AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ಹಣ ಪಡೆದು ತಮ್ಮ ಅಭ್ಯರ್ಥಿಯನ್ನೇ ಸೋಲಿಸಿದ್ರಾ ಮುಖಂಡರು? ಆಡಿಯೋ ವೈರಲ್

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಸೋಲಿಸಲು ಸ್ವಪಕ್ಷೀಯರಿಂದಲೇ ಹುನ್ನಾರ? ಕೋಟಿ ಕೋಟಿ ಹಣ ಪಡೆದು ತಮ್ಮ ಅಭ್ಯರ್ಥಿಯನ್ನೇ ಸೋಲಿಸಿದ್ರಾ ಮುಖಂಡರು? ಕೋಟಿ ಕೋಟಿ ಡೀಲ್​ ಆಡಿಯೋ ವೈರಲ್ ವೈರಲ್ ಆಗಿದೆ.

ಕೋಟಿ ಕೋಟಿ ಹಣ ಪಡೆದು ತಮ್ಮ ಅಭ್ಯರ್ಥಿಯನ್ನೇ ಸೋಲಿಸಿದ್ರಾ ಮುಖಂಡರು? ಆಡಿಯೋ ವೈರಲ್
Follow us
ರಮೇಶ್ ಬಿ. ಜವಳಗೇರಾ
|

Updated on:Jun 21, 2023 | 11:50 AM

ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಈ ಮಟ್ಟಿಗೆ ಬಿಜೆಪಿಗೆ(BJP) ಸೋಲಾಗುತ್ತೆ ಎಂದು ಯಾರು ಊಹಿಸಿರಲಿಲ್ಲ. ಈ ಸೋಲಿನಿಂದ ಬಿಜೆಪಿ ಇನ್ನೂ ಆಚೆ ಬಂದಿಲ್ಲ. ಎಡವಿದೆಲ್ಲಿ ಎನ್ನುವ ಮೂಲ ಹುಡುಕುತ್ತಿದ್ದಾರೆ. ಮತ್ತೊಂದೆಡೆ ಹೊಂದಾಣಿಕೆ ರಾಜಕಾರಣವೇ ಸೋಲಿಗೆ ಕಾರಣ ಎಂದು ಸ್ವಪಕ್ಷದ ನಾಯಕರೇ ಆರೋಪಿಸುತ್ತಿದ್ದಾರೆ. ಇದರ ಮಧ್ಯೆ ಆಡಿಯೋವೊಂದು ವೈರಲ್ ಆಗಿದ್ದು, ಕಾಂಗ್ರೆಸ್- ಬಿಜೆಪಿ ಸೋಲಿಸಲು ಸ್ವಪಕ್ಷೀಯರಿಂದಲೇ ಹುನ್ನಾರ ನಡೆದಿದ್ಯಾ? ಕೋಟಿ ಕೋಟಿ ಹಣ ಪಡೆದು ತಮ್ಮ ಅಭ್ಯರ್ಥಿಯನ್ನೇ ಸೋಲಿಸಿದ್ರಾ ಮುಖಂಡರು? ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೆಸಿ ನಾರಾಯಣಗೌಡ (KC Narayana Gowda), ಕಾಂಗ್ರೆಸ್ ಅಭ್ಯರ್ಥಿ ದೇವರಾಜು ಸೋಲಿಗೆ ಆಪ್ತರಿಂದಲೇ ಪ್ಲಾನ್ ಮಾಡಲಾಗಿತ್ತಾ? ಎನ್ನುವ ಚರ್ಚೆಗಳು ಶುರುವಾಗಿವೆ. ಇದಕ್ಕೆ ಪುಷ್ಠಿ ನಿಡುವಂತೆ ಆಡಿಯೋವೊಂದು ವೈರಲ್​ ಆಗಿದ್ದು, ಜಿಲ್ಲೆಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಅವರಿಂದ ಅಧಿಕಾರ ಪಡೆದ ಅತಿರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಹೌದು…ಚುನಾವಣೆ ಬಳಿಕ ಕೆಆರ್ ಪೇಟೆ ಕ್ಷೇತ್ರದಲ್ಲಿ ಆಡಿಯೋ ವೈರಲ್ ಆಗಿದೆ. ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರಿದ್ದ ಮನ್‌ಮುಲ್ ನಿರ್ದೇಶಕ ಡಾಲು ರವಿ ಸಂಭಾಷಣೆ ಎನ್ನಲಾದ ಆಡಿಯೋದಲ್ಲಿ ಸ್ನೇಹಿತನ ಜೊತೆ ಮುಖಂಡರಿಗೆ ಕೋಟಿ ಕೋಟಿ ರೂ. ಹಣ ನೀಡಿ ಬುಕ್ ಮಾಡಿದ್ದ ಬಗ್ಗೆ ಮಾತನಾಡಿದ್ದಾರೆ. ಇದೀಗ ಈ ಆಡಿಯೋ ವೈರಲ್ ಆಗುತ್ತಿದೆ.

ಕಾಂಗ್ರೆಸ್ ಆಕಾಂಕ್ಷಿಗಳಿಗೆ ಹಣ ನೀಡಿ ಬುಕ್ ಮಾಡಿದ್ದಾಗಿ ಆಡಿಯೋನಲ್ಲಿ ಮಾತನಾಡಿದ್ದಾರೆ. ವಿಜಯ್ ರಾಮೇಗೌಡಗೆ ಒಂದು ಕೋಟಿ ರೂ ಹಾಗೂ ಬಂಕ್ ಸುರೇಶ್‌ಗೆ ಒಂದು ಕೋಟಿ ಹಣ ನೀಡಿ ಬುಕ್ ಮಾಡಲಾಗಿದೆ. ಇನ್ನು ಪ್ರಕಾಶ್‌ಗೆ 70 ಲಕ್ಷ ರೂ, ನಾಗೇಂದ್ರಗೆ 40 ಲಕ್ಷ ರೂ. ಕೃಷ್ಣಮೂರ್ತಿಗೆ 30-35 ಲಕ್ಷ ರೂ. ನೀಡಿರುವ ಬಗ್ಗೆ ಆಡಿಯೋನಲ್ಲಿದೆ. ಅಷ್ಟೇ ಅಲ್ಲದೇ ಕೋಡಮಾರನಹಳ್ಳಿ ದೇವರಾಜುಗೆ 26 ಲಕ್ಷ ರೂ. ಹೀಗೆ ಸುಮಾರು ಜನ ಲೀಡರ್‌ಗೆ ದುಡ್ಡು ಹೋಗಿದೆ ಎಂದು ಮಾತನಾಡಿರುವ ರವಿ ಅವರ ಆಡಿಯೋ ವೈರಲ್ ಆಗಿದೆ. ಈ ವೇಳೆ ಕೆ.ಸಿ ನಾರಾಯಣಗೌಡರ ಆಪ್ತ ದಯಾಗೆ 3 ಕೋಟಿ ರೂ. ಕೊಟ್ಟಿದ್ದು ನಿಜ ನಾ ಎಂದು ಸ್ನೇಹಿತ ಪ್ರಶ್ನಿಸಿರುವುದು ಸಹ ಆಡಿಯೋನಲ್ಲಿದೆ.

ಮಾಜಿ ಸಚಿವ ಕೆಸಿ ನಾರಾಯಣಗೌಡ ಆಪ್ತ ಸಹಾಯಕ ದಯಾನಂದಗೂ ಹಣ ಕೊಟ್ಟಿರುವ ಬಗ್ಗೆ ಇಬ್ಬರ ಮಾತನಾಡಿದ್ದಾರೆ. ಆದರೆ ಅರ್ಧಕ್ಕೆ ಎಡಿಟ್ ಮಾಡಿದ ಆಡಿಯೋ ಮಾತ್ರ ಬಿಡುಗಡೆ ಮಾಡಲಾಗಿದ್ದು, ಇದೀಗ ಈ ಆಡಿಯೋ ಕ್ಷೇತ್ರದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:49 am, Wed, 21 June 23

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ