಸಾಲು-ಸಾಲು ಗಂಭೀರ ಆರೋಪಗಳನ್ನು ಮಾಡುತ್ತಿದ್ದು, ಪಕ್ಷದ ನಾಯಕರಿಗೆ ಮುಜುಗರ ಉಂಟುಮಾಡಿದೆ.

ಬಾಯಿಗೆ ಬಂದಂತೆ ಮಾತಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತಾಕತ್ ಇಲ್ಲ: ಸ್ವಪಕ್ಷದ ನಾಯಕರ ನಡೆಗೆ ಡಿವಿಎಸ್ ಬೇಸರ
ಡಿವಿ ಸದಾನಂದಗೌಡ
TV9 Web
| Edited By: |

Updated on:Dec 27, 2023 | 2:29 PM

Share

ಬೆಂಗಳೂರು, (ಡಿಸೆಂಬರ್ 27):  ಬಾಯಿಗೆ ಬಂದಂತೆ ಮಾತಾಡುವವರ ಬಾಯಿಗೆ ಬೀಗ ಹಾಕಬೇಕಾದ ಅವಶ್ಯಕತೆ ಇದೆ. ಪಕ್ಷದ ಚಟುವಟಿಕೆಗಳನ್ನು ಹೇಗೆ ಮುಂದುವರಿಸುವುದು ಎಂದು ನನಗೆ ಅನ್ನಿಸುತ್ತಿದೆ. ಆಶಿಸ್ತು ಅಂತಾ ಗೊತ್ತಿದ್ದೂ ಮಾತಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ರಾಜ್ಯ ನಾಯಕರಿಗೆ ತಾಕತ್ ಇಲ್ಲ ಎನ್ನುವ ರೀತಿ ಇದೆ ಎಂದು ಮಾಜಿ ಸಿಎಂ, ಸಂಸದ ಸದಾನಂದಗೌಡ ಮಾರ್ಮಿಕವಾಗಿ ನುಡಿದಿದ್ದಾರೆ. ಈ ಮೂಲಕ ಬಹಿರಂಗವಾಗಿ ಮಾತನಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಳ್ಳಬೇಕೆನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಡಝನ್ ಗಟ್ಟಲೇ ನಾಯಕರು ಪಕ್ಷದ ವಿರುದ್ಧ ಮಾತಾಡುತ್ತಿದ್ದಾರೆ ನಾನು ರಾಜ್ಯಾಧ್ಯಕ್ಷ ಆಗಿದ್ದಾಗ ಜನಾರ್ದನ ರೆಡ್ಡಿ ಸಹ ಈ ಹಿಂದೆ ಸಿಎಂ ಆಗಿದ್ದ ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದ್ದರು. ಆಗ ನಾನು ಒಂದೇ ಗಂಟೆಯಲ್ಲಿ ಅವರಿಗೆ ನೋಟೀಸ್ ಕೊಟ್ಟು ಸಸ್ಪೆಂಡ್ ಮಾಡಿದ್ದೆ. ಯತ್ನಾಳ್ ರನ್ನು ನಾನು ಸಸ್ಪೆಂಡ್ ಮಾಡಿ ಬಳಿಕ ಯಡಿಯೂರಪ್ಪನವರು ಮತ್ತೆ ಒತ್ತಡ ಹಾಕಿ ಮತ್ತೆ ಪಕ್ಷಕ್ಕೆ ಸೇರಿಸಿಕೊಂಡು ಈಗ ನಾನು ಅನುಭವಿಸುತ್ತಿದ್ದೇವೆ ಎಂದರು.

ಇದನ್ನೂ ಓದಿ: ಬಿಜೆಪಿಯನ್ನು ಬಿಎಸ್​ವೈ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ: ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಗುಡುಗಿದ ಯತ್ನಾಳ್​

ರೇಣುಕಾಚಾರ್ಯರನ್ನು ನಾನು ಸಸ್ಪೆಂಡ್ ಮಾಡಿದ್ದಾಗ ಸಿದ್ದೇಶ್ವರ ನನ್ನ ಬಳಿ ಬಂದು ಯಡಿಯೂರಪ್ಪ ಹೇಳಿ ಮತ್ತೆ ಸೇರಿಸಿಕೊಂಡಿದ್ದೆ. ನನ್ನ ಕಾಲದಲ್ಲಿ ಇದನ್ನು ನಾನು ಮಾಡಿದ್ದೆ, ಆದ್ದರಿಂದ ನಾನು ಹೇಳುತ್ತಿದ್ದೇನೆ. ಈಗ ಯಾಕೆ ಅದನ್ನು ಮಾಡುತ್ತಿಲ್ಲ? ಎಂದು ಪ್ರಶ್ನಿಸಿದ ಡಿವಿಎಸ್, ನಾನು ಅಂದು ಜನಾರ್ದನ ರೆಡ್ಡಿಗೆ ನೋಟಿಸ್ ವಿಚಾರದಲ್ಲಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಗಮನಕ್ಕೆ ತಂದು ಸಸ್ಪೆಂಡ್ ಮಾಡಿದ್ದೆ, ಆಗ ಯಡಿಯೂರಪ್ಪ ಯಾಕಪ್ಪಾ ಸರ್ಕಾರ ಇರುವುದು ನಿನಗೆ ಇಷ್ಟಇಲ್ವಾ ಎಂದು ನನ್ನ ಮೇಲೆ ಸಿಡಿಮಿಡಿಯಾಗಿದ್ದರು ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Wed, 27 December 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ