AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿಗಳಾದ ಹೆಚ್​ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಕಾಂಗ್ರೆಸ್​ ಸರ್ಕಾರದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ-ಕುಮಾರಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on: May 25, 2023 | 2:14 PM

Share

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಅಭೂತ ಪೂರ್ವ ಗೆಲುವು ಪಡೆದುಕೊಂಡು ಅಧಿಕಾರಕ್ಕೇರಿದೆ. ಆದ್ರೆ, ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್​ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದರೆ, ಮತ್ತೊಂದೆಡೆ ಹೆಚ್​ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ ಎಂದಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಈ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ದಿಲ್ಲಿಯಲ್ಲಿ ಸಚಿವ ಸಂಪುಟ ಸರ್ಕಸ್‌: ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈನಲ್ ಸಭೆ!

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಮೇ 25) ಜೆಡಿಎಸ್ ಆತ್ಮವಲೋಕನ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ. ಈ ಸರ್ಕಾರದ ಭವಿಷ್ಯ ಲೋಕಸಭಾ ಚುನಾವಣೆ ಮೇಲೆ ನಿಂತಿದೆ. ನಾನು ಭವಿಷ್ಯ ಹೇಳುತ್ತಿಲ್ಲ. ರಾಜಕೀಯ ಸ್ಥಿತಿಗತಿ ನೋಡಿ ಹೇಳುತ್ತಿದ್ದೇನೆ ಹೇಳಿದರು.

ನಂಬಿದವರೇ ನಮಗೆ ಮೋಸ ಮಾಡಿದ್ರು, ಬೆನ್ನಿಗೆ ಚೂರಿ ಹಾಕಿದರು. ಅದ್ದರಿಂದ ನಾನು ನಿಮಗೆ ಹಣ ಸಹಾಯ ಮಾಡಲು ಆಗಲಿಲ್ಲ. ಆದ್ದರಿಂದ ನಾನು ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ. ನಮ್ಮದು ಕುಟುಂಬ ರಾಜಕಾರಣ ಎಂದು ಟೀಕೆ ಮಾಡುತ್ತಾರೆ. ಹೀಗಾಗಿ ನೀವೆಲ್ಲರೂ ಮುಂದೆ ಬಂದು ಪಕ್ಷ ಸಂಘಟನೆ ಮಾಡಿ. ಸಿದ್ದರಾಮಯ್ಯ ಮೊಮ್ಮಗನನ್ನು ರಾಜಕೀಯಕ್ಕೆ ತರುತ್ತೇನೆ ಅಂತಾರೆ. ಅದು ಕುಟುಂಬ ರಾಜಕಾರಣ ಅಲ್ವಾ? ಯಾರೂ ಟೀಕೆ ಮಾಡಲ್ಲ ಎಂದರು.

ಬೊಮ್ಮಾಯಿ ಹೇಳಿದ್ದೇನು?

ಇನ್ನೊಂದೆಡೆ ಶಿಗ್ಗಾಂವಿಯಲ್ಲಿಂದು ಮಾಜಿ ಸಿಎಂ ಬೊಮ್ಮಾಯಿ ಮಾತನಡಿದ್ದು, ಮುಂದಿನ ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ. ಈ ಸರ್ಕಾರ ಹೋಗುವಂತ ದಾರಿ ನೋಡಿದ್ರೆ ಬಹಳ ದಿನ‌ ನಡೆಯಲ್ಲ ಎಂದು ಭವಿಷ್ಯ ನುಡಿದರು.

ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಶದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್​​ನವರಿಗೆ ನಮ್ಮ ಕಾರ್ಯಕರ್ತರು ತಲೆಬಾಗುವ ಪ್ರಶ್ನೆ ಇಲ್ಲ. ನಾವು ನಮ್ಮ ಹಣದಿಂದ ರಾಜಕೀಯ ಮಾಡುತ್ತಿದ್ದೆವೆ. ನಾವು ತಂದ ಜನಪರ ಕಾನೂನುಗಳನ್ನು ರದ್ದು ಮಾಡಲು ಹೊರಟಿದ್ದಾರೆ. ಎಲ್ಲೋ ಅಲ್ಪ ಸ್ವಲ್ಪ ವ್ಯತ್ಯಾಸ ಆಗಿದಕ್ಕೆ ನಾವು ಸೋತಿರಬಹುದು. ಆದ್ರೆ ಸ್ವಾಭಿಮಾನ ಕಳೆದುಕೊಂಡಿಲ್ಲ. ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಾಡುತ್ತೇವೆ. ಮತ್ತೆ ರಾಜ್ಯದಲ್ಲಿ 25 ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೆವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು