AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Political Crisis ಏಕನಾಥ್ ಶಿಂಧೆಗೆ ಕೊಕ್ ನೀಡಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ

Eknath Shinde ಬಿಜೆಪಿ ಆಡಳಿತವಿರುವ ಗುಜರಾತ್‌ನಲ್ಲಿ ಕನಿಷ್ಠ 12 ಶಾಸಕರೊಂದಿಗೆ  ಶಿವಸೇನಾ ಸಚಿವ ಏಕನಾಥ್ ಶಿಂಧೆ  ಬೀಡುಬಿಟ್ಟಿದ್ದು, ಶಿವಸೇನಾ ಶಿಂಧೆ ವಿರುದ್ಧ ಕ್ರಮ ಕೈಗೊಂಡಿದೆ. ಶಿಂಧೆ ಸ್ಥಾನಕ್ಕೆ ಶಾಸಕ ಅಜಯ್ ಚೌಧರಿ ಬರಲಿದ್ದಾರೆ.

Maharashtra Political Crisis ಏಕನಾಥ್ ಶಿಂಧೆಗೆ ಕೊಕ್ ನೀಡಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ
ಏಕನಾಥ್ ಶಿಂಧೆ
TV9 Web
| Edited By: |

Updated on:Jun 21, 2022 | 5:15 PM

Share

ಮುಂಬೈ: ಮಹಾರಾಷ್ಟ್ರದ (Maharashtra )ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಮಹಾರಾಷ್ಟ್ರದ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ (Eknath Shinde) ಅವರನ್ನು  ಶಿವಸೇನಾ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ತೆಗೆದುಹಾಕಲಾಗಿದೆ. ಬಿಜೆಪಿ ಆಡಳಿತವಿರುವ ಗುಜರಾತ್‌ನಲ್ಲಿ ಕನಿಷ್ಠ 12 ಶಾಸಕರೊಂದಿಗೆ  ಶಿವಸೇನಾ ಸಚಿವ ಏಕನಾಥ್ ಶಿಂಧೆ  ಬೀಡುಬಿಟ್ಟಿದ್ದು, ಶಿವಸೇನಾ ಶಿಂಧೆ ವಿರುದ್ಧ ಕ್ರಮ ಕೈಗೊಂಡಿದೆ. ಶಿಂಧೆ ಸ್ಥಾನಕ್ಕೆ ಶಾಸಕ ಅಜಯ್ ಚೌಧರಿ ಬರಲಿದ್ದಾರೆ. ಸಿಎಂ ಉದ್ಧವ್ ಠಾಕ್ರೆ (Uddhav Thackeray)ಅವರ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ  ಶಿಂಧೆಯನ್ನು ತೆಗೆದುಹಾಕುವ ನಿರ್ಧಾರ ಕೈಗೊಳ್ಳಲಾಗಿದೆ. ಶಿವಸೇನಾ ಕ್ರಮ ಕೈಗೊಂಡ ಬೆನ್ನಲ್ಲೇ ಟ್ವೀಟ್ ಮಾಡಿದ ಶಿಂಧೆ “ನಾವು ಬಾಳಾಸಾಹೇಬರ ನಿಷ್ಠ ಶಿವಸೈನಿಕರು.ಬಾಳಾಸಾಹೇಬರು ನಮಗೆ ಹಿಂದುತ್ವದ ಬಗ್ಗೆ ಕಲಿಸಿದ್ದಾರೆ. ಬಾಬಾಸಾಹೇಬರ ಚಿಂತನೆಗಳು ಮತ್ತು ಧರ್ಮವೀರ್ ಆನಂದ್ ದಿಘೆ ಸಾಹೇಬ್ ಅವರ ಬೋಧನೆಯಿಂದ ನಾವು ಎಂದಿಗೂ ಮತ್ತು ಅಧಿಕಾರಕ್ಕಾಗಿ ಏನನ್ನೂ ಮಾಡಿಲ್ಲ” ಎಂದಿದ್ದಾರೆ.

ಮಹಾರಾಷ್ಟ್ರದ ವೀಕ್ಷಕರಾಗಿ ಕಮಲ್ ನಾಥ್ ಅವರನ್ನು ನಿಯೋಜಿಸಿದ ಕಾಂಗ್ರೆಸ್

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನಾದಲ್ಲಿನ  ರಾಜಕೀಯ ಬಿಕ್ಕಟ್ಟು ನಡುವ, ಕಾಂಗ್ರೆಸ್ ಮಂಗಳವಾರ ತನ್ನ ಹಿರಿಯ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ರಾಜ್ಯದಲ್ಲಿ ಎಐಸಿಸಿ ವೀಕ್ಷಕರನ್ನಾಗಿ ನಿಯೋಜಿಸಿದೆ. ಭಿನ್ನಮತೀಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಕೆಲವು ಶಿವಸೇನಾ ಶಾಸಕರು ಗುಜರಾತ್‌ನಲ್ಲಿ ಮೊಕ್ಕಾಂ ಹೂಡಿದ್ದು, ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಅಪಾಯವನ್ನುಂಟು ಮಾಡಬಹುದು ಎಂಬ ವರದಿಗಳ ನಂತರ ಈ ನಿರ್ಧಾರವು ಹೊರಬಿದ್ದಿದೆ.

“ರಾಜ್ಯದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷರು ಕಮಲ್ ನಾಥ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ವೀಕ್ಷಕರನ್ನಾಗಿ ನಿಯೋಜಿಸಿದ್ದಾರೆ” ಎಂದು ಕಾಂಗ್ರೆಸ್ ಹೇಳಿದೆ. ಮಹಾರಾಷ್ಟ್ರದ ಎಂವಿಎ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷವು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಶಿವಸೇನಾಯೊಂದಿಗೆ ಅಧಿಕಾರವನ್ನು ಹಂಚಿಕೊಂಡಿದೆ.

ಏಕನಾಥ್ ಶಿಂಧೆ ಬಂಡಾಯ ಶಿವಸೇನೆಯ ಆಂತರಿಕ ವಿಚಾರ: ಶರದ್ ಪವಾರ್

ಮಹಾರಾಷ್ಟ್ರದ ಸಚಿವ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಮಂಗಳವಾರ ಬೆಳಗ್ಗೆ ಬಿಜೆಪಿ ಆಡಳಿತವಿರುವ ಗುಜರಾತ್‌ಗೆ ಕನಿಷ್ಠ 12 ಶಾಸಕರನ್ನು ಕರೆದೊಯ್ದ ನಂತರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಇದನ್ನು ಶಿವಸೇನಾದ  “ಆಂತರಿಕ ವಿಷಯ” ಎಂದು ಹೇಳಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:07 pm, Tue, 21 June 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ