AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರದ ವರ್ಗಾವಣೆ ಸಚಿವ: ಪ್ರತಾಪ್​ ಸಿಂಹ

ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ಗಂಭೀರ ಆರೋಪ ಮಾಡಿದ್ದಾರೆ. ಇದರ ಜೊತೆಗೆ ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ ಎಂದು ಆರೋಪಿಸಿರುವ ಅವರು, ಮೈಸೂರಿನಲ್ಲಿ ಅತ್ಯಾಚಾರವೆಸಗಿ 9 ವರ್ಷದ ಬಾಲಕಿ ಕೊಲೆ ಪ್ರಕರಣ ಸಂಬಂಧವೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರದ ವರ್ಗಾವಣೆ ಸಚಿವ: ಪ್ರತಾಪ್​ ಸಿಂಹ
ಪ್ರತಾಪ್​ ಸಿಂಹ
ರಾಮ್​, ಮೈಸೂರು
| Edited By: |

Updated on: Oct 10, 2025 | 11:54 AM

Share

ಮೈಸೂರು, ಅಕ್ಟೋಬರ್​ 10: ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್​ ಸಿ ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ (Pratap Simha) ಗಂಭಿರ ಆರೋಪ ಮಾಡಿದ್ದು, ಮೈಸೂರು ಪೊಲೀಸರಿಗೆ ಸಿಎಂ ಮಗನ ಕಾಟ ಹೆಚ್ಚಾಗಿದೆ ಎಂದಿದ್ದಾರೆ. ಡಾ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ. ಯಾವುದೇ ವರ್ಗಾವಣೆ ಆಗಬೇಕಾದರೂ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು. ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ ಎಂದು ಪ್ರತಾಪ್​ ಸಿಂಹ ಆರೋಪಿಸಿದ್ದಾರೆ.

ಆರೋಪಿ ಯಾವ ಜಾತಿಯವನು ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಅವ್ಯಾಹತವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಅದರ ಮೇಲೆ ದಾಳಿ ಮಾಡಲೂ ಪೊಲೀಸರು ಹೆದರುತ್ತಿದ್ದಾರೆ. ದಾಳಿ ಮಾಡಿದರೆ ಎಲ್ಲಿ ಯಾವ ಸಚಿವ, ಶಾಸಕನ ಫೋನ್ ಬರುತ್ತದೆಯೋ ಎಂಬ ಭಯದಲ್ಲಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಖಾಲಿಯಾದರೆ ತನಗೆ ಸಿಗುತ್ತೆಂಬ ಆಸೆಯಲ್ಲಿ ಗೃಹ ಸಚಿವರು ತಮ್ಮ ಇಲಾಖೆಯನ್ನೇ ಮರೆತಿದ್ದಾರೆ. ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ. ಶಾಸಕರಿಗೆ ವಸೂಲಿ ನಿಲ್ಲಿಸಲು ಹೇಳಿ ಎಂದು ಪ್ರತಾಪ್​ ಸಿಂಹ ಕಿಡಿ ಕಾರಿದ್ದಾರೆ.

ಪ್ರತಾಪ್​ ಸಿಂಹ ವಾಗ್ದಾಳಿ

‘ಸಿಎಂ, ಡಿಸಿಎಂ ಮೌನವೇಕೆ?’

ಮೈಸೂರಿನಲ್ಲಿ ಅತ್ಯಾಚಾರವೆಸಗಿ 9 ವರ್ಷದ ಬಾಲಕಿ ಕೊಲೆ ಪ್ರಕರಣ ಸಂಬಂಧವೂ ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಉಕ್ರೇನ್-ರಷ್ಯಾ ಯುದ್ಧದ ಬಗ್ಗೆ ಕಾಮೆಂಟ್ ಮಾಡುವ, ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುವ ಕಾಂಗ್ರೆಸ್​ ನ ಯಾರೊಬ್ಬರೂ ಬಾಲಕಿ ಕೊಲೆ ವಿಚಾರವಾಗಿ ಮಾತನಾಡುತ್ತಿಲ್ಲ. ಪ್ರಿಯಾಂಕ್​, ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರಾ? ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಏಕೆ ಈ ಬಗ್ಗೆ ಮಾತಾಡ್ತಿಲ್ಲ? ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ಸಿಎಂ ಆಗಿದ್ದೀರಾ ಎಂದು ಮಾಜಿ ಸಂಸದ ವಾಗ್ದಾಳಿ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.