AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಕಿಶೋರ್​ ಬೆಂಗಳೂರಿನಲ್ಲಿ, ಗುಪ್ತವಾಗಿ ನಡೀತು ರಾಜಕೀಯ ಚಟುವಟಿಕೆ

Prashant Kishor: ಚುನಾವಣಾ ತಂತ್ರಗಾರಿಕೆಗೆ ಹೆಸರುವಾಸಿಯಾದ ಪ್ರಶಾಂತ್​ ಕಿಶೋರ್​ ಇಂದು ಸದ್ದಿಲ್ಲದೇ ಬೆಂಗಳೂರಿಗೆ ಬಂದು ತಮ್ಮ ರಾಜಕೀಯ ಚಟುವಟಿಕೆ ನಡೆಸಿದರು. ಹಾಗಾದರೆ ಅವರು ಮಾಡಿದ್ದಾದರೂ ಏನು?

ಪ್ರಶಾಂತ್​ ಕಿಶೋರ್​ ಬೆಂಗಳೂರಿನಲ್ಲಿ, ಗುಪ್ತವಾಗಿ ನಡೀತು ರಾಜಕೀಯ ಚಟುವಟಿಕೆ
ಪ್ರಶಾಂತ್​ ಕಿಶೋರ್​
TV9 Web
| Edited By: |

Updated on:Nov 26, 2021 | 4:22 PM

Share

ಚುನಾವಣಾ ತಂತ್ರಗಾರಿಕೆಗೆ ಹೆಸರುವಾಸಿಯಾದ ಪ್ರಶಾಂತ್​ ಕಿಶೋರ್ (Prashant Kishor)​ ಅವರ ಬೆಂಗಳೂರು ಭೇಟಿ ಕುತೂಹಲ ಮೂಡಿಸಿದೆ. ಶುಕ್ರವಾರ ಬೆಳಗಿನ ಜಾವ ನಗರಕ್ಕೆ ಬಂದಿಳಿದ ಕಿಶೋರ್​ ಅಧಿಕೃತವಾಗಿ ಯಾವ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಯಕ್ರಮ ಇರಲಿಲ್ಲ. ಹಾಗಾದರೆ ಕಿಶೋರ್​ ಬೆಂಗಳೂರಿಗೆ ಬಂದು ಮಧ್ಯಾಹ್ನ 3 ಗಂಟೆಗೆ ನಗರ ಬಿಟ್ಟು ಹೊರಟಿದ್ದೇಕೆ? ಈ ಕುರಿತು ಹಲವಾರು ರೀತಿಯ ಸುದ್ದಿ ಹರಡಿತ್ತು. ಒಂದು ವೆಬ್​​ಸೈಟಂತೂ ಒಂದು ಸುದ್ದಿ ಹಬ್ಬಿಸಿತು. ಬಿಎಸ್​ವೈ ಮತ್ತು ಮಗ ವಿಜಯೇಂದ್ರ ಹೊಸ ಪಕ್ಷ ಕಟ್ಟುವವರಿದ್ದಾರೆ. ಆ ಕೆಲಸವನ್ನು ಕಿಶೋರ್​ ಅವರ ತಂಡಕ್ಕೆ ನೀಡಲು ನಿರ್ಧರಿಸಲಾಗಿದೆ. ಆ ಕಾರಣದಿಂದಾಗಿಯೇ ಕಿಶೋರ್​ ಇಲ್ಲಿಗೆ ಬಂದಿದ್ದಾರೆ ಎಂದು ಆ ವೆಬ್​ಸೈಟ್​ ಹೇಳಿತು.

ನಿಜವಾದ ಕಾರಣ ಏನು? ಮೊಟ್ಟ ಮೊದಲ ವರದಿ ಪ್ರಕಾರ, ಗೋವಾ ಚುನಾವಣೆ ಕುರಿತಾಗಿ ಚರ್ಚಿಸಲು ಕಿಶೋರ್​ ಬೆಂಗಳೂರಿಗೆ ಬಂದಿದ್ದರು. ಇಲ್ಲಿ ಕೆಲವು ಕಾಂಗ್ರೆಸ್​ ನಾಯಕರ ಭೇಟಿ ಮಾಡಿದ್ದಾರೆ. ಆದರೆ, ಮೂಲಗಳ ಪ್ರಕಾರ ಈ ಮಾಹಿತಿ ನಿಜವಲ್ಲ. ಇನ್ನೊಂದು ಸೂತ್ರದ ಪ್ರಕಾರ ಕಿಶೋರ್​, ಸಾಮಾಜಿಕ ಜಾಲತಾಣವೊಂದರ ಕೆಲವು ಹಿರಿಯ ಅಧಿಕಾರಿಗಳ ಭೇಟಿಗೆ ಬಂದಿದ್ದರು. ಇದರ ಜೊತೆಗೆ ಕಾಂಗ್ರೆಸ್​ನಿಮದ ಟಿಎಮ್​ಸಿ ಪಕ್ಷಕ್ಕೆ ನಾಯಕರನ್ನು ಸೆಳೆಯು ತಂತ್ರದ ಭಾಗವಾಗಿ ಅವರು ಕೆಲವು ಕಾಂಗ್ರೆಸ್​ ನಾಯಕರನ್ನು ಭೇಟಿ ಮಾಡಲು ಅವರು ಇಲ್ಲಿಗೆ ಬಂದಿದ್ದರು. ಆದರೆ, ಕಿಶೋರ್​ ಲೆಕ್ಕ ಹಾಕಿದಂತೆ, ಹಿರಿಯ ಕಾಂಗ್ರೆಸ್​ ನಾಯಕರು ಯಾರೂ ಅವರನ್ನು ಭೇಟಿ ಆದ ಬಗ್ಗೆ ಮಾಹಿತಿ ಇಲ್ಲ. ಆದರೆ, ಅವರ ಭೇಟಿಗೆ ಬೇರೆಯೇ ಕಾರಣ ಇತ್ತು. ಮಮತಾ ಬ್ಯಾನರ್ಜಿಯವರ ಪಕ್ಷದ ಪರವಾಗಿ ಕಿಶೋರ್​ ಇಲ್ಲಿಗೆ ಬಂದಿದ್ದರು. ಮತ್ತು ಟಿಎಮ್​ಸಿ ಮತ್ತು ಜನತಾ ದಳ (ಜಾತ್ಯಾತೀತ) ಒಂದಾಗಿ ಹೋಗಬೇಕು. ಚುನಾವಣೆಗೆ ಇನ್ನೂ ಎರಡುವರೆ ವರ್ಷ ಇದೆ. ಆದರೆ, ರಾಷ್ಟ್ರ ಮಟ್ಟದಲ್ಲಿ ಟಿಎಮ್​ಸಿ ಜೊತೆ ಜೆಡಿಎಸ್​ ನಿಲ್ಲಬೇಕು. ಈ ಕುರಿತು ಒಂದು ಸಂದೇಶ ತಲುಪಿಸುವ ಸಲುವಾಗಿ ಅವರು ಇಲ್ಲಿಗೆ ಬಂದಿದ್ದರು ಎಂದು ಮೂಲಗಳು ತಿಳಿಸಿವೆ. ಜೆಡಿಎಸ್​ ಪಕ್ಷದ ಪುನರುತ್ಥಾನದ ಕಂಕಣ ತೊಟ್ಟಿರುವ ಕಿಶೋರ್​ ಆ ವಿಚಾರಗಳನ್ನು ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Prashant Kishor: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್​ ಸೇರ್ಪಡೆಗೆ ಹಿನ್ನಡೆಯಾಗಲು ಇದೇ ಕಾರಣ

Prashant Kishor: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎದುರು ಟಿಎಂಸಿ ಗೆಲ್ಲಿಸಲು ಪ್ರಶಾಂತ್ ಕಿಶೋರ್ ಅನುಸರಿಸಿದ ಚುನಾವಣಾ ತಂತ್ರಗಳು ಒಂದೆರೆಡಲ್ಲ

(Election strategist Prashant Kishor secretly visits Bengaluru to do political activity with JDS)

Published On - 3:45 pm, Fri, 26 November 21

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ