AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ವರ್ಷದ ಇತಿಹಾಸ ಹೊಂದಿರುವ ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ‌ ಸಚಿವ ಆನಂದ್ ಸಿಂಗ್ ರಾಜೀನಾಮೆ

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದಿಂದ ಪುತ್ರನನ್ನು ಕಣಕ್ಕಿಳಿಸಿ ಸೋಲುಕಂಡಿರುವ ಮಾಜಿ ಸಚಿವ ಆನಂದ್ ಸಿಂಗ್ ಇದೀಗ ಮತ್ತೊಂದು ಮಹತ್ವದ ಹುದ್ದೆಗೆ ಗುಡ್​ಬೈ ಹೇಳಿದ್ದಾರೆ.

100 ವರ್ಷದ ಇತಿಹಾಸ ಹೊಂದಿರುವ ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ‌ ಸಚಿವ  ಆನಂದ್ ಸಿಂಗ್ ರಾಜೀನಾಮೆ
ಆನಂದ್ ಸಿಂಗ್ ರಾಜೀನಾಮೆ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ| Edited By: |

Updated on: Jul 15, 2023 | 1:55 PM

Share

ಮುಖ್ಯಾಂಶಗಳು

  • ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ
  • ಬಳ್ಳಾರಿ & ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್
  • ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿರುವ ಆನಂದ್ ಸಿಂಗ್

ವಿಜಯನಗರ, (ಜುಲೈ 15): ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್(BDCC Bank) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ (Anand Singh) ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ಜುಲೈ 1ರಿಂದಲೇ ಅನ್ವಯ ಆಗುವಂತೆ ಆನಂದ್ ಸಿಂಗ್ ಇಂದು (ಜುಲೈ 15) ರಾಜೀನಾಮೆ ಸಲ್ಲಿಸಿದ್ದಾರೆ. ಗ್ರಾಮೀಣ ಭಾಗದ ರೈತರ ಹಿತದೃಷ್ಟಿಯಿಂದ ಸ್ಥಾಪಿಸಲಾಗಿದ್ದ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ (ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್) ​ 100 ವರ್ಷದ ಇತಿಹಾಸ ಹೊಂದಿದೆ. ಇದೀಗ ಏಕಾಏಕಿ ಮಾಜಿ ಸಚಿವ ಆನಂದ್ ಸಿಂಗ್ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಆನಂದ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದ್ರೆ, ವಿಜಯನಗರ ಜಿಲ್ಲೆಯಾಗಿ ರಚನೆಯಾದ ಮೇಲೆ ಇದೇ ಮೊದಲ ಬಾರಿಗೆ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಆನಂದ್ ಸಿಂಗ್ ತಮ್ಮ ಪುತ್ರ ಸಿದ್ಧಾರ್ಥ್ ಸಿಂಗ್​ಗೆ ಬಿಜೆಪಿ ಟಿಕೆಟ್ ಕೊಡಿಸುವಲ್ಲಿ ಸಹ ಸಫಲರಾಗಿದ್ದರು. ಆದ್ರೆ, ಸಿದ್ಧಾರ್ಥ್​​​ ಸೋಲು ಕಂಡಿದ್ದಾರೆ. ಇದರಿಂದ ಆನಂದ್ ಸಿಂಗ್​ಗೆ ತೀವ್ರ ಮುಖಭಂಗವಾದಂತಾಗಿದೆ. ಇದರ ಬೆನ್ನಲ್ಲೇ ಇದೀಗ ಆನಂದ್ ಸಿಂಗ ಪ್ರತಿಷ್ಠಿತ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನು ಆನಂದ್ ಸಿಂಗ್ ಅವರು ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಆದ್ರೆ, ಈ ಬಗ್ಗೆ ಆನಂದ್ ಸಿಂಗ್ ಯಾವುದೇ ಮಾತುಗಳನ್ನಾಡಿಲ್ಲ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್