AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಗೂ ಕುಟುಂಬ ರಾಜಕಾರಣದ ಕರಿ ನೆರಳು: ಕಾರ್ಯಕರ್ತರ ಬಿಟ್ಟು ಕುಡಿಗಳಿಗೇ ಆದ್ಯತೆ ನೀಡುತ್ತಿರುವ ನಾಯಕರಿವರು

ಕುಟುಂಬ ರಾಜಕಾರಣದ ಕರಿನೆರಳು ಈ ಬಾರಿಯ ಲೋಕಸಭೆ ಚುನಾವಣೆಯನ್ನೂ ಬಿಟ್ಟಿಲ್ಲ. ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಮೂರೂ ಪಕ್ಷಗಳು ಇದಕ್ಕೆ ಹೊರತಾಗಿಲ್ಲ. ಈ ಮಧ್ಯೆ, ಕಾಂಗ್ರೆಸ್ ಪಕ್ಷದಲ್ಲಿ ಯಾವ ನಾಯಕರ ಕುಟುಂಬದವರೆಲ್ಲ ಈ ಬಾರಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ? ಯಾವೆಲ್ಲ ನಾಯಕರು ಕುಟುಂಬದವರಿಗೆ ಟಿಕೆಟ್ ಕೊಡಲು ಯತ್ನಿಸುತ್ತಿದ್ದಾರೆ ಎಂಬ ವಿವರ ಇಲ್ಲಿದೆ.

ಲೋಕಸಭಾ ಚುನಾವಣೆಗೂ ಕುಟುಂಬ ರಾಜಕಾರಣದ ಕರಿ ನೆರಳು: ಕಾರ್ಯಕರ್ತರ ಬಿಟ್ಟು ಕುಡಿಗಳಿಗೇ ಆದ್ಯತೆ ನೀಡುತ್ತಿರುವ ನಾಯಕರಿವರು
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Mar 15, 2024 | 11:52 AM

Share

ಬೆಂಗಳೂರು, ಮಾರ್ಚ್​ 15: ಲೋಕಸಭಾ ಚುನಾವಣೆಯಲ್ಲೂ (Lok Sabha Elections) ಕುಟುಂಬ ರಾಜಕಾರಣದ (Dynasty politics) ಕರಿ ನೆರಳು ಕಾಣಿಸಲಾರಂಭಿಸಿದ್ದು, ಕಾರ್ಯಕರ್ತರನ್ನು ಬಿಟ್ಟು ರಾಜಕಾರಣಿಗಳ ಕುಡಿಗಳಿಗೇ ಮಣೆ ಹಾಕಲು ಯತ್ನಿಸಲಾಗುತ್ತಿದೆ. ಕರ್ನಾಟಕದಲ್ಲಿ (Karnataka) ಅನೇಕ ನಾಯಕರು ಕುಟುಂಬಸ್ಥರನ್ನೇ ಕಣಕ್ಕಿಳಿಸಲು ಕಸರತ್ತು ನಡೆಸುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್​​ಗಳಲ್ಲಿ ಕುಟುಂಬದವರಿಗೇ ಮಣೆ ಹಾಕಲಾಗುತ್ತಿದೆ ಎಂಬ ಆರೋಪವಿದೆ. ಈ ಮಧ್ಯೆ, ಕುಟುಂಬದವರನ್ನೇ ಕಣಕ್ಕಿಳಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರ ಮತ್ತು ಅವರ ಕುಟುಂಬದ ಟಿಕೆಟ್ ಆಕಾಂಕ್ಷಿಗಳ ವಿವರ ಇಲ್ಲಿದೆ.

ರಾಜ್ಯದ ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ರಾಜಕಾರಣಿಗಳ ಮಕ್ಕಳು, ಮರಿಗಳು ಲೋಕಸಭೆ ಚುನಾವಣೆ ಸ್ಪರ್ಧೆಗೆ ಆಸಕ್ತಿ ಹೊಂದಿದ್ದಾರೆ.

ಕುಟುಂಬ ರಾಜಕಾರಣ: ಟಿಕೆಟ್ ಆಕಾಂಕ್ಷಿಗಳ ವಿವರ

  • ಸಾಗರ್ ಖಂಡ್ರೆ – ಸಚಿವ ಈಶ್ವರ್ ಖಂಡ್ರೆ ಪುತ್ರ
  • ಮೃಣಾಲ್ ಹೆಬ್ಬಾಳ್ಕರ್ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ
  • ಪ್ರಯಾಂಕಾ ಜಾರಕಿಹೊಳಿ – ಸಚಿವ ಸತೀಶ್ ಜಾರಕಿಹೊಳಿ ಪುತ್ರಿ
  • ಸುನಿಲ್ ಬೋಸ್ – ಸಚಿವ ಎಚ್​ಸಿ ಮಹದೇವಪ್ಪ ಪುತ್ರ
  • ವೀಣಾ ಕಾಶಪ್ಪನವರ್ – ಶಾಸಕ ವಿಜಯಾನಂದ ಪತ್ನಿ
  • ಸೌಮ್ಯಾ ರೆಡ್ಡಿ – ಸಚಿವ ರಾಮಲಿಂಗ ರೆಡ್ಡಿ ಪುತ್ರಿ
  • ವಿನಯ್ ತಿಮ್ಮಾಪುರ – ಸಚಿವ ಆರ್​​ಬಿ ತಿಮ್ಮಾಪುರ ಪುತ್ರ
  • ಡಾ. ಯತೀಂದ್ರ – ಸಿದ್ದರಾಮಯ್ಯ ಪುತ್ರ
  • ರಾಧಾಕೃಷ್ಣ – ಮಲ್ಲಿಕಾರ್ಜುನ ಖರ್ಗೆ ಅಳಿಯ
  • ರಾಜಶೇಖರ್ ಹಿಟ್ನಾಳ್ – ಶಾಸಕ ರಾಘವೇಂದ್ರ ಹಿಟ್ನಾಳ್ ಸಹೋದರ
  • ಶಿವಲೀಲಾ ಕುಲಕರ್ಣಿ – ಶಾಸಕ ವಿನಯ್ ಕುಲಕರ್ಣಿ ಪತ್ನಿ
  • ಗೀತಾ ಶಿವರಾಜ್ ಕುಮಾರ್ – ಸಚಿವ ಮಧು ಬಂಗಾರಪ್ಪ ಸಹೋದರಿ
  • ಸಂಯುಕ್ತಾ ಪಾಟೀಲ್ – ಸಚಿವ ಶಿವಾನಂದ ಪಾಟೀಲ್ ಪುತ್ರಿ
  • ರಜತ್ ಉಳ್ಳಾಗಡ್ಡಿ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಬಂಧಿ
  • ಪ್ರಭಾ ಮಲ್ಲಿಕಾರ್ಜುನ – ಸಚಿವ ಎಸ್​​ಎಸ್ ಮಲ್ಲಿಕಾರ್ಜುನ ಪತ್ನಿ
  • ನರಸಿಂಹರಾಜು – ಸಚಿವ ಕೆಎಚ್ ಮುನಿಯಪ್ಪ ಪುತ್ರ

ಇದನ್ನೂ ಓದಿ: ಡಾ ಮಂಜುನಾಥ್​ ರಾಜಕೀಯ ಪ್ರವೇಶ ಹಿಂದಿನ ಗುಟ್ಟು ಬಿಚ್ಚಿಟ್ಟ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

ಇಷ್ಟು ಮಂದಿ ಕೂಡ ಲೋಕಸಭೆ ಟಿಕೇಟ್ ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ಗೀತಾ ಶಿವರಾಜ್ ಕುಮಾರ್​ಗೆ ಈಗಾಗಲೇ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್ ಘೋಷಣೆಯಾಗಿದೆ. ಉಳಿದಂತೆ ಇತರ ನಾಯಕರು ಸಹ ಸಂಬಂಧಿಕರು, ಮಕ್ಕಳಿಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಿದ್ದಾರೆ. ಕುಟುಂಬ ರಾಜಕಾರಣಕ್ಕೆ ನೀರೆರೆಯಲು ರಾಜ್ಯ ಕಾಂಗ್ರೆಸ್ ನಾಯಕರು ಯಾವುದೇ ರೀತಿಯಲ್ಲಿಯೂ ಹಿಂದೇಟು ಹಾಕುತ್ತಿಲ್ಲ ಎಂಬ ಆರೋಪ ಬಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!