Presidential Election 2022 ರಾಷ್ಟ್ರಪತಿ ಚುನಾವಣೆಯ ಮತದಾನಕ್ಕೆ ಇವಿಎಂಗಳನ್ನು ಬಳಸುವುದಿಲ್ಲ, ಯಾಕೆ ಗೊತ್ತಾ?

ಅಭ್ಯರ್ಥಿಗಳಿಗೆ ಈ ಪ್ರಾಶಸ್ತ್ಯಗಳನ್ನು ಮತದಾರರು 1,2,3, 4, 5 ಹೀಗೆ ಅಭ್ಯರ್ಥಿಗಳ ಹೆಸರಿನ ಮುಂದೆ ಗುರುತಿಸಬೇಕು.ಅದೇ ವೇಳೆ ಆದ್ಯತೆಯನ್ನು ಮತಪತ್ರದ ಕಾಲಂ 2ನಲ್ಲಿ ಗುರುತು ಹಾಕಬೇಕು. ಗರಿಷ್ಠ ಸಂಖ್ಯೆಯ ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಲಾಗುತ್ತದೆ.

Presidential Election 2022 ರಾಷ್ಟ್ರಪತಿ ಚುನಾವಣೆಯ ಮತದಾನಕ್ಕೆ ಇವಿಎಂಗಳನ್ನು ಬಳಸುವುದಿಲ್ಲ, ಯಾಕೆ ಗೊತ್ತಾ?
ಇವಿಎಂ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Jun 15, 2022 | 7:00 AM

2004 ರಿಂದ ನಾಲ್ಕು ಲೋಕಸಭಾ ಚುನಾವಣೆಗಳು ಮತ್ತು 127 ವಿಧಾನಸಭಾ ಚುನಾವಣೆಗಳಲ್ಲಿ ಬಳಸಲಾದ ವಿದ್ಯುನ್ಮಾನ ಮತಯಂತ್ರಗಳು ಅಥವಾ ಇವಿಎಂನ್ನು(EVM) ಭಾರತದ ರಾಷ್ಟ್ರಪತಿ (Presidential Election) ಮತ್ತು ಉಪರಾಷ್ಟ್ರಪತಿ, ರಾಜ್ಯಸಭಾ ಸದಸ್ಯರು ಮತ್ತು ರಾಜ್ಯ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣೆಗಳಲ್ಲಿ ಬಳಸುವುದಿಲ್ಲ. ಅದ್ಯಾಕೆ ಈ ಚುನಾವಣೆಗಳಲ್ಲಿ ಇವಿಎಂ ಬಳಸುವುದಿಲ್ಲ ಎಂದು ನೀವು ಯೋಚಿಸಿದ್ದರೆ, ಇಲ್ಲಿದೆ ಕಾರಣ. ಲೋಕಸಭೆ (Lok Sabha) ಮತ್ತು ರಾಜ್ಯ ವಿಧಾನಸಭೆಗಳಂತಹ ನೇರ ಚುನಾವಣೆಗಳಲ್ಲಿ ಮತಗಳ ಒಟ್ಟುಗೂಡಿಸುವ ತಂತ್ರಜ್ಞಾನವನ್ನು ಇವಿಎಂಗಳು ಆಧರಿಸಿವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ವಿರುದ್ಧ ಗುಂಡಿಯನ್ನು ಒತ್ತಿ ಮತ್ತು ಗರಿಷ್ಠ ಸಂಖ್ಯೆಯ ಮತಗಳನ್ನು ಗಳಿಸಿದವರನ್ನು ಚುನಾಯಿತ ಎಂದು ಘೋಷಿಸಲಾಗುತ್ತದೆ. ಆದರೆ ರಾಷ್ಟ್ರಪತಿ ಚುನಾವಣೆ ಒಂದೇ ವರ್ಗಾವಣೆ ಮತದ ವ್ಯವಸ್ಥೆಯನ್ನು ಅನುಸರಿಸುತ್ತವೆ ಮತ್ತು ಪ್ರಮಾಣಾನುಗುಣ ಪ್ರಾತಿನಿಧ್ಯದ ತತ್ವವನ್ನು ಆಧರಿಸಿದೆ. ಒಂದೇ ವರ್ಗಾವಣೆ ಮಾಡಬಹುದಾದ ಮತದ ಮೂಲಕ ಪ್ರಮಾಣಾನುಗುಣ ಪ್ರಾತಿನಿಧ್ಯದ ವ್ಯವಸ್ಥೆಗೆ ಅನುಗುಣವಾಗಿ, ಪ್ರತಿಯೊಬ್ಬ ಮತದಾರರು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿರುವಂತೆ ಅನೇಕ ಆದ್ಯತೆಗಳನ್ನು ಗುರುತಿಸಬಹುದು.

ಅಭ್ಯರ್ಥಿಗಳಿಗೆ ಈ ಪ್ರಾಶಸ್ತ್ಯಗಳನ್ನು ಮತದಾರರು 1,2,3, 4, 5 ಹೀಗೆ ಅಭ್ಯರ್ಥಿಗಳ ಹೆಸರಿನ ಮುಂದೆ ಗುರುತಿಸಬೇಕು.ಅದೇ ವೇಳೆ ಆದ್ಯತೆಯನ್ನು ಮತಪತ್ರದ ಕಾಲಂ 2ನಲ್ಲಿ ಗುರುತು ಹಾಕಬೇಕು. ಗರಿಷ್ಠ ಸಂಖ್ಯೆಯ ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಲಾಗುತ್ತದೆ. ಇವಿಎಂಗಳನ್ನು ಈ ಮತದಾನದ ವ್ಯವಸ್ಥೆಯನ್ನು ನೋಂದಾಯಿಸಲು ವಿನ್ಯಾಸಗೊಳಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇವಿಎಂ ಮತಗಳ ಸಂಗ್ರಾಹಕವಾಗಿದೆ ಮತ್ತು ಪ್ರಮಾಣಾನುಗುಣ ಪ್ರಾತಿನಿಧ್ಯದ ವ್ಯವಸ್ಥೆಯ ಅಡಿಯಲ್ಲಿ, ಯಂತ್ರವು ಆದ್ಯತೆಯ ಆಧಾರದ ಮೇಲೆ ಮತಗಳನ್ನು ಲೆಕ್ಕಾಚಾರ ಮಾಡಬೇಕಾಗುತ್ತದೆ. ಇದಕ್ಕೆ ಸಂಪೂರ್ಣವಾಗಿ ವಿಭಿನ್ನ ತಂತ್ರಜ್ಞಾನದ ಅಗತ್ಯವಿರುತ್ತದೆ. ಅಂದರೆ ಈ ಚುನಾವಣೆಗೆ ಬೇರೆಯೇ ರೀತಿಯ ಇವಿಎಂ ಅಗತ್ಯವಿದೆ.

ಚುನಾವಣಾ ಆಯೋಗದ ತ್ರೈಮಾಸಿಕ ನಿಯತಕಾಲಿಕೆ ‘ಮೈ ವೋಟ್ ಮ್ಯಾಟರ್ಸ್’ನ ಆಗಸ್ಟ್, 2021 ರ ಸಂಚಿಕೆ ಪ್ರಕಾರ, 2004 ರಿಂದ ನಾಲ್ಕು ಲೋಕಸಭೆ ಮತ್ತು 127 ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂಗಳನ್ನು ಬಳಸಲಾಗಿದೆ.

ಇದನ್ನೂ ಓದಿ
Image
ರಾಷ್ಟ್ರಪತಿ ಚುನಾವಣೆ ಬಗ್ಗೆ ನಡೆಯಲಿರುವ ವಿಪಕ್ಷಗಳ ಸಭೆಗೆ ಮುನ್ನ ಶರದ್ ಪವಾರ್​​ನ್ನು ಭೇಟಿ ಮಾಡಿದ ಮಮತಾ ಬ್ಯಾನರ್ಜಿ
Image
Presidential Polls 2022 ರಾಷ್ಟ್ರಪತಿ ಚುನಾವಣೆಯ ರೇಸ್​​ನಲ್ಲಿ ಇಲ್ಲ ಎಂದ ಶರದ್​​ ಪವಾರ್​​
Image
EC on President Election 2022 Date ರಾಷ್ಟ್ರಪತಿ ಚುನಾವಣೆ: ಜುಲೈ 18ಕ್ಕೆ ಮತದಾನ, 21ಕ್ಕೆ ಮತ ಎಣಿಕೆ

ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ ಚುನಾವಣಾ ಆಯೋಗದಲ್ಲಿ 1977 ರಲ್ಲಿ ಮೊದಲ ಬಾರಿಗೆ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL), ಹೈದರಾಬಾದ್‌ಗೆ ಇವಿಎಂ ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸುವ ಕಾರ್ಯವನ್ನು ನಿಯೋಜಿಸಲಾಗಿದೆ. 1979 ರಲ್ಲಿ ಒಂದು ಮೂಲಮಾದರಿಯನ್ನು ಅಭಿವೃದ್ಧಿಪಡಿಸಲಾಯಿತು, ಇದನ್ನು ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಮುಂದೆ ಆಗಸ್ಟ್ 6, 1980 ರಂದು ಪ್ರದರ್ಶಿಸಿತು. ಇವಿಎಂ ತಯಾರಿಸಲುಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ಮತ್ತು ಮತ್ತೊಂದು ಸಾರ್ವಜನಿಕ ವಲಯದ ಉದ್ಯಮವನ್ನು ECIL ಜೊತೆಗೆ ಸಹ-ಆಯ್ಕೆ ಮಾಡಲಾಯಿತು.

ಮೇ, 1982 ರಲ್ಲಿ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈ ಯಂತ್ರಗಳನ್ನು ಮೊದಲು ಬಳಸಲಾಯಿತು. ಆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಸಿ. ಜೋಸ್ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಶಿವನ್ ಪಿಳ್ಳೈ ವಿರುದ್ಧ ಚುನಾವಣೆಯಲ್ಲಿ ಸೋತ ನಂತರ ಇವಿಎಂಗಳ ಬಳಕೆಯನ್ನು ಪ್ರಶ್ನಿಸಲು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತರುವಾಯ1989 ರಲ್ಲಿ, ಸಂಸತ್ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಗಾಗಿ ನಿಬಂಧನೆಯನ್ನು ರಚಿಸಲು 1951 ರ ಜನತಾ ಪ್ರಾತಿನಿಧ್ಯ ಕಾಯಿದೆಗೆ ತಿದ್ದುಪಡಿ ಮಾಡಿತು.

ಇದರ ಪರಿಚಯದ ಬಗ್ಗೆ ಸಾಮಾನ್ಯ ಒಮ್ಮತವನ್ನು 1998ರಲ್ಲಿ ದಕ್ಕಿದ್ದು ಮಧ್ಯಪ್ರದೇಶ, ರಾಜಸ್ಥಾನ ಮತ್ತು ದೆಹಲಿಯ ಮೂರು ರಾಜ್ಯಗಳಲ್ಲಿನ 25 ವಿಧಾನಸಭಾ ಕ್ಷೇತ್ರಗಳಲ್ಲಿ ಇದನ್ನು ಬಳಸಲಾಯಿತು. ತಮಿಳುನಾಡು, ಕೇರಳ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಮೇ 2001 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂಗಳನ್ನು ಬಳಸಲಾಯಿತು. ಅಂದಿನಿಂದ, ಪ್ರತಿ ರಾಜ್ಯ ವಿಧಾನಸಭಾ ಚುನಾವಣೆಗೆ ಆಯೋಗವು ಇವಿಎಂಗಳನ್ನು ಬಳಸುತ್ತಿದೆ. 2004ರ ಲೋಕಸಭೆ ಚುನಾವಣೆಯಲ್ಲಿ ದೇಶದ ಎಲ್ಲಾ 543 ಸಂಸದೀಯ ಕ್ಷೇತ್ರಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಇವಿಎಂಗಳನ್ನು ಬಳಸಲಾಗಿತ್ತು.

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ