Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Horatti: ಮೇಲ್ಮನೆ ಅತ್ಯಂತ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಕರ್ನಾಟಕ ವಿಧಾನ ಪರಿಷತ್ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ

Legislative Council Chairman: ಎಂಟು ಬಾರಿ ವಿಧಾನಪರಿಷತ್ ಸದಸ್ಯರಾಗಿರುವ ಬಸವರಾಜ ಹೊರಟ್ಟಿ ಅವರು ಪರಿಷತ್ತಿನ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Basavaraj Horatti: ಮೇಲ್ಮನೆ ಅತ್ಯಂತ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಕರ್ನಾಟಕ ವಿಧಾನ ಪರಿಷತ್ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ
ಬಸವರಾಜ ಹೊರಟ್ಟಿ ಕರ್ನಾಟಕ ವಿಧಾನ ಪರಿಷತ್ ಅಧ್ಯಕ್ಷರಾಗಿ ಸರ್ವಾನುಮತ ಆಯ್ಕೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 21, 2022 | 12:05 PM

ಬೆಳಗಾವಿ: ಎಂಟು ಬಾರಿ ವಿಧಾನಪರಿಷತ್ (Legislative Council) ಸದಸ್ಯರಾಗಿರುವ ಬಸವರಾಜ ಹೊರಟ್ಟಿ (Basavaraj Horatti) ಅವರು ಪರಿಷತ್ತಿನ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಅವರ ಹಿರಿತನವನ್ನು ಪರಿಗಣಿಸಿ ಜೆಡಿಎಸ್ (JDS) ಮತ್ತು ಕಾಂಗ್ರೆಸ್ (Congress) ಎರಡೂ ಪಕ್ಷಗಳು ಅವರ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಿಸದ ಕಾರಣ ಸುಮಾರು ಮೂರು ದಶಕಗಳ ನಂತರ ಹೊರಟ್ಟಿ ಮೇಲ್ಮನೆ ಸಭಾಪತಿಯಾಗಿ (Legislative Council Chairman) ಆಯ್ಕೆಯಾಗಿದ್ದಾರೆ. ಹೊರಟ್ಟಿ ಅವರು ಜೆಡಿಎಸ್‌ನಿಂದ ಹೊರಬಂದಾಗ ಬಿಜೆಪಿ (BJP) ಪಕ್ಷವು ಅವರಿಗೆ ಸಭಾಪತಿ ಸ್ಥಾನದ ಭರವಸೆ ನೀಡಿತ್ತು. ಜನತಾ ಪರಿವಾರದಿಂದ ಏಳು ಬಾರಿ ಗೆದ್ದಿರುವ (MLC) ಅವರು ಅಕ್ಟೋಬರ್ 2022 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ.

43 ವರ್ಷಗಳಿಂದ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಎಲ್‌ಸಿಯಾಗಿ ಆಯ್ಕೆಯಾಗಿರುವ ಹೊರಟ್ಟಿ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ನೀರಾವರಿ ಸಚಿವ ಗೋವಿಂದ ಕಾರಜೋಳ, ಪರಿಷತ್ತಿನ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ, ಸದಸ್ಯ ಎಸ್.ವಿ. ಸಂಕನೂರು ಉಪಸ್ಥಿತರಿದ್ದರು.

ಹಿಂದಿನ ವಿಧಾನಸಭೆ ಅಧಿವೇಶನದಲ್ಲಿ ಹೊರಟ್ಟಿ ಅವರನ್ನು ಸಭಾಪತಿಯಾಗಿ ಆಯ್ಕೆ ಮಾಡಬೇಕಿತ್ತು, ಆದರೆ ಸಭಾಪತಿ ಆಯ್ಕೆ ಚುನಾವಣೆಯನ್ನು ಮುಂದೂಡಲಾಗಿತ್ತು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೂಚನೆ ಮೇರೆಗೆ ಬೊಮ್ಮಾಯಿ ಅವರು ಆ ಚುನಾವಣೆಯನ್ನು ಮುಂದೂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಸಂಪುಟ ಸೇರ್ಪಡೆ ಭರವಸೆ ಸಿಕ್ಕಿದೆ! ಸಿಎಂ ಬೊಮ್ಮಾಯಿಗೆ ಥ್ಯಾಂಕ್ಸ್

ಆದರೆ ಆಗ ಹೊರಟ್ಟಿ ಅವರನ್ನು ಸಭಾಪತಿಯನ್ನಾಗಿ ಆಯ್ಕೆ ಮಾಡದಿರುವುದು ಅವರ ಬೆಂಬಲಿಗರಲ್ಲಿ ತಪ್ಪು ಸಂದೇಶ ರವಾನೆಯಾಗಿದೆ. ವಿಧಾನಪರಿಷತ್ ಸಭಾಪತಿಯಾಗುವ ಭರವಸೆ ನೀಡಿ ಪಕ್ಷಕ್ಕೆ ಕರೆತಂದಿರುವ ಹಿನ್ನೆಲೆಯಲ್ಲಿ ಅವರನ್ನು ಆ ಸ್ಥಾನದಲ್ಲಿ ಕೂಡಿಸಬೇಕು ಎಂದು ಬಿಜೆಪಿಯ ಕೆಲ ಹಿರಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ಸಿಎಂ ಬೊಮ್ಮಾಯಿ ಸಹ ದನಿಯಾಗಿದ್ದರು.

ಇದನ್ನು ಪರಿಗಣಿಸಿ ಡಿಸೆಂಬರ್ 21ರಂದು ಚುನಾವಣೆ ನಡೆಸಲು ಪಕ್ಷ ನಿರ್ಧರಿಸಿ, ಹಂಗಾಮಿ ಸಭಾಪತಿ ರಘುನಾಥ ಮಲ್ಕಾಪುರೆ ಅವರು ಹೊರಟ್ಟಿಗೆ ಹಾದಿ ಸುಗಮಗೊಳಿಸಿದ್ದಾರೆ. ರಾಜ್ಯಪಾಲರು ಚುನಾವಣೆಗೆ ಅನುಮೋದನೆ ನೀಡಿ, ಬಿಜೆಪಿ ಕೋರ್ ಕಮಿಟಿ ಕೂಡ ಹೊರಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ಒಪ್ಪಿಕೊಂಡಿದೆ.

ಇದನ್ನೂ ಓದಿ:  ಎಲ್ಲರ ಜೊತೆಗೂ ಕಿರಿಕ್, ಠಾಣೆಯಲ್ಲಿ ಬರ್ತ್ ಡೇ ಸೆಲೆಬ್ರೇಶನ್: ರಾಯಚೂರಿನ ಲೇಡಿ ಎಸ್​ಐ ಗೀತಾಂಜಲಿ ಕೊನೆಗೂ ಸಸ್ಪೆಂಡ್!

76 ವರ್ಷ ವಯಸ್ಸಿನ ಹೊರಟ್ಟಿ ಅವರು ಜೂನ್ 22, 2018 ರಿಂದ ಡಿಸೆಂಬರ್ 12, 2018 ಮತ್ತು ಫೆಬ್ರವರಿ 16, 2021 ರಿಂದ ಮೇ 16, 2022 ರವರೆಗೆ ಎರಡು ಸಂದರ್ಭಗಳಲ್ಲಿ ಪರಿಷತ್ತಿನ ಹಂಗಾಮಿ ಅಧ್ಯಕ್ಷರಾಗಿದ್ದರು. ಹೊರಟ್ಟಿ ಮೊದಲ ಬಾರಿಗೆ 1980 ರಲ್ಲಿ MLC ಯಾಗಿ ಆಯ್ಕೆಯಾದವರು ದಾಖಲೆಯ 8ನೇ ಬಾರಿಗೆ ಗೆಲುವಿನ ಸರಣಿ ಮುಂದುವರಿಸಿದರು. ಅವರು ಹಲವಾರು ಸರ್ಕಾರಗಳಲ್ಲಿ ಸಚಿವರಾಗಿದ್ದರು. ಪ್ರಾಥಮಿಕ ಶಿಕ್ಷಣದ ಜೊತೆಗೆ ಎರಡು ಬಾರಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಸೇರಿದಂತೆ ವಿವಿಧ ಖಾತೆಗಳನ್ನು ನಿಭಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:01 am, Wed, 21 December 22

ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!