Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ

ಗೃಹ ಜ್ಯೋತಿ ಜಾರಿ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಅನಾವಶ್ಯಕವಾಗಿ ಲೋಡ್ ಶೆಡ್ಡಿಂಗ್ ಮಾಡುತ್ತದೆ ಎನ್ನುವ ಆರೋಒಇಗಳಿಗೆ ಸ್ವತಃ ಇಂಧನ ಸಚಿವ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ
ಕೆಜೆ ಜಾರ್ಜ್​​
Follow us
ರಮೇಶ್ ಬಿ. ಜವಳಗೇರಾ
|

Updated on:Jun 26, 2023 | 2:29 PM

ರಾಯಚೂರು: ಕರ್ನಾಟಕದಲ್ಲಿ 200 ಯುನಿಟ್ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ(Gruha Jyothi Scheme,) ಜಾರಿಗೆ ಬಂದಾಗಿನಿಂದ ಲೋಡ್​ ಶೆಡ್ಡಿಂಗ್ (load shedding ) ಶುರುವಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸ್ವತಃ ಇಂಧನ ಸಚಿವ ಕೆಜೆ ಜಾರ್ಚ್((KJ george) )ರಾಯಚೂರಿನಲ್ಲಿ ಇಂದು (ಜೂನ್ 26) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ಗೊತ್ತಿರುವ ಹಾಗೆ ಯಾವುದೇ ಲೋಡ್​ ಶೆಡ್ಡಿಂಗ್ ಇಲ್ಲ. ಪರೀಕ್ಷೆ ಹಾಗೂ ಚುನಾವಣೆ ವೇಳೆ ಲೋಡ್ ಶೆಡ್ಡಿಂಗ್ ಮಾಡಿಲ್ಲ. ಈಗ ಮೈಂಟೇನೆನ್ಸ್​ಗಾಗಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಕರೆಂಟ್ ಶಾರ್ಟೇಜ್ ಆಗಿ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Electricity Bill ವಿದ್ಯುತ್​ ಬಿಲ್​ ದುಪ್ಪಟ್ಟು ಬರುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಕೆಜೆ ಜಾರ್ಜ್

ಇನ್ನು ಇದೇ ವೇಳೆ ಜೆಸ್ಕಾ ಇಂಜಿನಿಯರ್​ಗಳನ್ನು ತರಾಟೆಗೆ ತೆಗೆದುಕೊಂಡ ಕೆಜೆ ಚಾರ್ಜ್, ನಾನೇನು ಹೊಸದಾಗಿ ಮಂತ್ರಿಯಾಗಿಲ್ಲ. ಓವರ್ ಲೋಡ್ ಕಡಿಮೆ ಮಾಡಲು ಏನ್ ಮಾಡುತ್ತೀರಿ. ನಿಮ್ಮ ಕೈಲಾಗದೇ ಇದ್ದರೆ ಹೆಡ್ ಆಫೀಸ್ ಗೆ ಹೇಳಿ. ಅದನ್ನು ಬಿಟ್ಟು ಜನರಿಗೆ ತೊಂದರೆಕೊಡಬೇಡಿ ಎಂದರು.

ಇದೇ ವೇಳೆ ವಿದ್ಯುತ್ ದರ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿದ್ದು,ವಿದ್ಯುತ್ ದರ ಹೆಚ್ಚಿಸಿದ್ದು ಯಾರು? ನಾಲ್ಕು ವರ್ಷ ಯಾರು ಸರ್ಕಾರ ನಡೆಸಿದ್ದು? ಕರೆಂಟ್ ಬಿಲ್ ಕೇಂದ್ರ ಸರ್ಕಾರದ ಕಾಯ್ದೆಯಡಿ‌ ಹೆಚ್ಚಾಗಿದೆ. ನವೆಂಬರ್ ಅಲ್ಲಿ ಕರ್ನಾಟಕ ಇಲೆಕ್ಟ್ರಿಕ್ ಸಿಟಿ ರೆಗ್ಯುಲೇಟರಿ ಅಥಾರಿಟಿ ಕಮಿಷನ್ ಇದನ್ನ ತೆಗೆದುಕೊಂಡಿದ್ದಾರೆ. ಎಸ್ಕಾಂಗಳು,ಇಂಡಸ್ಟ್ರಿ ಅವರು ಸಂಪರ್ಕಿಸಿದ್ದಾರೆ. ಅವರು (ಬಿಜೆಪಿ) ಮಾರ್ಚ್ ನಲ್ಲಿ ತೀರ್ಮಾನಿಸಬೇಕಿತ್ತು.. ಚುನಾವಣೆ ಅಂತ ಮೇ 12 ಕ್ಕೆ ಆದೇಶಿಸಿದ್ದಾರೆ. ಆಗ ಯಾವ ಸರ್ಕಾರ ಇತ್ತು ಎಂದು ಪ್ರಶ್ನಿಸಿದರು.

ಅದಾನಿ ಅವರಿಗೆ ಬ್ಲೆಂಡಿಂಗ್ ಮಾಡಲು ಕೇಂದ್ರ ಸರ್ಕಾರ ಆದೇಶ ಕೊಟ್ಟಿದೆ. ಬ್ಲೆಂಡಿಂಗ್ ಮಾಡೋವಾಗ ಅಂತಾರಾಷ್ಟ್ರೀಯ ದರ ಜಾಸ್ತಿ ಇತ್ತು. ಬ್ಲೆಂಡ್ ಮಾಡುವಾಗ ಹೆಚ್ಚಾಯ್ತು. ಈ ಹೆಚ್ಚಳವನ್ನ ರೆಗ್ಯುಲೇಟರಿ ಅಥಾರಿಟಿ ಜಾಸ್ತಿ ಮಾಡಿದ್ದಾರೆ. ಇದು ನಮ್ಮ ಕಾಲದಲ್ಲಿ ಮಾಡಿರುವುದಲ್ಲ ಎಂದು ಕಿಡಿಕಾರಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:25 pm, Mon, 26 June 23

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ