AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ: ಹೆಚ್​ಡಿ ಕುಮಾರಸ್ವಾಮಿ

2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ವಿಪಕ್ಷ ನಾಯಕ ರಾಹುಲ್​ ಗಾಂಧಿ ಮಾಡಿರುವ ಗಂಭೀರ ಆರೋಪ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪಗಳನ್ನು ಮಾಡಲಾಗಿದೆ. ಸದ್ಯ ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದು, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ: ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ, ರಾಹುಲ್ ಗಾಂಧಿ
ಸುನಿಲ್​ ಎಮ್​ ಹೆಚ್​
| Edited By: |

Updated on: Aug 08, 2025 | 9:45 AM

Share

ಬೆಂಗಳೂರು, ಆಗಸ್ಟ್ 08: 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಆ ಬಗ್ಗೆ ನಮ್ಮ ಬಳಿ ಬ್ಲ್ಯಾಕ್​ ಆ್ಯಂಡ್​ ವೈಟ್​ ಸಾಕ್ಷ್ಯಗಳಿವೆ ಅಂತಾ ವಿಪಕ್ಷ ನಾಯಕ ರಾಹುಲ್​ ಗಾಂಧಿ (Rahul Gandhi) ಗಂಭೀರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ ಬಿಜೆಪಿ ಜೊತೆ ಚುನಾವಣಾ ಆಯೋಗ ಶಾಮೀಲಾಗಿದೆ ಎಂದಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ (HD Kumaraswamy), ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕಿಡಿಕಾರಿದ್ದಾರೆ.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ

ಈ ಬಗ್ಗೆ ಟ್ವೀಟ್​ ಮಾಡಿರುವ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ.  ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ
Image
ನಾಳೆ ಬೆಂಗಳೂರಿನಲ್ಲಿ ರಾಹುಲ್ ಪ್ರತಿಭಟನಾ ಸಮಾವೇಶ:ಇಲ್ಲಿದೆ ಸಂಪೂರ್ಣ ಮಾಹಿತಿ
Image
ಮತಗಳ್ಳತನ ಸಂಖ್ಯೆ ಬಿಡುಗಡೆ ಮಾಡಿದ ರಾಹುಲ್​ಗೆ ಚುನಾವಣಾ ಆಯೋಗ ತಿರುಗೇಟು!
Image
ರಾಹುಲ್ ಗಾಂಧಿ ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್ ಗೋಡೆ ನೆಲಸಮ:  ಬಿಜೆಪಿ ದೂರು
Image
ರಾಹುಲ್ ಗಾಂಧಿಯ "ಮತ ಕಳ್ಳತನ" ಪದವು ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ

ಹೆಚ್​​ಡಿ ಕುಮಾರಸ್ವಾಮಿ ಟ್ವೀಟ್​

ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.

ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಮಹಾಲಕ್ಷ್ಮಿಯು ಐಶ್ವರ್ಯ ಪ್ರಾಪ್ತಿಸಲಿ:  ನಿಖಿಲ್​ ಕುಮಾರಸ್ವಾಮಿ

ಜೆಡಿಎಸ್​​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಕೂಡ ಟ್ವೀಟ್​ ಮಾಡಿದ್ದು, ಶ್ರೀ ರಾಹುಲ್​ ಗಾಂಧಿ ಅವರೇ, ನಮ್ಮ ಕರ್ನಾಟಕಕ್ಕೆ ಸ್ವಾಗತ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು. ಕಳೆದ 3 ವರ್ಷದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 3 ಲಕ್ಷ ಕೋಟಿ ರೂ ಸಾಲ ಮಾಡಿದೆ. ರಾಜ್ಯದ GSDPಯಲ್ಲಿ ಸಾಲದ ಪ್ರಮಾಣ 24.91% ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಮತಗಳ್ಳತನದ ಅಂಕಿ-ಸಂಖ್ಯೆ ಬಿಡುಗಡೆ ಮಾಡಿದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ತಿರುಗೇಟು

ನಿಮ್ಮ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ ಬೇಕಾಗಿರುವುದು 55 ಸಾವಿರ ಕೋಟಿ ರೂ, ಕಳೆದ 3 ವರ್ಷದಿಂದ ನಿಮ್ಮ ಸರ್ಕಾರ ಮಾಡುತ್ತಿರುವ ಸಾಲ ವರ್ಷಕ್ಕೆ 1 ಲಕ್ಷ ಕೋಟಿ ರೂ. ⁠ನಿಮ್ಮ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ತಾಯಿ ಮಹಾಲಕ್ಷ್ಮಿಯು ಹಣಕಾಸು ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಸರ್ವಐಶ್ವರ್ಯ ಪ್ರಾಪ್ತಿಸಲಿ ಎಂದು ಪ್ರಾರ್ಥನೆ ಮಾಡೋಣ ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಪ್ರತಿಷ್ಠೆಗಾಗಿ ಈ ಪ್ರತಿಭಟನೆ: ಶಾಸಕ ಅಶ್ವತ್ಥ್ ನಾರಾಯಣ

ಕಾಂಗ್ರೆಸ್​ನಿಂದ ಬೃಹತ್ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಶಾಸಕ ಅಶ್ವತ್ಥ್ ನಾರಾಯಣ, ಈ ಪ್ರತಿಭಟನೆ ಶಕ್ತಿ ಪ್ರದರ್ಶನಕ್ಕಾಗಿ ಮಾಡುತ್ತಿರುವುದು ಅಷ್ಟೇ. ಫ್ರೀಡಂ ಪಾರ್ಕ್‌​ನಲ್ಲಿ 10 ಸಾವಿರ ಜನ ಮಾತ್ರ ಪ್ರತಿಭಟಿಸಬೇಕು. ಆದರೆ ಲಕ್ಷಕ್ಕೂ ಹೆಚ್ಚು ಜನ ಬರ್ತಾರೆ ಅಂತೆ. ರಾಹುಲ್ ಗಾಂಧಿ ಪ್ರತಿಷ್ಠೆಗಾಗಿ ಈ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ಮಾಡೋಕೆ ಯಾವ ಅರ್ಥವೂ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್